ಮೈತ್ರಿ ಇಲ್ಲದೆ ಇದ್ದಿದ್ದರೆ 15 ಸ್ಥಾನ ಗೆಲ್ಲುತ್ತಿದ್ದೆವು: ಮೊಯ್ಲಿ
ನಮ್ಮವರಿಂದಲೇ ನಮಗೆ ಮೋಸ ಆಯಿತು....
Team Udayavani, Jun 22, 2019, 12:14 PM IST
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ ಭಾವನೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು.
ನಾನು ಸೋತರೂ ಚಿಕ್ಕಬಳ್ಳಾಪುರದ ಜನರ ಮೇಲೆ ಪ್ರೀತಿ ವಿಶ್ವಾಸ ಮುಂದುವರಿಸುತ್ತೇನೆ. ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಗೊತ್ತಿಲ್ಲ, ಆದರೂ ಕ್ಷೇತ್ರದ ಜನರೊಂದಿಗೆ ಇರುತ್ತೇನೆ ಎಂದರು.
ಮೈತ್ರಿ ಇಲ್ಲದೆ ಇದ್ದಿದ್ದರೆ 15 ರಿಂದ 16 ಸ್ಥಾನಗೆಲ್ಲುತ್ತಿದ್ದೆವು. ಚಿಕ್ಕಬಳ್ಳಾಪುರದಲ್ಲಿ ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿ ಕಾರಣ ಎಂದರು.
ನಮ್ಮವರಿಂದಲೂ ಮೋಸ ಆಯಿತು.ಅಧಿಕಾರದ ಆಸೆಯಿಂದ ಮೋಸ ಮಾಡಿದರು ಎಂದು ಸ್ವಪಕ್ಷೀಯರ ವಿರುದ್ಧ ಆಕ್ರೋಶ ಹೊರಹಾಕಿದರು.
ಮಧ್ಯಂತರ ಚುನಾವಣೆ ಕುರಿತಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮೊಯ್ಲಿ, ಈಗ ಯಾವ ಶಾಸಕರೂ ಚುನಾವಣೆಗೆ ಹೋಗಲು ಸಿದ್ಧರಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ