ಮಳೆಗಾಲಕ್ಕೂ ಮೊದಲು ಅಳವಡಿಸಿ ಮಿಂಚುಬಂಧಕ

ಸಿಡಿಲಿನ ತೀವ್ರತೆ, ಜೀವ ಹಾನಿ, ನಷ್ಟ ತಪ್ಪಿಸಲು ಸಹಕಾರಿ

Team Udayavani, May 15, 2020, 6:18 AM IST

ಮಳೆಗಾಲಕ್ಕೂ ಮೊದಲು ಅಳವಡಿಸಿ ಮಿಂಚುಬಂಧಕ

ಉಡುಪಿ: ಪ್ರತಿ ವರ್ಷವೂ ಜಿಲ್ಲೆಯಲ್ಲಿ ಮಿಂಚು, ಸಿಡಿಲಿನ ಆರ್ಭಟ ಹೆಚ್ಚಿರುತ್ತದೆ. ಜೀವಹಾನಿ ಸಹಿತ ಅಪಾರ ನಷ್ಟ ಸಂಭವಿಸುತ್ತಿರುತ್ತದೆ. ಈ ಬಾರಿ ಆರಂಭದಲ್ಲೆ ಸಿಡಿಲು ಮಿಂಚಿನ ಆರ್ಭಟ ಹೆಚ್ಚಾಗಿ ಕಂಡುಬಂದಿದೆ.

ಹೆಚ್ಚು ಸಿಡಿಲಿನ ತೀವ್ರತೆಯಿರುವ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಿಂಚು ಪ್ರತಿ ಬಂಧಕ ಟವರ್‌ ಅಳವಡಿಸಿಕೊಳ್ಳುವಂತೆ ಸರಕಾರ ಈ ಹಿಂದೆ ಅನುಮತಿ ನೀಡಿತ್ತು. ತಂತ್ರಜ್ಞರ ಸಲಹೆ ಪಡೆದುಕೊಳ್ಳಲು ಸೂಚಿಸಲಾಗಿತ್ತು. ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣ ವಿಭಾಗದಡಿ ಜಿಲ್ಲಾಡಳಿತಗಳು ಮಿಂಚು ಪ್ರತಿಬಂಧಕ ಅಳವಡಿಸಲು ಮುಂಜೂರಾತಿ ನೀಡುತ್ತವೆ.

ಎತ್ತರ ಸ್ಥಳದಲ್ಲಿ ಟವರ್‌ ನಿರ್ಮಾಣ ಮಾಡಿ ಅಲ್ಲಿ ಮಿಂಚು ಪ್ರತಿಬಂಧಕವನ್ನು ಅಳವಡಿಸಿದಲ್ಲಿ ಸುತ್ತಮುತ್ತಲ ಹಲವು ಪ್ರದೇಶಗಳಲ್ಲಿ ಸಿಡಿಲಿನ ಹೊಡೆತ ತಪ್ಪಿಸಲು ಸಹಕಾರಿಯಾಗುತ್ತದೆ. ದ.ಕ. ಜಿಲ್ಲೆಯಲ್ಲಿ ಇದು ಪ್ರಗತಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಗ್ಗೆ ಅಧಿಕಾರಿಗಳಲ್ಲಿ ಹೆಚ್ಚಿನ ಮಾಹಿತಿಗಳಿಲ್ಲ. ಮಿಂಚು ಪ್ರತಿಬಂಧಕ ಬದಲಿಗೆ ಮಿಂಚು ಬಂಧಕವನ್ನು ಖಾಸಗಿಯಾಗಿ ಕಟ್ಟಡಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ.

15 ಮೀ.ಗಿಂತ ಹೆಚ್ಚು ಎತ್ತರವಿರುವ ಗೋಪುರಗಳು, ಖಾಸಗಿ ಕಟ್ಟಡಗಳು, ಶ್ರದ್ದಾ ಕೇಂದ್ರಗಳು, ಇನ್ನಿತರ ಕಟ್ಟಡಗಳಲ್ಲಿ ಮಿಂಚು ಬಂಧಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಬಹುತೇಕ ಕಟ್ಟಡಗಳು ಅಳವಡಿಸಿಕೊಂಡಿವೆ. ಖಾಸಗಿ ಸಂಸ್ಥೆಗಳ ಮೂಲಕ ಇದನ್ನು ಅಳವಡಿಸುತ್ತಾರೆ. ಸಾಮರ್ಥ್ಯದ ಮೇಲೆ ವೆಚ್ಚ ನಿಗದಿಯಾಗುತ್ತದೆ.

ಮಿಂಚು ಬಂಧಕದ ಕೆಲಸ ಹೇಗೆ?
ಮಿಂಚು ಮತ್ತು ಸಿಡಿಲಿನ ಹೊಡೆತಗಳು 30,000 ಫ್ಯಾರನ್‌ ಹೀಟ್‌ನಿಂದ 50,000 ಫ್ಯಾರನ್‌ ಹೀಟ್‌ ಉಷ್ಣವನ್ನು ಬಿಡುಗಡೆ ಮಾಡಬಲ್ಲವು. ಇದು ಸೂರ್ಯನ ಮೇಲ್ಮೆ„ ತಾಪಮಾನಕ್ಕಿಂತಲೂ ಹೆಚ್ಚಿರುತ್ತದೆ. ದೊಡ್ಡ ಕಟ್ಟಡಗಳನ್ನು ಈ ಸಿಡಿಲಿನ ಹೊಡೆತದಿಂದ ರಕ್ಷಿಸಲು ತ್ರಿಶೂಲಾಕಾರದ ಲೋಹದ ಸಲಾಕೆಯನ್ನು ಕಟ್ಟಡದ ಮೇಲೆ ನೆಟ್ಟು ಅದರ ಕೆಳತುದಿಯನ್ನು ಒಂದು ವಾಹಕದ ಮೂಲಕ ಭೂಮಿಗೆ ಸೇರಿಸುತ್ತಾರೆ. ಇದೇ ಮಿಂಚು ಬಂಧಕ. ಸಿಡಿಲು ಮೋಡದಿಂದ ಪ್ರೇರೇಪಿತಗೊಂಡ ವಿದ್ಯುತ್‌ ಅಂಶಗಳು ಮಿಂಚು ಬಂಧಕ ಹಾಗೂ ವಾಹಕಗಳ ಮೂಲಕ ಭೂಮಿಯನ್ನು ಸೇರಿ ಸಿಡಿಲಿನ ಅಪಾಯ ತಪ್ಪುತ್ತದೆ.

ವಿದ್ಯುತ್‌ ಅಪಾಯ;
ಜಾಗರೂಕತೆ ಅಗತ್ಯ
ಸಿಡಿಲು, ಮಿಂಚಿಗೆ ವಿದ್ಯುತ್‌ ಸಂಬಂಧಿತ ದೋಷಗಳ ಕುರಿತು ಜಾಗ್ರತೆ ವಹಿಸಬೇಕಾಗುತ್ತದೆ. ಮಿಂಚು ಬರುವ ವೇಳೆ ಮನೆಯ ವಿದ್ಯುತ್‌ ತಂತಿಗಳು, ಸ್ವಿಚ್‌ ಇತ್ಯಾದಿಗಳ ಬಳಿಯಿಂದ ದೂರವಿರಬೇಕು. ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಮನೆಯ ಉಪಕರಣಗಳು ಹಾಳಾಗುವುದರ ಜತೆಗೆ ಜೀವಹಾನಿ ಸಂಭವಿಸುವ ಸಾಧ್ಯತೆಗಳೇ ಹೆಚ್ಚು. ಮನೆಯ ವಿದ್ಯುತ್‌ ತಂತಿಗಳ ಬಗ್ಗೆಯೂ ಜಾಗೃತೆ ವಹಿಸಬೇಕು.

ಮಿಂಚು ಅತ್ಯಂತ ಅಪಾಯಕಾರಿ
ಗುಡುಗು ಒಂದು ಶಬ್ದ ಅಷ್ಟೆ. ಆದರೆ ಮಿಂಚು ಅಪಾಯಕಾರಿ. ಹವಾಮಾನ ಸೇವಾಸಂಸ್ಥೆಯ ಸಮೀಕ್ಷೆಯಂತೆ ಪ್ರತೀ 300 ಜನರಲ್ಲಿ ಒಬ್ಬರಿಗೆ ಮಿಂಚಿನ ದಾಳಿಯ ಸಾಧ್ಯತೆಗಳಿರುತ್ತವೆ. ಮಳೆ ನಿಂತ ಅರ್ಧ ಗಂಟೆಯವರೆಗೂ ಮಿಂಚು ಎರಗುವ ಸಾಧ್ಯತೆ ಇರುತ್ತದೆ.

ಕೆಳಕಂಡ ಎಚ್ಚರಿಕೆ ಅಗತ್ಯ
-ಸ್ಥಿರ, ಮೊಬೈಲ್‌ ಫೋನ್‌ಗಳನ್ನು ಸಿಡಿಲು, ಮಿಂಚಿರುವಾಗ ಬಳಸಬೇಡಿ.
-ಗುಡುಗು, ಮಿಂಚು ಇದ್ದಾಗ ಷವರ್‌ ಸ್ನಾನ ಬೇಡ.
-ಟಿವಿ, ರೇಡಿಯೋ, ಮಿಕ್ಸಿ,ಗ್ರೈಂಡರ್‌, ಕಂಪ್ಯೂಟರ್‌ ಇತ್ಯಾದಿಗಳ ಬಳಕೆ ಬೇಡ.
-ಕಿಟಿಕಿಗಳನ್ನು ತೆರೆದುಕೊಂಡು ಮಿಂಚನ್ನು ನೋಡಬೇಡಿ.

ವಿದ್ಯುತ್‌ ಸೋರಿಕೆಗೆ ತಡೆಯಿರಲಿ
ಮನೆಯ ಅರ್ಥಿಂಗ್‌ ವ್ಯವಸ್ಥೆಯನ್ನು ಮಳೆಗಾಲದ ಪೂರ್ವದಲ್ಲೇ ಪರೀಕ್ಷಿಸಿಕೊಳ್ಳುವುದು ಸೂಕ್ತ. ಸಿಡಿಲು, ಮಿಂಚು ಸಂದರ್ಭ ಮನೆಯ ವಿದ್ಯುತ್‌ ಉಪಕರಣಗಳು ಹಾಳಾಗದಂತೆ ನೋಡಿಕೊಳ್ಳುವುದಲ್ಲದೆ, ಮನೆಯ ವಸ್ತುಗಳಲ್ಲಿ ವಿದ್ಯುತ್‌ ಸೋರಿಕೆಯಿಂದ ಶಾಕ್‌ ತಗಲುವುದನ್ನು ತಡೆಗಟ್ಟುತ್ತದೆ. ಸಾರ್ವಕಾಲಿಕವಾಗಿ ಅರ್ಥಿಂಗ್‌ ವ್ಯವಸ್ಥೆ ಎನ್ನುವುದು ಮನೆಯ ರಕ್ಷಾ ಕವಚವಿದ್ದಂತೆ. ಪ್ರತಿ ಮಳೆಗಾಲದ ಪೂರ್ವದಲ್ಲಿ ಅರ್ಥಿಂಗ್‌ ವ್ಯವಸ್ಥೆಗೆ ಇಲೆಕ್ಟ್ರೀಶಿಯನ್‌ ಸಲಹೆಯಂತೆ ಉಪ್ಪು ಮತ್ತು ಇದ್ದಿಲು ಹಾಕಿ ಸೂಕ್ತವಾಗಿರಿಸಿಕೊಳ್ಳುವುದು ಅವಶ್ಯವಾಗಿದೆ.

ಮಾಹಿತಿ ಪಡೆಯುವೆ
ಜಿಲ್ಲೆಯಲ್ಲಿ ಸಿಡಿಲು ತೀವ್ರತೆ ತಡೆಗೆ ಮಿಂಚು ಪ್ರತಿಬಂಧಕ ಟವರ್‌ ಅಳವಡಿಕೆಯಂತಹ ಯಾವುದೇ ಪ್ರಸ್ತಾವಗಳು ಇಲ್ಲ ಎಂದೆನಿಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು.
 - ಜಿ.ಜಗದೀಶ್‌, ಜಿಲ್ಲಾಧಿಕಾರಿ
ಉಡುಪಿ

ಪ್ರಸ್ತಾವನೆ ಬಂದಿಲ್ಲ
ಸಿಡಿಲಿನ ತೀವ್ರತೆ ಇರುವ ಪ್ರದೇಶಗಳಲ್ಲಿ ಮಿಂಚುಬಂಧಕ ಟವರ್‌ ಅಳವಡಿಸಿಕೊಳ್ಳುತ್ತಾರೆ. ಆದರೆ ನಗರ ಸಭೆ ವ್ಯಾಪ್ತಿಯಲ್ಲಿ ಇದುವರೆಗೆ ಅಂತಹ ಪ್ರಸ್ತಾವನೆಗಳು ಬಂದಿಲ್ಲ. ದೊಡ್ಡ ಕಟ್ಟಡಗಳಿಗೆ ಖಾಸಗಿಯಾಗಿ ಅಳವಡಿಸಿಕೊಂಡಿರುತ್ತಾರೆ.
-ಮೋಹನ್‌ರಾಜ್‌ , ಎಂಜಿನಿಯರ್‌
ನಗರ ಸಭೆ, ಉಡುಪಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.