ಮಳೆಗಾಲ ಸನ್ನಿಹಿತ: ಜಿಲ್ಲೆಯಲ್ಲಿ ಗುಡ್ಡ ಕುಸಿತದ ಭೀತಿ!


Team Udayavani, May 23, 2020, 6:09 AM IST

ಮಳೆಗಾಲ ಸನ್ನಿಹಿತ: ಜಿಲ್ಲೆಯಲ್ಲಿ ಗುಡ್ಡ ಕುಸಿತದ ಭೀತಿ!

ವಿಶೇಷ ವರದಿ– ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಮುಂಗಾರು ಪ್ರವೇಶಿಸುವುದರೊಂದಿಗೆ ಮಳೆಗಾಲ ಆರಂಭಗೊಳ್ಳುವುದಕ್ಕೆ ಇನ್ನೂ ಎರಡು ವಾರವಷ್ಟೇ ಬಾಕಿಯಿದೆ. ಆದರೆ, ರಸ್ತೆ ಕಾಮಗಾರಿ, ಕಳೆದ ವರ್ಷದ ಧಾರಾಕಾರ ಮಳೆಯಿಂದಾಗಿ ಮಂಗಳೂರು ಸಹಿತ ದ.ಕ. ಜಿಲ್ಲೆಯ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಗುಡ್ಡಗಳು ಕುಸಿತದ ಅಪಾಯ ಎದುರಿಸುತ್ತಿವೆ.

ಏಕೆಂದರೆ, ಕಳೆದ ವರ್ಷ ಮಳೆಯಿಂದ ಭೂಕುಸಿತ ಅಪಾ ಯವಿರುವ ಕಡೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು. ಬೇಸಗೆಯಲ್ಲಿ ಅದನ್ನು ಸರಿಪಡಿಸುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಈಗ ಮತ್ತೆ ಮಳೆಗಾಲ ಸನ್ನಿಹಿತವಾಗಿದ್ದು, ಕುಸಿತದ ಅಪಾಯದ ಪ್ರದೇಶದಲ್ಲಿ ಇನ್ನೂ ಯಾವುದೇ ದುರಸ್ತಿ ಕಾಮಗಾರಿ ನಡೆಸದೇ ಯಥಾಸ್ಥಿತಿಯಲ್ಲಿದೆ. ಹೀಗಿರುವಾಗ, ಮುಂಗಾರು ಮಳೆ ಆರ್ಭಟಿಸಿದರೆ, ಕರಾವಳಿ ಭಾಗದಲ್ಲಿ ಮಣ್ಣು ಮೃದು ಆಗಿ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಿದೆ.

ಅರ್ಧಕ್ಕೆ ನಿಂತ ಕಾಂಕ್ರೀಟ್‌ ಕಾಮಗಾರಿ
ಮಂಗಳೂರಿನಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ. ರೋಡ್‌-ಅಡ್ಡಹೊಳೆ ನಡುವಣ ಚತುಷ್ಪಥ ಕಾಂಕ್ರೀಟ್‌ ಕಾಮಗಾರಿ ಆರಂಭ ವಾಗಿ ಅರ್ಧದಲ್ಲಿ ನಿಂತಿದೆ. ಮಳೆ ನೀರು ರಸ್ತೆಯ ಅಕ್ಕಪಕ್ಕದ ತಗ್ಗು ಸ್ಥಳಗಳಲ್ಲಿ ನಿಲ್ಲುವುದರಿಂದ ಮಳೆಗಾಲದಲ್ಲಿ ಸಮಸ್ಯೆಗೆ ಕಾರಣವಾಗಲಿದೆ. ಹೀಗಾಗಿ ಗುಡ್ಡ ಕುಸಿತದ ಅಪಾಯ ನಿಶ್ಚಿತ ಎಂಬಂತಿದೆ.

ಹೆದ್ದಾರಿ ನಿರ್ಮಿಸುವುದಕ್ಕಾಗಿ ಬಿ.ಸಿ. ರೋಡ್‌ನಿಂದ ಕಲ್ಲಡ್ಕ, ಉಪ್ಪಿನಂಗಡಿಯಾಗಿ ಈಗಾಗಲೇ ಗುಡ್ಡಗಳನ್ನು ಅಗೆಯಲಾಗಿದೆ. ಅದರಲ್ಲೂ ಬುಡೋಳಿ, ಗಡಿಯಾರ, ಪೆರ್ನೆ, ಉಪ್ಪಿನಂಗಡಿ ಸಹಿತ ಹಲವು ಭಾಗಗಳಲ್ಲಿ ಒಂದು ವೇಳೆ ಜೋರಾಗಿ ಮಳೆ ಸುರಿದರೆ ಗುಡ್ಡ ಜರಿಯುವ ಆತಂಕ ಇದೆ. ಇನ್ನೂ ಕಳೆದ ಬಾರಿ ಮಳೆಗೆ ಪೆರಿಯಶಾಂತಿ ಬಳಿ ಗುಡ್ಡ ಜರಿದು ಸಂಚಾರ ಬಂದ್‌ ಆಗಿತ್ತು. ಅಪಾಯಕಾರಿ ಗುಡ್ಡಗಳಿರುವ ರಸ್ತೆಯ ಅಕ್ಕಪಕ್ಕದಲ್ಲಿ ಹೊಸ ರಸ್ತೆಗಾಗಿ ಕೆಲವೆಡೆ ತಗ್ಗು ತೆಗೆದಿದ್ದು, ಕಳೆದ ಮಳೆಗಾಲದಲ್ಲೂ ಮಳೆ ನೀರು ನಿಂತು ಸಮಸ್ಯೆಯಾಗಿತ್ತು.

ನಗರದ ನಂತೂರು ವೃತ್ತ ಬಳಿ ಪಂಪ್‌ವೆಲ್‌ಗೆ ತೆರಳುವ ರಾ.ಹೆ.ಯಲ್ಲಿ ಒಂದು ಬದಿಯ ಗುಡ್ಡ ಈಗಾಗಲೇ ಸಣ್ಣ ಮಟ್ಟದಲ್ಲಿ ಜರಿದಿದ್ದು ಮಣ್ಣು ರಸ್ತೆಗೆ ಬೀಳಲು ಪ್ರಾರಂಭಿಸಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಗುಡ್ಡದಿಂದ ಮಣ್ಣು ಜರಿದು ಮರವೊಂದು ಖಾಸಗಿ ಶಾಲಾ ವ್ಯಾನ್‌ ಮೇಲೆ ಉರುಳಿ ಬಿದ್ದ ಘಟನೆ ನಡೆದಿತ್ತು. ಅದೃಷ್ಟವಶಾತ್‌ ವ್ಯಾನ್‌ನಲ್ಲಿದ್ದ ಎಲ್ಲ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದರು. ಶಾಲಾ ಬಸ್‌ ಮಾತ್ರವಲ್ಲದೆ ಒಂದು ಟ್ಯಾಂಕರ್‌ ಮತ್ತು ಪಿಕಪ್‌ ವಾಹನವು ಮರದಡಿ ಸಿಲುಕಿಕೊಂಡು, ಮೂರೂ ವಾಹನಗಳು ಜಖಂಗೊಂಡಿತ್ತು. ಇವಿಷ್ಟೇ ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಸಮೀಪದ ಕೆ.ಸಿ. ರೋಡ್‌ನ‌ಲ್ಲಿಯೂ ಇದೇ ರೀತಿ ಅಪಾಯಕಾರಿಯಾದ ಎತ್ತರದ ಗುಡ್ಡ ಪ್ರದೇಶವಿದೆ.

ಮಂಗಳೂರಿನಲ್ಲೂ
ಇದೆ ಅಪಾಯಕಾರಿ ಗುಡ್ಡ
ರಸ್ತೆ ಬದಿ ಎತ್ತರದ ಗುಡ್ಡ ಪ್ರದೇಶ ಇರುವ ತಾಣಗಳು ಮಂಗಳೂರು ನಗರದ ಬಿಜೈ ಬಟ್ಟಗುಡ್ಡದ ಸರ್ಕ್ನೂಟ್‌ ಹೌಸ್‌ ಬಳಿ ಇದ್ದು, ಕಳೆದ ವರ್ಷ ಈ ಪ್ರದೇಶದಲ್ಲಿ ಕುಸಿತ
ಗೊಂಡಿ ತ್ತು. ಬಳಿಕ ಮರಳು ತುಂಬಿಸಿದ ಗೋಣಿ ಚೀಲಗಳನ್ನು ಇಟ್ಟು ತಾತ್ಕಾಲಿಕ ಪರಿಹಾರವನ್ನು ಕಲ್ಪಿಸಲಾಗಿತ್ತು. ಮಳೆಗಾಲ ಪೂರ್ಣಗೊಂಡು ಒಂದು ವರ್ಷ ಕಳೆದರೂ ಈ ಪ್ರದೇಶದಲ್ಲಿ ಶಾಶ್ವತ ಪರಿಹಾರವಾಗಿಲ್ಲ. ಈಗ ಮರಳು ಗೋಣಿ ಚೀಲಗಳು ರಸ್ತೆಗೆ ಬೀಳುವ ಆತಂಕದಲ್ಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಬಗೆಹರಿಸಬೇಕಿದೆ.

 ಅಧಿಕಾರಿಗಳ
ಗಮನಕ್ಕೆ ತರುವೆ
ರಾಷ್ಟ್ರೀಯ ಹೆದ್ದಾರಿ, ಮಹಾನಗರ ಪಾಲಿಕೆ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳಜತೆ ಈಗಾಗಲೇ ಪ್ರಾಥಮಿಕ ಹಂತದ ಸಭೆ ನಡೆಸಲಾಗಿದೆ. ಈ ಹಿಂದೆ ಮಳೆಗಾಲದಲ್ಲಾದ ಅನಾಹುತಗಳನ್ನು ಗಮನದಲ್ಲಿರಿಸಿ ಮತ್ತೊಮ್ಮೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತೇನೆ. ಗುಡ್ಡ ಜರಿಯುವ ಭೀತಿ ಹಿನ್ನೆಲೆ ಅಧಿಕಾರಿಗಳ ಗಮನಕ್ಕೆ ತರುತ್ತೇನೆ.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.