ದೇವೇಗೌಡರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ವಿವಾದ ಇತ್ಯರ್ಥ: ಪೇಜಾವರ ಶ್ರೀ


Team Udayavani, May 15, 2019, 3:08 AM IST

devegowda

ಉಡುಪಿ: “ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ ಕಲ್ಯಾಣಮಂಟಪದಲ್ಲಿ ಜನ್ಮನಕ್ಷತ್ರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ಪೇಜಾವರ ಶ್ರೀಗಳು ಆಶೀರ್ವಚನ ನೀಡಿದರು.

“ದೇವೇಗೌಡ ಅವರು ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಅವರು ರಾಜ್ಯದ ಪ್ರಾಮಾಣಿಕ, ಹೆಮ್ಮೆಯ ರಾಜಕಾರಣಿ. ಅವರು ಪ್ರಧಾನಿಯಾಗಿದ್ದಾಗ ಹೊಸದಿಲ್ಲಿಯಲ್ಲಿ ಮಠಕ್ಕೆಂದು ಒಂದು ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿದ್ದರು. ಅದರಲ್ಲಿ ಮಠ ಆಗಿದೆ. ಜುಲೈನಲ್ಲಿ ಸಂಶೋಧನಾ ಕೇಂದ್ರ ಆರಂಭಗೊಳ್ಳಲಿದೆ’ ಎಂದು ಶ್ರೀಗಳು ಹೇಳಿದರು. ದಂಪತಿಗೆ ಶ್ರೀಕೃಷ್ಣ ಪೂರ್ಣ ಅನುಗ್ರಹ ನೀಡಲಿ ಎಂದು ಹರಸಿದರು.

ಮಂತ್ರಾಕ್ಷತೆ ಪಡೆದು ಜೈಲಿಗೆ: “ತುರ್ತುಪರಿಸ್ಥಿತಿ ಸಂದರ್ಭ ಹೊಳೆನರಸೀಪುರದಲ್ಲಿ ದೇವೇಗೌಡರು ಜೈಲಿಗೆ ಹೋಗುವ ಮೊದಲು ನನ್ನಿಂದ ಮಂತ್ರಾಕ್ಷತೆ ಪಡೆದುಕೊಂಡಿದ್ದರು. ನಾನು ಕೂಡ ತುರ್ತುಪರಿಸ್ಥಿತಿ ವಿರುದ್ಧ ಇಂದಿರಾ ಗಾಂಧಿ ಅವರಿಗೆ ಉಗ್ರವಾಗಿ ಪತ್ರ ಬರೆದಿದ್ದೆ. ನನ್ನನ್ನೂ ಬಂಧಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ ಹಾಗಾಗಲಿಲ್ಲ. ನಾನು ತುರ್ತುಪರಿಸ್ಥಿತಿ ವಿರುದ್ಧ ಗುಪ್ತವಾಗಿಯೂ ಪ್ರವಚನ ನೀಡುತ್ತಿದ್ದೆ ಎಂದು ಪೇಜಾವರ ಶ್ರೀಗಳು ಸ್ಮರಿಸಿಕೊಂಡರು.

ಉಡುಪಿ ಶ್ರೀ ಗೋವಿಂದ ಕಲ್ಯಾಣಮಂಟಪದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಸಮಾರಂಭದ ಪ್ರಯುಕ್ತ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಗಳು ಶಾಲು, ಹಾರ ಹಾಕಿ ಆಶೀರ್ವಚಿಸಿದರು.

ಅನ್ನಪ್ರಸಾದ ಸ್ವೀಕಾರ: ದೇವೇಗೌಡರು ಪೇಜಾವರ ಶ್ರೀಗಳ ಜತೆಗೆ ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಕಲ್ಯಾಣ ಮಂಟಪದಲ್ಲಿಯೇ ಪೂರಿ, ಬೆಳ್ತಿಗೆ ಅನ್ನ, ಮೊಸರು, ಒಂದೆರಡು ಬಗೆಯ ಸಿಹಿ ತಿನಿಸುಗಳನ್ನೊಳಗೊಂಡ ಅನ್ನಪ್ರಸಾದ ಸ್ವೀಕರಿಸಿದರು.

ಇದಕ್ಕಿಂತ ಒಂದು ತಾಸು ಮೊದಲು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅವರು ಅಲ್ಲಿಯೂ ಶ್ರೀಕೃಷ್ಣನ ಪ್ರಸಾದ ರೂಪವಾಗಿ ಅನ್ನ, ಸಾರು, ಮಜ್ಜಿಗೆ, ಪಾಯಸ, ಸ್ವಲ್ಪ ಸಿಹಿತಿನಿಸು ಸೇವಿಸಿದರು. ಪೇಜಾವರ ಶ್ರೀಗಳ ಮೇಲಿನ ಗೌರವದಿಂದ ದೇವೇಗೌಡರು ಮಧ್ಯಾಹ್ನ ಎರಡನೇ ಬಾರಿ ಪ್ರಸಾದ ರೂಪದ ಭೋಜನ ಸ್ವೀಕರಿಸಿದರು ಎಂದು ತಿಳಿದುಬಂದಿದೆ.

ರಾಜಕೀಯ ಮಾತನಾಡಿಲ್ಲ: ದೇವೇಗೌಡರು ಆಶೀರ್ವಾದ ಪಡೆದು ತೆರಳಿದ ಅನಂತರ ಪೇಜಾವರ ಶ್ರೀಗಳನ್ನು ಪತ್ರಕರ್ತರು ಮಾತನಾಡಿಸಿದಾಗ, “ನಾವಿಬ್ಬರೂ ರಾಜಕೀಯದ ಬಗ್ಗೆ ಮಾತನಾಡಿಲ್ಲ. ಕಲಿಯುಗದಲ್ಲಿ ಕೃಷ್ಣ ವಿಶೇಷ. ಮಧ್ವಾಚಾರ್ಯರ ಬಗ್ಗೆ ಬನ್ನಂಜೆ ಗೋವಿಂದಾಚಾರ್ಯ ಅವರು ಬರೆದ ಪುಸ್ತಕವನ್ನು ಓದುತ್ತಿದ್ದೇನೆ ಎಂದು ದೇವೇಗೌಡ ತಿಳಿಸಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದು ಹಿಂದಿರುಗುವ ವೇಳೆ ಸುದ್ದಿಗಾರರು ದೇವೇಗೌಡ ಅವರನ್ನು ಮಾತನಾಡಿಸಲು ಯತ್ನಿಸಿದರು. ಆದರೆ ಅವರು, ನಾನು ಪೇಜಾವರ ಶ್ರೀಗಳಿಗೆ ಗೌರವ ಅರ್ಪಿಸಿ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದಷ್ಟೆ ಪ್ರತಿಕ್ರಿಯಿಸಿ ತೆರಳಿದರು.

ಶ್ರೀಕೃಷ್ಣ ಮಠಕ್ಕೆ ಭೇಟಿ: ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ಶ್ರೀಪಾದರ ಕಾರ್ಯದರ್ಶಿ ಗಿರೀಶ್‌ ಉಪಾಧ್ಯಾಯ, ಮಠದ ಪಿಆರ್‌ಒ ಶ್ರೀಶ ಕಡೆಕಾರ್‌, ಜೆಡಿಎಸ್‌ ಮುಖಂಡ ವಾಸುದೇವ ರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.