Karnataka: ಮುಂದಿನ ವರ್ಷ SEP ಜಾರಿ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್
Team Udayavani, Sep 27, 2023, 9:23 PM IST
ಅರಸೀಕೆರೆ: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್ಇಪಿ) ರದ್ದು ಮಾಡುವುದಾಗಿ ಕಳೆದ ಬಜೆಟ್ನಲ್ಲೇ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅದರಂತೆ ಮುಂದಿನ ವರ್ಷದಿಂದ ಎನ್ಇಪಿ ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮಾತ್ರ 2021ರಲ್ಲಿ ಎನ್ಇಪಿ ಜಾರಿಗೆ ತರಲಾಗಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೆ ಎನ್ಇಪಿ ಜಾರಿ ಮಾಡಿರುವುದರಿಂದ ಸಾಕಷ್ಟು ನ್ಯೂನತೆ ಇರುವುದರಿಂದ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಹಲವು ಕಡೆಗಳಲ್ಲಿ ಎನ್ಇಪಿ ಜಾರಿ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಮೂಲ ಸೌಕರ್ಯ ಅನೇಕ ಕಡೆ ಇಲ್ಲದ ಕಾರಣ ರಾಜ್ಯದಲ್ಲಿ ಎನ್ಇಪಿಗೆ ಪೂರಕ ವಾತಾವರಣ ಇಲ್ಲ. ಎನ್ಇಪಿ ವಿಷಯಗಳೇ ಬೇರೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿಷಯಗಳೇ ಬೇರೆ. ಗ್ರಾಮೀಣ ಮಕ್ಕಳಿಗೆ ಅನೇಕ ರೀತಿಯ ಅನಾನುಕೂಲ ಆಗಿದೆ. ಆದ್ದರಿಂದ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ಜಾತಿ, ವರ್ಗಗಳನ್ನು ಒಳಗೊಂಡ ಶಿಕ್ಷಣ ನೀತಿ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಕಾಲೇಜುಗಳಲ್ಲಿ ಗೊಂದಲ:
ಪರಿಶಿಷ್ಟ ವಿದ್ಯಾರ್ಥಿಗಳ ವೇತನ ವಿಳಂಬ ಆಗುತ್ತಿದೆ ಎಂಬ ಪ್ರಶ್ನೆಗೆ, ವಿದ್ಯಾರ್ಥಿ ವೇತನ ಮೊದಲಿನಂತೆ ಪಾವತಿ ಆಗುತ್ತಿದೆ. ಕೇಂದ್ರ ಸರ್ಕಾರ ಡಿಬಿಟಿ ಪದ್ಧತಿ ಮಾಡಿದೆ. ಶೇ.60 ಕೇಂದ್ರ, ಶೇ.40 ರಾಜ್ಯದ್ದು ಎಂದು ಮಾಡಿರುವುದರಿಂದ ಕೆಲವು ಕಾಲೇಜುಗಳಲ್ಲಿ ಗೊಂದಲ ಆಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರವೇಶಕ್ಕೆ ತೊಂದರೆ ಕೊಡಬಾರದು ಎಂದು ಈಗಾಗಲೇ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
ಪರೀಕ್ಷಾ ವೇಳಾಪಟ್ಟಿ ಸಮಾನಾಂತರ
ಅತಿಥಿ ಉಪನ್ಯಾಸಕರ ನೇಮಕ ಹಾಗೂ ವರ್ಗಾವಣೆಯಿಂದ ಸಮಸ್ಯೆಯಾಗುತ್ತಿದೆ. ಆದ್ದರಿಂದ ಇಡೀ ರಾಜ್ಯದಲ್ಲಿ ಪರೀûಾ ವೇಳಾಪಟ್ಟಿಯನ್ನು ಸಮಾನಾಂತರವಾಗಿ ತರಬೇಕೆಂದು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಎರಡೂವರೆ ಲಕ್ಷ ಹುದ್ದೆಗಳನ್ನು ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್