ಜಲಾವೃತ ಬೆಳೆಗೆ ತಕ್ಷಣ ಪರಿಹಾರ: ನಿರ್ಮಲಾ
Team Udayavani, Aug 11, 2019, 3:09 AM IST
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಸೇರಿ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಜಲಾವೃತವಾಗಿರುವ ಬೆಳೆಗಳಿಗೆ ತಕ್ಷಣವೇ ತಾತ್ಕಾಲಿಕ ಪರಿಹಾರ ನೀಡಲು ವಿಮಾ ಕಂಪೆನಿಗಳಿಗೆ ಸೂಚಿಸಲಾಗುವುದು. ಅಲ್ಲದೇ ನೆರೆ ಸಂತ್ರಸ್ತರಿಗೆ ತಕ್ಷಣ ನೆರವಾಗಲು ಪ್ರತಿ ಕುಟುಂಬಕ್ಕೆ 3,800ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬೆಳೆವಿಮೆ ಕಂಪನಿಗಳು, ಪ್ರವಾಹ ಪೀಡಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿ ಮುಳುಗಡೆಯಾಗಿರುವ ಬೆಳೆ ಸಮೀಕ್ಷೆಗೆ ಮುಂದಾಗದೇ ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸಬೇಕೆಂದು ಸೂಚನೆ ನೀಡಲಾಗುವುದು ಎಂದರು.
ತೀವ್ರ ಪ್ರವಾಹದ ಹಿನ್ನೆಲೆಯಲ್ಲಿ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಿಸುವ ಅಗತ್ಯವಿದೆ ಎಂಬುದು ತಮಗೆ ಮನವರಿಕೆಯಾಗಿದ್ದು, ಈಗಿರುವ ಆ.15ರ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಾಲ ವಸೂಲಾತಿಗೆ ಒತ್ತಡ ಬೇಡ: ಸಾಲ ಮರುಪಾವತಿಸುವಂತೆ ನೆರೆ ಹಾವಳಿ ಸಂತ್ರಸ್ತರಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಒತ್ತಾಯಿಸುವುದು ಸಲ್ಲ. ಸದ್ಯದ ಸ್ಥಿತಿಯಲ್ಲಿ ಯಾರೂ ಸಾಲ ಪಾವತಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಕಿರುಕುಳ ಕೊಡದೇ ಮರುಪಾವತಿಗೆ ಅವಕಾಶ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಆದೇಶ ನೀಡಲಿದೆ ಎಂದು ಭರವಸೆ ನೀಡಿದರು.
ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ನೇಕಾರ ಕುಟುಂಬಗಳು ತುಂಬಾ ಸಂಕಷ್ಟಕೀಡಾಗಿರುವುದು ಕಂಡುಬಂದಿದೆ. ಆದ್ದರಿಂದ ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ನೀಡುವಂತೆ ಕ್ರಮ ವಹಿಸಲಾಗುವುದು ಎಂದರು.
ಕೆಸರಿನಲ್ಲೇ ನಡೆದುಕೊಂಡು ಹೋದ ಸಚಿವೆ: ನಿರ್ಮಲಾ ಸೀತಾರಾಮನ್ ಅವರು ಧಾಮಣೆ ರಸ್ತೆಯಲ್ಲಿ ಆಗಿರುವ ಹಾನಿಯ ವೀಕ್ಷಣೆ ಮಾಡಿದರು. ಆಗ ಸಚಿವರ ಬಳಿ ಬಂದ ಮಹಿಳೆಯರು ಕಾಲಿಗೆ ಬೀಳಲು ಮುಂದಾದರು. ಕೂಡಲೇ ಮಹಿಳೆಯ ಕೈಹಿಡಿದು ನಿಲ್ಲಿಸಿದ ಸಚಿವರು, ನಿಮ್ಮ ಸಮಸ್ಯೆ ಏನೆಂಬುದನ್ನು ಹೇಳಿ ಎಂದರು.
ಆಗ ಮಹಿಳೆಯರು, ಮೇಡಂ, ನಮ್ಮ ಮನೆಗೆ ಬಂದು ಸ್ಥಿತಿ ನೋಡಿ. ಆಗ ನಿಮಗೆಲ್ಲವೂ ಅರ್ಥವಾಗುತ್ತದೆ ಎಂದಾಗ, ನಿರ್ಮಲಾ ಅವರು ಕೆಸರಿನಲ್ಲಿಯೇ ನಡೆದುಕೊಂಡೇ ಹೋಗಿ ನೀರು ನುಗ್ಗಿದ ಮನೆಗಳು ಹಾಗೂ ಮಗ್ಗಗಳನ್ನು ಪರಿಶೀಲಿಸಿದರು. ನೇಕಾರ ಕಾಲೋನಿ ರಸ್ತೆ ಬಹುತೇಕ ಕೆಸರುಮಯವಾಗಿತ್ತು. ಸಚಿವರ ನಡೆ ಕಂಡು ಸ್ಥಳೀಯ ನಿವಾಸಿಗಳು ಭಾರತ ಮಾತಾಕೀ ಜೈ ಎಂದು ಘೋಷಣೆ ಕೂಗಿದರು.
ಬಾಗಲಕೋಟೆಗೆ ಪ್ರಯಾಣ: ಬಳ್ಳಾರಿ ನಾಲಾ ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು ವೀಕ್ಷಿಸಿ ರಸ್ತೆ ಮೂಲಕ ಸಂಕೇಶ್ವರಕ್ಕೆ ತೆರಳುತ್ತಿದ್ದ ಸಚಿವೆ ನಿರ್ಮಲಾ ಪ್ರಯಾಣ ಅರ್ಧಕ್ಕೆ ಮೊಟಕುಗೊಳಿಸಿದರು. ಹತ್ತರಗಿಯಿಂದ ವಾಪಸ್ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅರಿಯಲು ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ