Telangana: ಗೆದ್ದರೆ 6 ತಿಂಗಳಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ- BJP ಪ್ರಣಾಳಿಕೆ 


Team Udayavani, Nov 18, 2023, 10:34 PM IST

telangana bjp

ಹೈದರಾಬಾದ್‌: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಆರು ತಿಂಗಳ ಒಳಗಾಗಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ.

ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, “ಬಿಜೆಪಿ ಸರ್ಕಾರ ರಚನೆಯಾದ ಕೂಡಲೇ ಸಮಾನ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿಯನ್ನು ರಚಿಸಲಾಗುವುದು. ಆರು ತಿಂಗಳ ಒಳಗಾಗಿ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯಲ್ಲಿರುವ ಪ್ರಮುಖಾಂಶಗಳು:

ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌, ಒಬಿಸಿ, ಎಸ್‌ಸಿ/ಎಸ್‌ಟಿ ಮೀಸಲು ಹೆಚ್ಚಳ, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವ್ಯಾಟ್‌ ಕಡಿತ, ಉಜ್ವಲ ಯೋಜನೆಯ ಫ‌ಲನುಭವಿಗಳಿಗೆ ವರ್ಷಕ್ಕೆ ನಾಲ್ಕು ಉಚಿತ ಸಿಲಿಂಡರ್‌ಗಳು, ಪ್ರತಿ ಕ್ವಿಂಟಲ್‌ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ 3,100 ರೂ.ಗೆ ಏರಿಕೆ, ಬೀಜ ಮತ್ತು ರಸಗೊಬ್ಬರ ಖರೀದಿಸಲು ಸಣ್ಣ ರೈತರಿಗೆ 2,500 ರೂ. ಅನುದಾನ ನೀಡಲಾಗುತ್ತದೆ.

ಭಾಗ್ಯ ಲಕ್ಷ್ಮೀ ಮಾದರಿ:
ಕರ್ನಾಟಕದಲ್ಲಿ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ್ದ ಭಾಗ್ಯಲಕ್ಷ್ಮೀ ಯೋಜನೆ ಮಾದರಿಯಲ್ಲಿ ಹೆಣ್ಣು ಮಗು ಜನಿಸಿದ ಸಂದರ್ಭದಲ್ಲಿ 2 ಲಕ್ಷ ರೂ. ಸ್ಥಿರ ಠೇವಣಿ, ಹೆಣ್ಣು ಮಗು 21 ವರ್ಷಕ್ಕೆ ಬಂದ ಸಂದರ್ಭದಲ್ಲಿ ಬಡ್ಡಿ ಸಮೇತ ಹಣ ಪಾವತಿ, ಪ್ರತಿ ವರ್ಷ ಸೆ.17ರಂದು “ಹೈದರಾಬಾದ್‌ ವಿಮೋಚನಾ ದಿನಾ’ ಆಚರಣೆ, ಮಹಿಳೆಯರಿಗಾಗಿ 10 ಲಕ್ಷ ಉದ್ಯೋಗ ಸೃಷ್ಟಿ, ಇವು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ.

ತನಿಖೆಯ ವಾಗ್ಧಾನ:
ಇದೇ ವೇಳೆ ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಂದಿನ ಬಿಆರ್‌ಎಸ್‌ ಸರ್ಕಾರದಲ್ಲಿ ನಡೆದಿರುವ ಕಾಳೇಶ್ವರಂ, ಧಾರಣಿ ಹಗರಣ ಸೇರಿದಂತೆ ಹಣಕಾಸು ಹಗರಣಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ವಾಗ್ಧಾನ ಮಾಡಿದೆ.

ಪ್ರಮುಖಾಂಶ:
* ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌
* ಒಬಿಸಿ, ಎಸ್‌ಸಿ/ಎಸ್‌ಟಿ ಮೀಸಲು ಹೆಚ್ಚಳ
* ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವ್ಯಾಟ್‌ ಕಡಿತ,
* ವರ್ಷಕ್ಕೆ ನಾಲ್ಕು ಉಚಿತ ಅಡುಗೆ ಸಿಲಿಂಡರ್‌ಗಳು
* ಪ್ರತಿ ಕ್ವಿಂಟಲ್‌ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ 3,100 ರೂ.ಗೆ ಏರಿಕೆ
* ಬೀಜ ಮತ್ತು ರಸಗೊಬ್ಬರ ಖರೀದಿಸಲು ಸಣ್ಣ ರೈತರಿಗೆ 2,500 ರೂ. ಅನುದಾನ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.