ದೇವೇಗೌಡರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ವಿವಾದ ಇತ್ಯರ್ಥ: ಪೇಜಾವರ ಶ್ರೀ


Team Udayavani, May 15, 2019, 3:08 AM IST

devegowda

ಉಡುಪಿ: “ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ ಕಲ್ಯಾಣಮಂಟಪದಲ್ಲಿ ಜನ್ಮನಕ್ಷತ್ರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ಪೇಜಾವರ ಶ್ರೀಗಳು ಆಶೀರ್ವಚನ ನೀಡಿದರು.

“ದೇವೇಗೌಡ ಅವರು ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಅವರು ರಾಜ್ಯದ ಪ್ರಾಮಾಣಿಕ, ಹೆಮ್ಮೆಯ ರಾಜಕಾರಣಿ. ಅವರು ಪ್ರಧಾನಿಯಾಗಿದ್ದಾಗ ಹೊಸದಿಲ್ಲಿಯಲ್ಲಿ ಮಠಕ್ಕೆಂದು ಒಂದು ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿದ್ದರು. ಅದರಲ್ಲಿ ಮಠ ಆಗಿದೆ. ಜುಲೈನಲ್ಲಿ ಸಂಶೋಧನಾ ಕೇಂದ್ರ ಆರಂಭಗೊಳ್ಳಲಿದೆ’ ಎಂದು ಶ್ರೀಗಳು ಹೇಳಿದರು. ದಂಪತಿಗೆ ಶ್ರೀಕೃಷ್ಣ ಪೂರ್ಣ ಅನುಗ್ರಹ ನೀಡಲಿ ಎಂದು ಹರಸಿದರು.

ಮಂತ್ರಾಕ್ಷತೆ ಪಡೆದು ಜೈಲಿಗೆ: “ತುರ್ತುಪರಿಸ್ಥಿತಿ ಸಂದರ್ಭ ಹೊಳೆನರಸೀಪುರದಲ್ಲಿ ದೇವೇಗೌಡರು ಜೈಲಿಗೆ ಹೋಗುವ ಮೊದಲು ನನ್ನಿಂದ ಮಂತ್ರಾಕ್ಷತೆ ಪಡೆದುಕೊಂಡಿದ್ದರು. ನಾನು ಕೂಡ ತುರ್ತುಪರಿಸ್ಥಿತಿ ವಿರುದ್ಧ ಇಂದಿರಾ ಗಾಂಧಿ ಅವರಿಗೆ ಉಗ್ರವಾಗಿ ಪತ್ರ ಬರೆದಿದ್ದೆ. ನನ್ನನ್ನೂ ಬಂಧಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ ಹಾಗಾಗಲಿಲ್ಲ. ನಾನು ತುರ್ತುಪರಿಸ್ಥಿತಿ ವಿರುದ್ಧ ಗುಪ್ತವಾಗಿಯೂ ಪ್ರವಚನ ನೀಡುತ್ತಿದ್ದೆ ಎಂದು ಪೇಜಾವರ ಶ್ರೀಗಳು ಸ್ಮರಿಸಿಕೊಂಡರು.

ಉಡುಪಿ ಶ್ರೀ ಗೋವಿಂದ ಕಲ್ಯಾಣಮಂಟಪದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಸಮಾರಂಭದ ಪ್ರಯುಕ್ತ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಗಳು ಶಾಲು, ಹಾರ ಹಾಕಿ ಆಶೀರ್ವಚಿಸಿದರು.

ಅನ್ನಪ್ರಸಾದ ಸ್ವೀಕಾರ: ದೇವೇಗೌಡರು ಪೇಜಾವರ ಶ್ರೀಗಳ ಜತೆಗೆ ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಕಲ್ಯಾಣ ಮಂಟಪದಲ್ಲಿಯೇ ಪೂರಿ, ಬೆಳ್ತಿಗೆ ಅನ್ನ, ಮೊಸರು, ಒಂದೆರಡು ಬಗೆಯ ಸಿಹಿ ತಿನಿಸುಗಳನ್ನೊಳಗೊಂಡ ಅನ್ನಪ್ರಸಾದ ಸ್ವೀಕರಿಸಿದರು.

ಇದಕ್ಕಿಂತ ಒಂದು ತಾಸು ಮೊದಲು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅವರು ಅಲ್ಲಿಯೂ ಶ್ರೀಕೃಷ್ಣನ ಪ್ರಸಾದ ರೂಪವಾಗಿ ಅನ್ನ, ಸಾರು, ಮಜ್ಜಿಗೆ, ಪಾಯಸ, ಸ್ವಲ್ಪ ಸಿಹಿತಿನಿಸು ಸೇವಿಸಿದರು. ಪೇಜಾವರ ಶ್ರೀಗಳ ಮೇಲಿನ ಗೌರವದಿಂದ ದೇವೇಗೌಡರು ಮಧ್ಯಾಹ್ನ ಎರಡನೇ ಬಾರಿ ಪ್ರಸಾದ ರೂಪದ ಭೋಜನ ಸ್ವೀಕರಿಸಿದರು ಎಂದು ತಿಳಿದುಬಂದಿದೆ.

ರಾಜಕೀಯ ಮಾತನಾಡಿಲ್ಲ: ದೇವೇಗೌಡರು ಆಶೀರ್ವಾದ ಪಡೆದು ತೆರಳಿದ ಅನಂತರ ಪೇಜಾವರ ಶ್ರೀಗಳನ್ನು ಪತ್ರಕರ್ತರು ಮಾತನಾಡಿಸಿದಾಗ, “ನಾವಿಬ್ಬರೂ ರಾಜಕೀಯದ ಬಗ್ಗೆ ಮಾತನಾಡಿಲ್ಲ. ಕಲಿಯುಗದಲ್ಲಿ ಕೃಷ್ಣ ವಿಶೇಷ. ಮಧ್ವಾಚಾರ್ಯರ ಬಗ್ಗೆ ಬನ್ನಂಜೆ ಗೋವಿಂದಾಚಾರ್ಯ ಅವರು ಬರೆದ ಪುಸ್ತಕವನ್ನು ಓದುತ್ತಿದ್ದೇನೆ ಎಂದು ದೇವೇಗೌಡ ತಿಳಿಸಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದು ಹಿಂದಿರುಗುವ ವೇಳೆ ಸುದ್ದಿಗಾರರು ದೇವೇಗೌಡ ಅವರನ್ನು ಮಾತನಾಡಿಸಲು ಯತ್ನಿಸಿದರು. ಆದರೆ ಅವರು, ನಾನು ಪೇಜಾವರ ಶ್ರೀಗಳಿಗೆ ಗೌರವ ಅರ್ಪಿಸಿ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದಷ್ಟೆ ಪ್ರತಿಕ್ರಿಯಿಸಿ ತೆರಳಿದರು.

ಶ್ರೀಕೃಷ್ಣ ಮಠಕ್ಕೆ ಭೇಟಿ: ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ಶ್ರೀಪಾದರ ಕಾರ್ಯದರ್ಶಿ ಗಿರೀಶ್‌ ಉಪಾಧ್ಯಾಯ, ಮಠದ ಪಿಆರ್‌ಒ ಶ್ರೀಶ ಕಡೆಕಾರ್‌, ಜೆಡಿಎಸ್‌ ಮುಖಂಡ ವಾಸುದೇವ ರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.