ಕಬ್ಬಾಳಮ್ಮ ಕಾಪಾಡಮ್ಮ, ಡಿಕೆಶಿ ನನ್ನ ಕ್ಷಮಿಸಿ ಎಂದ ಸಚಿವ ಶ್ರೀರಾಮುಲು!
Team Udayavani, Sep 3, 2019, 3:11 PM IST
ನವದೆಹಲಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಇ.ಡಿ. ಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ್ದ ಕಬ್ಬಾಳಮ್ಮ ದೇವಿ ಅರ್ಚಕ ಕುಂಕುಮವನ್ನು ಡಿಕೆಶಿ ಹಣೆಗೆ ಹಚ್ಚಿದ್ದಾರೆ.
ಕರ್ನಾಟಕ ಭವನದಿಂದ ಇ.ಡಿ. ಕಚೇರಿಗೆ ತೆರಳುವ ಮುನ್ನ, ಕಬ್ಬಾಳಮ್ಮ ದೇವಿ ಅರ್ಚಕ ಕಬ್ಬಾಳೆಗೌಡ ಅವರು ವಿಶೇಷ ಪೂಜೆ ನೆರವೇರಿಸಿ ತಂದಿದ್ದ ಕುಂಕುಮವನ್ನು ಡಿಕೆ ಶಿವಕುಮಾರ್ ಹಣೆಗೆ ಹಚ್ಚಿ ಆಶೀರ್ವದಿಸಿದ್ದಾರೆ.
ನನ್ನ ಕ್ಷಮಿಸಿ ಎಂದ ಶ್ರೀರಾಮುಲು:
ಬಿಜೆಪಿಯ ನನ್ನ ಕೆಲವು ಗೆಳೆಯರು ಹೇಳಿದ್ದ ಮಾತು ನಿಜವಾಗುತ್ತಿದೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬ ಬಿಜೆಪಿ ಮುಖಂಡ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆ ಉಲ್ಲೇಖಿಸಿ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಮೊಳಕಾಲ್ಮೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ಡಿಕೆಶಿ ಅಣ್ಣನವರೇ ನನ್ನ ಕ್ಷಮಿಸಿ, ನನ್ನ ಹೇಳಿಕೆಯಿಂದ ನಿಮ್ಮ ಮನಸ್ಸಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ