ಡೀಸೆಲ್‌ ಕಳ್ಳತನವಾದ್ರೆ ಎಸ್‌ಎಂಎಸ್‌ ಬರುತ್ತೆ!


Team Udayavani, Feb 26, 2020, 3:06 AM IST

desel-kalla

ಬೆಂಗಳೂರು: ನಿಮ್ಮ ವಾಹನದಲ್ಲಿ ಡೀಸೆಲ್‌ ಕಳ್ಳತನ ಮಾಡಿದರೆ, ಮೊಬೈಲ್‌ಗೇ ಎಸ್‌ಎಂಎಸ್‌ ಬರುತ್ತದೆ. ಅಷ್ಟೇ ಯಾಕೆ, ವಾಹನದ ಕ್ಷಣ-ಕ್ಷಣ ಮಾಹಿತಿ ಹಾಗೂ ಚಾಲಕನ ಚಾಲನಾ ವೈಖರಿ ಕೂಡ ಬೆರಳ ತುದಿಯಲ್ಲೇ ತಿಳಿಯಬಹುದು.

– ಪ್ರತಿಷ್ಠಿತ ರಾಯಲ್‌ ಟಚ್‌ ಶೆಲ್‌ ಸಂಸ್ಥೆಯು “ಶೆಲ್‌ ಫ್ಲೀಟ್‌ ಸಲ್ಯೂಷನ್ಸ್‌’ ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಇದರಿಂದ ವಾಹನಗಳ ಮಾಲೀಕರು, ಕುಳಿತಲ್ಲಿಯೇ ವಾಹನಗಳ ಮೇಲೆ ನಿಗಾ ಇಡಬಹುದು. ಪೆಟ್ರೋಲ್‌ ಅಥವಾ ಡೀಸೆಲ್‌ ಕಳ್ಳತನಕ್ಕೂ ಕಡಿವಾಣ ಹಾಕಬಹುದು. ಈ ಮೂಲಕ ವಾಹನಗಳ ನಿರ್ವಹಣಾ ವೆಚ್ಚವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಬಹುದು.

ಟೆಲಿಮ್ಯಾಟಿಕ್ಸ್‌ ವ್ಯವಸ್ಥೆ ಇದಾಗಿದ್ದು, ಜಿಪಿಎಸ್‌ ಆಧಾರಿತ ಈ ಡಿವೈಸನ್ನು ವಾಹನದ ಟ್ಯಾಂಕ್‌ ಕೆಳಗೆ ಅಳವಡಿಸಲಾಗುತ್ತದೆ. ಅದನ್ನು ವಾಹನ ಮಾಲೀಕರ ಮೊಬೈಲ್‌ ನಂಬರ್‌ಗೆ ಜೋಡಣೆ ಮಾಡಲಾಗುತ್ತದೆ. ಇದರಿಂದ ಆಯಾ ಸರಕು ಸಾಗಣೆ ವಾಹನದ ಮೇಲೆ ದಿನದ 24 ಗಂಟೆಯೂ ನಿಗಾ ಇಡಬಹುದು. ಈ ಸಂಬಂಧ ಮೊಬೈಲ್‌ ಅಪ್ಲಿಕೇಷನ್‌ ಅನ್ನೂ ಪರಿಚಯಿಸಲಾಗಿದೆ. ಈ ಟೆಲಿಮ್ಯಾಟಿಕ್ಸ್‌ ವ್ಯವಸ್ಥೆಯು ಶೆಲ್‌ ಪೆಟ್ರೋಲ್‌ ಬಂಕ್‌ಗಳಲ್ಲಿ ಲಭ್ಯ.

ಆಟೋಮೆಟಿಕ್‌ ಮೈಲೇಜ್‌ ರಿಪೋರ್ಟಿಂಗ್‌, ಇಂಧನ ಮಟ್ಟದ ನಿಖರ ಮಾಹಿತಿ, ಮಾರ್ಗ ಬದಲಾವಣೆ ಮಾಡಿದರೆ ಅಲಾರಾಮ್‌, ಅನಧಿಕೃತ ನಿಲುಗಡೆ, ರಸ್ತೆ ತೆರಿಗೆ ಪಾವತಿ, ವಾಹನ ವಿಮೆ, ಪರ್ವಿಟ್‌ ಅವಧಿ ಮುಗಿಯುವುದಿದ್ದರೆ ಮಾಹಿತಿ ನೀಡುವುದು ಸೇರಿ ಹಲವಾರು ಉಪಯುಕ್ತ ಅಂಶಗಳನ್ನು ಈ ವ್ಯವಸ್ಥೆ ಒಳಗೊಂಡಿದೆ. ಆಯಾ ಸಾಮರ್ಥ್ಯಕ್ಕೆ ತಕ್ಕಂತೆ ದರ ನಿಗದಿಪಡಿಸಲಾಗಿದೆ. ಮಂಗಳವಾರ ನಗರದ ಹೋಟೆಲ್‌ ಜೆ.ಡಬು. ಮೇರಿಯಟ್‌ನಲ್ಲಿ ಈ ವಿನೂತನ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

ಇದೇ ವೇಳೆ ಶೆಲ್‌ ಫ್ಲೀಟ್‌ ಪ್ರಿಪೇಯ್ಡ ಕಾರ್ಡ್‌ ಕೂಡ ಬಿಡುಗಡೆ ಮಾಡಲಾಯಿತು. ನಂತರ ಮಾತನಾಡಿದ ಶೆಲ್‌ನ ಫ್ಲೀಟ್‌ ಸಲ್ಯೂಷನ್ಸ್‌ ಲಿ., ಪ್ರಧಾನ ವ್ಯವಸ್ಥಾಪಕ ಝೇನ್‌ ಹಾಕ್‌, ಫ್ಲೀಟ್‌ ಮ್ಯಾನೇಜ್‌ಮೆಂಟ್‌ನಲ್ಲಿ ವಿಸ್ತಾರವಾದ ಅನುಭವವನ್ನು ಶೆಲ್‌ ಹೊಂದಿದ್ದು, 30ಕ್ಕೂ ಹೆಚ್ಚು ದೇಶಗಳಲ್ಲಿ ಇದು ತನ್ನದೇ ಆದ ಛಾಪು ಮೂಡಿಸಿದೆ. ಜಾಗತಿಕ ಮಟ್ಟದಲ್ಲಿ ಸರಕು ಸಾಗಣೆಯಲ್ಲಿನ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡುವ ನಿಟ್ಟಿನಲ್ಲಿ ಅತ್ಯಾಧುನಿಕ ವ್ಯವಸ್ಥೆ ಪರಿಚಯಿಸಲಾಗಿದೆ ಎಂದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.