“ಶಾಲೆಯಲ್ಲಿ ನಿರಂತರ ಕನ್ನಡ ಕಾರ್ಯಕ್ರಮ ನಡೆದರೆ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಜಾಗೃತ’


Team Udayavani, Mar 3, 2021, 4:30 AM IST

“ಶಾಲೆಯಲ್ಲಿ ನಿರಂತರ ಕನ್ನಡ ಕಾರ್ಯಕ್ರಮ ನಡೆದರೆ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಜಾಗೃತ’

ಅಜೆಕಾರು : ಹಿರ್ಗಾನದಲ್ಲಿ ಮೊದಲ ಸಾಹಿತ್ಯ ಸಮ್ಮೇಳನ ಬಿ.ಎಂ. ಶಾಲೆಯಲ್ಲಿ ನಡೆಯುತ್ತಿರುವುದು ಗ್ರಾಮಕ್ಕೆ ಸಂದ ಗೌರವವಾಗಿದೆ.

ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನಗಳು ಊರಿಗೆ ಶೋಭೆ ತರುತ್ತವೆ. ಶಾಲೆಯಲ್ಲಿ ಕನ್ನಡದ ಕಾರ್ಯಕ್ರಮಗಳು ನಿರಂತರ ನಡೆದರೆ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಜಾಗೃತವಾಗುತ್ತದೆ ಎಂದು ಶ್ರೀ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನ ಹಿರ್ಗಾನದ ಆಡಳಿತ ಮೊಕ್ತೇಸರ ಅಶೋಕ್‌ ನಾಯಕ್‌ ಹೇಳಿದರು.

ಆದಿಗ್ರಾಮೋತ್ಸವ ಸಮಿತಿ, ಅಖೀಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಲಯನ್ಸ್‌ ಕ್ಲಬ್‌ ಮುನಿಯಾಲು ಸಂಸ್ಥೆಗಳ ಆಶ್ರಯದಲ್ಲಿ ಹಿರ್ಗಾನ ಬಿ.ಎಂ. ಶಾಲೆಯ ರಾಮಕೃಷ್ಣ ಕಡಂಬ ಮತ್ತು ಶಿಲ್ಪಿ ವಾದಿರಾಜ ಆಚಾರ್ಯ ಅವರ ಸ್ಮರಣಾರ್ಥ ವೇದಿಕೆಯಲ್ಲಿ ನಡೆದ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಹಿರಿಯರು ಹಾಕಿಕೊಟ್ಟ ಅಭಿವೃದ್ಧಿಯ ಮಂತ್ರಗಳ ಆಧಾರದಲ್ಲಿಯೇ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಸಮ್ಮೇಳನದ ಆಶಯ ಭಾಷಣ ಮಾಡಿದ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಹೇಳಿದರು.

ಕಾರ್ಯಕ್ರಮದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪಕ್‌ ಎನ್‌. ದುರ್ಗಾ, ಉದ್ಯಮಿ ಚೇತನ ಕುಮಾರ್‌ ಕೊರಳ, ಸಹಕಾರಿ ಧುರೀಣ ಸಿರಿಯಣ್ಣ ಶೆಟ್ಟಿ , ಮುಖ್ಯೋಪಾಧ್ಯಾಯಿನಿ ಆಶಾ ಕ್ಲೇರಾ ವಾಜ್‌, ಕಾಪು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪುಂಡಲೀಕ ಮರಾಠೆ, ಹಾಡಿ ಗರಡಿ ಆಡಳಿತ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಣೈ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಣೈ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ ಪೂಜಾರಿ, ಯುವ ಉದ್ಯಮಿ ಜಗದೀಶ ಶೆಟ್ಟಿ ದೆಪ್ಪುತ್ತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉದಯಕುಮಾರ್‌ ಕೆ.ಪಿ., ಸಣ್ಣ ಉಳಿತಾಯದ ಮಹಿಳಾ ಸಾಧಕಿ. ಕೆ.ಪಿ. ಪದ್ಮಾವತಿ, ಯುವ ವಾಗ್ಮಿ ಪ್ರದ್ಯುಮ್ನ ಮೂರ್ತಿ ಕಡಂದಲೆ, ಸಮಿತಿಯ ಮಕ್ಕಳ ವಿಭಾಗದ ಸುನಿಧಿ ಎಸ್‌. ಅಜೆಕಾರು, ಸುನಿಜಾ ಅಜೆಕಾರು, ಮುಜೂರು ಹಿರ್ಗಾನ ಪ್ರೌಢಶಾಲೆಯ ಶಿಕ್ಷಕ ಸಂತೋಷ ಕುಮಾರ್‌ ಶೆಟ್ಟಿ ಅತಿಥಿಗಳಾಗಿದ್ದರು.

ಸಮ್ಮೇಳನ ಸಂಘಟಕ ಡಾ| ಶೇಖರ ಅಜೆಕಾರು ಪ್ರಸ್ತಾವಿಕವಾಗಿ ಮಾತನಾಡಿದರು. ಹಿರ್ಗಾನ ಪಂಚಾಯತ್‌ ಅಧ್ಯಕ್ಷ ಸಂತೋಷ ಶೆಟ್ಟಿ ಸ್ವಾಗತಿಸಿದರು. ಸಮ್ಮೇಳನ ಸಮಿತಿ ಪ್ರಧಾನ ಕಾರ್ಯದರ್ಶಿ ಸೌಮ್ಯಶ್ರೀ ಅಜೆಕಾರು ವಂದಿಸಿದರು. ಯುವ ಕವಯಿತ್ರಿ ಕಾವ್ಯಾ ಕಣಂಜಾರು ಕಾರ್ಯಕ್ರಮ ನಿರೂಪಿಸಿದರು.

ಸರಿ -ತಪ್ಪು ವಿಮರ್ಶಿಸಿ ಪ್ರಚುರಪಡಿಸಿ
ಸಮ್ಮೇಳನಾಧ್ಯಕ್ಷತೆ ವಹಿಸಿದ ಮಂಜುನಾಥ ಬೊರ್ಗಲ್‌ಗ‌ುಡ್ಡೆ ಮಾತನಾಡಿ ಆಧುನಿಕ, ತಾಂತ್ರಿಕ ವೇಗದ ಈ ಯುಗದಲ್ಲಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಿಳಿದುಕೊಳ್ಳುವ ಗೋಜಿಗೆ ಹೋಗದೆ ಪೊಳ್ಳು ಸಮಾಜ ನಿರ್ಮಾಣ ವಾಗುವ ಆತಂಕವಿದೆ. ನಮಗೆ ಇಷ್ಟವಾಗುವಂತೆ ಬಂದ ಅಭಿಪ್ರಾಯಗಳನ್ನು ಹಿಂದೆ ಮುಂದೆ ನೋಡದೆ, ತಾನು ಇಷ್ಟಪಡುವ ಬರಹಗಾರ ಬರೆದ ಲೇಖನವನ್ನು ವಿಮರ್ಶಿಸದೆ ಪ್ರಚಾರ ಮಾಡುವ ಮೂಲಕ ಸುಳ್ಳನ್ನು ಹರಡುವ ಕೆಟ್ಟ ಸಂಪ್ರದಾಯ ಬೆಳೆಯುತ್ತಿದೆ. ಆ ಕುರಿತ ಅರಿವು ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.