ಅನಧಿಕೃತ ಗೂಡಂಗಡಿ ತೆರವು : ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ


Team Udayavani, Feb 8, 2022, 9:03 PM IST

ಅನಧಿಕೃತ ಗೂಡಂಗಡಿ ತೆರವು : ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಹರಪನಹಳ್ಳಿ: ತಾಲೂಕಿನ ಪ್ರಮುಖ ಹೋಬಳಿ ಕೇಂದ್ರಸ್ಥಾನ ಅರಸೀಕೆರೆ ಗ್ರಾಮದ ಬಸ್‌ನಿಲ್ದಾಣ, ಚಿಕ್ಕಕೆರೆ ಹಾಗೂ ಅದರ ಅಕ್ಕಪಕ್ಕದಲ್ಲಿ ತಲೆ ಎತ್ತಿನಿಂತಿದ್ದ ಅನ ಕೃತ ಗೂಡಂಗಡಿಗಳ
ತೆರವು ಕಾರ್ಯಾಚರಣೆ ಸೋಮವಾರ ಬೆಳಿಗ್ಗೆ ನಡೆಯಿತು. ತಾಲೂಕಿನ ಪ್ರಮುಖ ಹಾಗೂ ಅತಿದೊಡ್ಡ ಗ್ರಾಮವಾದ ಅರಸೀಕೆರೆ ಗ್ರಾಮ ಬೆಳವಣಿಗೆಯಾದಂತೆಲ್ಲಾ, ವಾಹನ ಸಂಚಾರ ದಟ್ಟಣೆಯೂ ಅಧಿ ಕವಾಗಿದೆ. ಹೀಗಾಗಿ, ಗೂಡಂಗಡಿಗಳು ಬಸ್‌ನಿಲ್ದಾಣಕ್ಕೆ ಹೊಂದಿಕೊಂಡಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಾಕಷ್ಟು
ತೊಂದರೆ ಆಗುತ್ತಿತ್ತು.

ಜತೆಗೆ ನಾಲ್ಕಾರು ತಾಲೂಕುಗಳ ಸಂಪರ್ಕ ಬೆಸೆಯುವ ಕೇಂದ್ರಸ್ಥಾನದ ಹಿನ್ನೆಲೆಯಲ್ಲಿ ಶಾಸಕ ಎಸ್‌.ವಿ. ರಾಮಚಂದ್ರ ಅವರ ಮುತುವರ್ಜಿಯಿಂದಾಗಿ, ಈಗಾಗಲೇ ಗ್ರಾಮದ ನೂತನ ಬಸ್‌ನಿಲ್ದಾಣ ನಿರ್ಮಾಣ, ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನವೂ ಸಹ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಬಸ್‌ನಿಲ್ದಾಣ ಹಾಗೂ ಅದಕ್ಕೆ ಹೊಂದಿಕೊಂಡಿರುವ ಚಿಕ್ಕಕೆರೆ ಅಕ್ಕಪಕ್ಕದಲ್ಲಿನ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಜಗಳೂರು ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಅರಸೀಕೆರೆ ಗ್ರಾಮದಲ್ಲಿ ಪೌರಾಣಿಕ ಹಾಗೂ ಶೋಷಿತ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ದಂಡಿನ ದುರುಗಮ್ಮದೇವಿ ಜಾತ್ರೆ ಹಾಗೂ ಗ್ರಾಮದ ಸಮೀಪದಲ್ಲಿರುವ ಉಚ್ಚಂಗಿದುರ್ಗ ಗ್ರಾಮದ ಐತಿಹಾಸಿಕ ಉತ್ಸವಾಂಬಾ ಜಾತ್ರೆಗಳು ಈ ಭಾಗದ ಬಹುದೊಡ್ಡ ಧಾರ್ಮಿಕ ಉತ್ಸವಗಳಾಗಿರುವುದರಿಂದ ಸಹಜವಾಗಿಯೇ ದೊಡ್ಡ ಜಂಗುಳಿಯೇ ನೆರೆಯುತ್ತದೆ.

ಗ್ರಾಮವು ನಾಲ್ಕಾರು ತಾಲ್ಲೂಕುಗಳ ಸಂಪರ್ಕ ಬೆಸೆಯುವ ಕೊಂಡಿಯಾಗಿದ್ದು, ಮೊದಲ ಹಂತದಲ್ಲಿ ಸುಸಜ್ಜಿತವಾದ ನೂತನ ಬಸ್‌ನಿಲ್ದಾಣ ನಿರ್ಮಿಸಲು ಈಗಾಗಲೇ ಅನುದಾನ ಬಿಡಗಡೆಯಾಗಿದೆ, ಜತೆಗೆ ರಸ್ತೆ ಅಭಿವೃದ್ಧಿ ಹಾಗೂ ಬಸ್‌ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಇಲ್ಲಿನ ನಮ್ಮ ಜನರು ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದ ಗೂಡಂಗಡಿಗಳನ್ನು ಅನಿವಾರ್ಯವಾಗಿ ತೆರವುಗೊಳಿಸಬೇಕಾಗಿದೆ. ಗ್ರಾಮದ ಅಭಿವೃದ್ಧಿ ಹಿತಾಸಕ್ತಿಯಿಂದ ಅಂಗಡಿಗಳ ಮಾಲೀಕರು ಸಹ ತೆರವುಗೊಳಿಸಲು ಸಹಕಾರ ನೀಡಿದ್ದಾರೆ. ಶೀಘ್ರದಲ್ಲಿಯೇ ನಿಗದಿತ ಅವಧಿಯಲ್ಲಿ ಬಸ್‌ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ಅದಕ್ಕೆ ಹೊಂದಿಕೊಂಡಂತೆ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಈಗಾಗಲೇ ನೀಲನಕ್ಷೆ ರೂಪಿಸಲಾಗಿದ್ದು, ವಾಣಿಜ್ಯ ಮಳಿಗೆಗಳು ಪೂರ್ಣಗೊಂಡ ಬಳಿಕ ವ್ಯಾಪಾರಸ್ಥರ ವ್ಯಾಪಾರ ವಹಿವಾಟಿಗೆ ಪುನಃ ಅವಕಾಶ ಕಲ್ಪಿಸಲಾಗುವುದು ಎಂದು ಶಾಸಕ ಎಸ್‌.ವಿ. ರಾಮಚಂದ್ರ ಅವರು ತಿಳಿಸಿದರು.

ಗ್ರಾಪಂ ಕೈಗೆತ್ತಿಕೊಂಡಿದ್ದ ತೆರವು ಕಾರ್ಯಾಚರಣೆಗೆ ಸ್ಥಳೀಯ ಪೊಲೀಸ್‌ ಇಲಾಖೆಯ ಪಿಎಸ್‌ಐ ನಾಗರತ್ನಾ ಅವರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪಂಚಾಯ್ತಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಅಂಜಿನಪ್ಪ, ಪಿಎಸ್‌ಐ ನಾಗರತ್ನಾ ಸೇರಿದಂತೆ ಪ್ರಮುಖರು ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.