75 ನೀರಿನ ಟ್ಯಾಂಕ್‌ಗಳ ಮೇಲೆ ದಾರ್ಶನಿಕರ ಚಿತ್ರ

ಸ್ವಾತಂತ್ರ್ಯೋತ್ಸವ- ಹೋರಾಟಗಾರರ ಜೀವನಾದರ್ಶ ತಿಳಿಸುವ ಪ್ರಯತ್ನ ; ಜನಹಿತ ಟ್ರಸ್ಟ್‌ ವಿವಿಧ ಕಾರ್ಯಗಳಿಗೆ ವ್ಯಾಪಕ ಮೆಚ್ಚುಗೆ

Team Udayavani, Jun 6, 2022, 11:28 AM IST

8

ಮುಧೋಳ: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತವಾಗಿ ಜನಹಿತ ಟ್ರಸ್ಟ್‌ ಹಮ್ಮಿಕೊಂಡಿರುವ ವಿಶ್ವಭಾರತಿಗೆ ಕನ್ನಡದಾರತಿ ಅಭಿಯಾನ ಜನಮನ ಸೆಳೆದಿದೆ. ನಗರದ 75 ಕುಡಿಯುವ ನೀರಿನ ಟ್ಯಾಂಕ್‌ಗಳ ಮೇಲೆ ಸ್ವಾಮಿ ವಿವೇಕಾನಂದ, ಬಾಲಗಂಗಾಧರ ತಿಲಕ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ದಾರ್ಶನಿಕರ ಚಿತ್ರ ಬಿಡಿಸಲಾಗುತ್ತಿದೆ.

ಆ ಮೂಲಕ ನಗರದ ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಅವರ ಆದರ್ಶಗಳನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ಸ್ವಚ್ಛಗೊಂಡ ಟ್ಯಾಂಕ್‌ಗಳು: ಬಣ್ಣವೇ ಕಾಣದೆ ಅದೆಷ್ಟೋ ದಿನದಿಂದ ಹಲವು ನೀರಿನ ಟ್ಯಾಂಕ್‌ಗಳ ಸುತ್ತ ಕಸ ಬೆಳೆದಿತ್ತು. ಇದನ್ನು ಗಮನಿಸಿದ ಜನಹಿತ ಟ್ರಸ್ಟ್‌ನವರು ಕಸ ಸ್ವತ್ಛಗೊಳಿಸಿ ಬಣ್ಣಬಳಿದು ನೀರಿನ ಟ್ಯಾಂಕ್‌ಗಳು ಕಂಗೊಳಿಸುವಂತೆ ಮಾಡಿದ್ದಾರೆ. ಪ್ರತಿಫಲಾಪೇಕ್ಷೆಯಿಲ್ಲದೇ ಜನಹಿತ ಟ್ರಸ್ಟ್‌ ಮಾಡಿರುವ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಹತ್ತು-ಹಲವು ಸಮಾಜಮುಖಿ ಕಾರ್ಯ: 2011ರಲ್ಲಿ ಅಸ್ತಿತ್ವಕ್ಕೆ ಬಂದ ಜನಹಿತ ಟ್ರಸ್ಟ್‌ ಹತ್ತು ಹಲವಾರು ಕಾರ್ಯಗಳಿಂದ ಸಮಾಜದಲ್ಲಿ ಗುರುತಿಸಿಕೊಂಡಿದೆ. ಅವುಗಳಲ್ಲಿ ಮುಖ್ಯವಾಗಿ ಕೊರೊನಾ ವೇಳೆಯಲ್ಲಿ ಫ್ರಂಟ್‌ಲೈನ್‌ ವಾರಿಯರ್, ಕ್ವಾರಂಟೈನ್‌ ಆಗಿರುವವರಿಗೆ ಸೇರಿದಂತೆ ಸಾವಿರಾರು ಜನರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ ರುವುದು, 2020ರಲ್ಲಿ ಮುಧೋಳ-ಜಮ ಖಂಡಿ ತಾಲೂಕಿನಲ್ಲಿ ಏಕಕಾಲಕ್ಕೆ 25ಲಕ್ಷ ಬೀಜದುಂಡೆ ತಯಾರಿಸಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿರುವುದು. ನಗರದ ಗಡದನ್ನವರ ವೃತ್ತದಿಂದ ಮಾಸರಡ್ಡಿ ಆಸ್ಪತ್ರೆವರೆಗೆ ನಿರ್ಮಾಣಗೊಂಡಿರುವ ರಸ್ತೆಯ ಮಧ್ಯದಲ್ಲಿ ಡಿವೈಡರ್‌ನಲ್ಲಿ ಸಸಿ ಬೆಳೆಸುವ ಕಾರ್ಯ ಸೇರಿದಂತೆ ಹತ್ತಾರು ಕಾರ್ಯ ಕೈಗೊಂಡು ಜನಹಿತಕ್ಕಾಗಿ ಶ್ರಮಿಸುತ್ತಿದೆ. ಜನಹಿತ ಟ್ರಸ್ಟ್‌ ನಡಿಯಲ್ಲಿ ನಾರಾಯಣ(ರಾಜು) ಯಡಹಳ್ಳಿ, ಬಸವರಾಜ ಗಣಿ, ವಿಠ್ಠಲ ಪರೀಟ, ಸಂಜು ನಿಗಡೆ, ಸಂತೋಷ ಬಾಡಗಿ, ಹನಮಂತ ನಲಗೆ, ಪ್ರಕಾಶ ಲಿಂಬಿಕಾಯಿ, ಶಿವು ಐನಾಪುರ, ಕಿರಣ ಜುನ್ನು, ಮಹೇಶ ಕಬ್ಬೂರ, ರಾಹುಲ ಕೊಲ್ಹಾರ, ಸಾಗರ ಕರೆಹೊನ್ನ, ರಮೇಶ ಮೇತ್ರಿ, ಮೌನೇಶ ಸೋನಾರ ಮತ್ತಿತರ ಯುವಕರ ತಂಡ ಅಭಿಯಾನದ ಯಶಸ್ಸಿಗೆ ಶ್ರಮಿಸುತ್ತಿದೆ. ‌

ಸರ್ವರ ಹಿತಕ್ಕಾಗಿ ಶ್ರಮಿಸುತ್ತಿರುವ ಜನಹಿತ ಟ್ರಸ್‌ ಸಾರ್ವ ಜನಿಕರ ಸೇವೆ ಸದಾ ಸಿದ್ಧ. ಜನರಿಗೆ ಸ್ವಚ್ಛತೆ ಹಾಗೂ ನೀರಿನ ಮಹತ್ವದೊಂದಿಗೆ ಸ್ವಾತಂತ್ರ್ಯೋತ್ಸವ ಮಹತ್ವ ತಿಳಿಸಲು ವಿಶ್ವಭಾರತಿಗೆ ಕನ್ನಡದಾರತಿ ಅಭಿಯಾನ ಹಮ್ಮಿಕೊಂಡಿದ್ದೇವೆ. –ಶಿವಾನಂದ ಗುರವ, ಜನಹಿತ ಟ್ರಸ್ಟ್‌ನ ಟ್ರಸ್ಟಿ

„ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.