ರಾಜ್ಯದಲ್ಲಿಯೂ ಮೂರು ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ದರೆ ತೀವ್ರ ಹೋರಾಟ: ಹಿರೇಮಠ

ಸಂಯುಕ್ತ ಕಿಸಾನ್‌ ಮೋರ್ಚಾ ಮಾದರಿಯಲ್ಲಿ ಬೆಳಗಾವಿಯಲ್ಲಿ ಹೋರಾಟ ನಡೆಸುವ ಬಗ್ಗೆ ಗಂಭೀರ ಚಿಂತನೆ

Team Udayavani, Feb 1, 2022, 6:12 PM IST

ರಾಜ್ಯದಲ್ಲಿಯೂ ಮೂರು ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ದರೆ ತೀವ್ರ ಹೋರಾಟ: ಹಿರೇಮಠ

ಬೆಳಗಾವಿ: ರಾಜ್ಯದಲ್ಲಿ ಮೂರು ಕರಾಳ ಕೃಷಿ ಕಾಯ್ದೆ ಸರ್ಕಾರ ಹಿಂಪಡೆಯದಿದ್ದರೆ ಅಹಿಂಸಾತ್ಮಕ ಹೋರಾಟ ನಡೆಸಲಾಗುವುದು. ಜತೆಗೆ ಬಿಜೆಪಿ ಶಾಸಕರ ಮೇಲೆ ಒತ್ತಡ ಹಾಕಲಾಗುವುದು ಎಂದು ಸಮಾಜ ಪರಿವರ್ತನಾ ಸಮಾಜದ ಅಧ್ಯಕ್ಷ ಎಸ್‌.ಆರ್‌. ಹಿರೇಮಠ ಎಚ್ಚರಿಕೆ ನೀಡಿದರು.

ನಗರದಲ್ಲಿ ಸೋಮವಾರ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ತಡೆ ಹಾಗೂ ಸಂರಕ್ಷಣಾ ಕಾಯ್ದೆ ಹಿಂಪಡೆಯಬೇಕು. ಖಾಸಗೀಕರಣಕ್ಕೆ ಆಸ್ಪದ ನೀಡಬಾರದು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಹೇಳಿದರು.

ಜನಾಂದೋಲನ ಮಹಾಮೈತ್ರಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ರಾಜ್ಯದ ಬಜೆಟ್‌ ಗಮನದಲ್ಲಿ ಇಟ್ಟುಕೊಂಡು ಬೀದರ ಜಿಲ್ಲೆಯ ಬಸವಕಲ್ಯಾಣ ಅನುಭವ ಮಂಟಪದಿಂದ ಬೆಂಗಳೂರುವರೆಗೆ, ಚಾಮರಾಜನಗರ ಜಿಲ್ಲೆಯ ಮಲೆ ಮಹಾದ್ವೇಶ್ವರ ಬೆಟ್ಟದಿಂದ ಬೆಂಗಳೂರುವರೆಗೆ ಜಾಥಾ ಹಮ್ಮಿಕೊಳ್ಳಲಾಗುವುದು. ಈ ಕಾಯ್ದೆಗಳ ರದ್ದತಿಗಾಗಿ ಮತ್ತು ಬೆಳೆಗೆ ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದರು.

ಬೆಳಗಾವಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಪರ್ಯಾಯವಾಗಿ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಆರಂಭಿಸಲಾಗಿದೆ. ಕೂಡಲೇ ಈ ಜೈ ಕಿಸಾನ್‌ ಸಗಟು ಮಾರುಕಟ್ಟೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ ಅವರು, ಪಂಚರಾಜ್ಯ ಚುನಾವಣೆ ಫಲಿತಾಂಶಕ್ಕೆ ಹೆದರಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್‌ ಪಡೆದಿದೆ. ಕೇಂದ್ರ ಸರ್ಕಾರ ಎಂಎಸ್‌ಪಿ ಬಗ್ಗೆ ಸಮಿತಿ ಮಾಡುವುದಾಗಿ ಹೇಳಿದರೂ ಇದುವರೆಗೆ ಮಾಡಿಲ್ಲ.

ರಾಜ್ಯದಲ್ಲಿ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಹಿಂಪಡೆಯಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಹಾಸುಹೊಕ್ಕಾಗಿವೆ. ರೈತ ವಿರೋ ಧಿ ಕಾಯ್ದೆಗೆ ಸಿದ್ದರಾಮಯ್ಯ, ಯಡಿಯೂರಪ್ಪ ಇಬ್ಬರೂ ಹೊಣೆಗಾರರಿದ್ದಾರೆ. ಈ ಕಾಯ್ದೆಗಳನ್ನು ಕಿತ್ತೂಗೆಯುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿ, ಜೈ ಕಿಸಾನ್‌ ಸಗಟು ತರಕಾರಿ ಮರ್ಚಂಟ್‌ ಅಸೋಸಿಯೇಷನ್‌ ಖಾಸಗಿ ಮಾರುಕಟ್ಟೆ ಇಲ್ಲಿಯ ಗಾಂ ಧಿ ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆರಂಭಿಸಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಈ ಮಾರುಕಟ್ಟೆ ರದ್ದುಗೊಳಿಸಿ ಎಪಿಎಂಸಿ ಮಾರುಕಟ್ಟೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರು, ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಜ. 11ರಂದು ಸಭೆ ನಡೆಸಿದರೂ ಜಿಲ್ಲಾ ಧಿಕಾರಿಗಳು ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈವರೆಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಖಾಸಗಿ ಮಾರುಕಟ್ಟೆ ವಿರುದ್ಧ ರಾಜ್ಯದ ರೈತಪರ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಮಹಿಳಾ, ಯುವಜನ, ಸಾಮಾಜಿ ಹೋರಾಟಗಾರರ ನೇತೃತ್ವದಲ್ಲಿ ರಾಜ್ಯ ಮಟ್ಟದ ಹೋರಾಟದ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುವುದು. ಎಲ್ಲ ಜಿಲ್ಲಾ-ತಾಲೂಕು, ಗ್ರಾಮ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ದೆಹಲಿಯ ಸಂಯುಕ್ತ ಕಿಸಾನ್‌ ಮೋರ್ಚಾ ಮಾದರಿಯಲ್ಲಿ ಬೆಳಗಾವಿಯಲ್ಲಿ ಹೋರಾಟ ನಡೆಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಕಾರ್ಯದರ್ಶಿ ರವಿಕಿರಣ ಪೂಣಜ, ಭೂಮಿ ಹಾಗೂ ವಸತಿ ವಂಚಿತರ ಸಂಘದ ಅಧ್ಯಕ್ಷ ಸಿರಿಮನೆ ನಾಗರಾಜ, ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯ ಟಿ.ಯಶವಂತ, ಎಐಸಿಇಟಿಯು ಸದಸ್ಯ ಪಿಆರ್‌ ಎಸ್‌ ಮಣಿ, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ವರದರಾಜೇಂದ್ರ ಸೇರಿದಂತೆ ಇತರರು ಇದ್ದರು. ನಂತರ ಸಂಘಟನೆಗಳ ಪ್ರಮುಖರು ನಗರದ ಎಪಿಎಂಸಿ ಸಗಟು ಮಾರುಕಟ್ಟೆ ಆವರಣದಲ್ಲಿ ಎಪಿಎಂಸಿ ಅಧ್ಯಕ್ಷರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರಾಜ್ಯದಲ್ಲಿ 20 ಪರ್ಸೆಂಟ್‌ ಇದ್ದ ಕ್ರಿಮಿನಾಲಿಟಿ ಈಗ 40 ಪರ್ಸೆಂಟ್‌ ಗೆ ಹೆಚ್ಚಾಗಿದೆ. ಜೆಸಿಬಿ(ಜೆಡಿಎಸ್‌-ಕಾಂಗ್ರೆಸ್‌ -ಬಿಜೆಪಿ) ಪಕ್ಷಗಳನ್ನು ಹಠಾವೋ ಮಾಡಿದರೆ
ಮಾತ್ರ ಜನರಿಗೆ ನ್ಯಾಯ ಸಿಗಲಿದೆ. ಕರಾಳ ಕೃಷಿ ಕಾಯ್ದೆಗಳು ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ. ಕೂಡಲೇ ಸರ್ಕಾರ ಕಾಯ್ದೆ ಹಿಂಪಡೆದು ರೈತರ ಬೆನ್ನಿಗೆ ನಿಲ್ಲಬೇಕು.
ಎಸ್‌.ಆರ್‌. ಹಿರೇಮಠ, ಅಧ್ಯಕ್ಷರು, ಸಮಾಜ
ಪರಿವರ್ತನಾ ಸಮುದಾಯ

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.