ಏ.1ರಿಂದ ಸರಳೀಕೃತ ರಿಟರ್ನ್ಸ್ ನಮೂನೆ ಬಳಕೆ ಜಾರಿ


Team Udayavani, Dec 24, 2019, 3:10 AM IST

april1

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ಸರಳೀಕೃತ ರಿಟರ್ನ್ಸ್ ನಮೂನೆಗಳು (ಸಹಜ್‌, ಸುಗಮ್‌, ನಾರ್ಮಲ್‌) ಬಳಕೆ ವ್ಯವಸ್ಥೆ ಮುಂದಿನ ಏ. 1ರಿಂದ ಜಾರಿಯಾಗಲಿದೆ.

ಹಾಗೆಯೇ 500 ಕೋಟಿ ರೂ.ಗಿಂತ ಹೆಚ್ಚು ವಹಿವಾಟು ನಡೆಸುವ ಹಾಗೂ ಏ.1ರಿಂದ 100 ಕೋಟಿ ರೂ.ಗಿಂತ ಹೆಚ್ಚು ವಹಿವಾಟು ನಡೆಸುವ ವ್ಯಾಪಾರ- ವ್ಯವಹಾರಸ್ಥರಿಗೆ “ಎಲೆಕ್ಟ್ರಾನಿಕ್‌- ಇನ್‌ವಾಯ್ಸ್’ ವ್ಯವಸ್ಥೆ ಐಚ್ಛಿಕ ಮತ್ತು ಪ್ರಯೋಗಾರ್ಥ ಅಳವಡಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ಜಿಎಸ್‌ಟಿ ನೆಟ್‌ವರ್ಕ್‌ ಸಚಿವರ ತಂಡ ಮುಖ್ಯಸ್ಥರಾದ ಬಿಹಾರ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಹೇಳಿದರು.

ನಗರದಲ್ಲಿ ಸೋಮವಾರ ಜಿಎಸ್‌ಟಿ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವ್ಯಾಪಾರ- ವ್ಯವಹಾರಾಸ್ಥರ ಅನುಕೂಲಕ್ಕಾಗಿ ಜಿಎಸ್‌ಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸುವ ಪ್ರಯತ್ನ ನಡೆದಿದೆ. ಅದಕ್ಕೆ ಪೂರಕವಾಗಿ ಸಹಜ್‌, ಸುಗಮ್‌, ನಾರ್ಮಲ್‌ ರಿಟರ್ನ್ಸ್ ನಮೂನೆ ಬಳಕೆ ಏ.1ರಿಂದ ಜಾರಿಯಾಗಲಿದೆ.

ಹೊಸ ವ್ಯವಸ್ಥೆ ಅಳವಡಿಕೆಗೆ ಈಗಾಗಲೇ ಒಂದು ಲಕ್ಷ ವ್ಯಾಪಾರ- ವ್ಯವಹಾರಸ್ಥರಿಗೆ ಜಾಗೃತಿ ಮೂಡಿಸಲಾಗಿದ್ದು, ಮಾರ್ಚ್‌ ವೇಳೆಗೆ 10 ಲಕ್ಷ ವ್ಯಾಪಾರ- ವ್ಯವಹಾರಸ್ಥರಿಗೆ ಅರಿವು ಮೂಡಿಸುವ ಉದ್ದೇಶವಿದೆ. ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆ ಇತರೆ ಪಾವತಿ ಪ್ರಕ್ರಿಯೆ ಸುಗಮಗೊಳಿಸಲು ಪೂರಕವಾಗಿ 600 ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಇ- ಇನ್‌ವಾಯ್ಸ್: ನೂತನ ಇ- ಇನ್‌ವಾಯ್ಸ್ ವ್ಯವಸ್ಥೆಯನ್ನು ಜನವರಿಯಿಂದ ಜಾರಿಗೊಳಿಸಲಾಗುತ್ತಿದೆ. ವಾರ್ಷಿಕ 500 ಕೋಟಿ ರೂ.ಗಿಂತ ಹೆಚ್ಚು ವಹಿವಾಟು ನಡೆಸುವವರು ಜ.1ರಿಂದ ಇ-ಇನ್‌ವಾಯ್ಸ್ ವ್ಯವಸ್ಥೆಯನ್ನು ಐಚ್ಛಿಕ ಮತ್ತು ಪ್ರಯೋಗಾರ್ಥ ಜಾರಿಯಾಗಲಿದೆ. ವಾರ್ಷಿಕ 100 ಕೋಟಿ ರೂ.ಗಿಂತ ಹೆಚ್ಚು ವಹಿವಾಟು ನಡೆಸುವವರು ಏ.1ರಿಂದ ಇ- ಇನ್‌ವಾಯ್ಸ್ ಸಲ್ಲಿಸುವುದು ಐಚ್ಛಿಕ ಮತ್ತು ಪ್ರಯೋಗಾರ್ಥವಾಗಿರಲಿದೆ. ಈ ವ್ಯವಸ್ಥೆಯಿಂದ ಮಾಸಿಕ 3ಬಿ ರಿಟರ್ನ್ಸ್ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದರು.

ಆಧಾರ್‌ ಕಡ್ಡಾಯ: ನಕಲಿ ಇನ್‌ವಾಯ್ಸ್ ಸೃಷ್ಟಿಸಿ ವಂಚಿಸುವುದನ್ನು ತಪ್ಪಿಸಲು ಆಧಾರ್‌ ಜೋಡಣೆ ಕಡ್ಡಾಯಗೊಳಿಸಲಾಗುತ್ತಿದೆ. ಜ. 1ರಿಂದ ಆಧಾರ್‌ ಜೋಡಣೆ ವ್ಯವಸ್ಥೆ ಜಾರಿಯಾಗಲಿದೆ. ಹೊಸದಾಗಿ ಜಿಎಸ್‌ಟಿ ನೋಂದಣಿ ಪಡೆಯುವವರು ಆಧಾರ್‌ ವಿವರ ಸಲ್ಲಿಸುವುದು ಕಡ್ಡಾಯ. ಈಗಾಗಲೇ ನೋಂದಣಿಯಾಗಿರುವವರು ಆಧಾರ್‌ ಜೋಡಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ತೆಲಂಗಾಣ, ಆಂಧ್ರಪ್ರದೇಶ, ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಧಾರ್‌ ಜೋಡಣೆ ಕಾರ್ಯವನ್ನು ಭೌತಿಕವಾಗಿ ನಡೆಸಲಾಗುತ್ತಿದೆ. ಇದರಿಂದ ವಂಚನೆ ತಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.‌ ಸತತ ಎರಡು ತಿಂಗಳ ಕಾಲ 3ಬಿ ರಿಟರ್ನ್ಸ್ ಸಲ್ಲಿಸದಿದ್ದರೆ “ಇ-ವೇ’ ಬಿಲ್‌ ವ್ಯವಸ್ಥೆ ರದ್ದಾಗಲಿದೆ. ಆರು ತಿಂಗಳ ಕಾಲ ರಿಟರ್ನ್ಸ್ ಸಲ್ಲಿಸದಿದ್ದರೆ ಜಿಎಸ್‌ಟಿ ನೋಂದಣಿ ರದ್ಧಾಗಲಿದ್ದು, ಅದರಂತೆ ರದ್ಧತಿ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಕ್ಟೋಬರ್‌, ನವೆಂಬರ್‌ ತಿಂಗಳ ಜಿಎಸ್‌ಟಿ ಪರಿಹಾರ ಮೊತ್ತವನ್ನಷ್ಟೇ ಪಾವತಿಸಬೇಕಿದ್ದು, ಮಾಸಾಂತ್ಯದೊಳಗೆ ಬಾಕಿ ಪರಿಹಾರ ಬಿಡುಗಡೆಯಾಗಲಿದೆ. ಆರ್ಥಿಕ ಹಿಂಜರಿಕೆಗೆ ಇರುವ ಕಾರಣ ಜಿಎಸ್‌ಟಿ ದರ ಏರಿಕೆ ಮಾಡುವ ಪ್ರಸ್ತಾವ ಇಲ್ಲ. ಜಿಎಸ್‌ಟಿ ತೆರಿಗೆ ಪ್ರಮಾಣ ಏರಿಕೆ ಮಾಡಲಾಗುತ್ತದೆ ಎಂಬುದು ಊಹಾಪೋಹವಷ್ಟೇ. ಮಾಸಿಕ ಒಂದು ಲಕ್ಷ ಕೋಟಿ ರೂ.ಗಿಂತ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದು, ಎರಡು ತಿಂಗಳಿನಿಂದ ಆರ್ಥಿಕ ಹಿಂಜರಿಕೆ ಕಾರಣಕ್ಕೆ ಆದಾಯದಲ್ಲಿ ತುಸು ಇಳಿಕೆಯಾಗಿದೆ. ಇದು ತಾತ್ಕಾಲಿಕವಾಗಿದ್ದು, ಮುಂದೆ ತೆರಿಗೆ ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ.
-ಸುಶೀಲ್‌ ಕುಮಾರ್‌ ಮೋದಿ, ಜಿಎಸ್‌ಟಿ ನೆಟ್‌ವರ್ಕ್‌ ಸಚಿವರ ತಂಡ ಮುಖ್ಯಸ್ಥ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.