ಟ್ರಂಪ್‌ ವಿರುದ್ಧ ತೆರಿಗೆ ವಂಚನೆ ಆರೋಪ; ಪಾವತಿಸಿದ ತೆರಿಗೆ ಕೇವಲ 55 ಸಾವಿರ ರೂ.!


Team Udayavani, Sep 28, 2020, 3:29 PM IST

US-POLITICS-TRUMP

ಮಣಿಪಾಲ: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌  ಟ್ರಂಪ್‌ ಅವರು ತೆರಿಗೆ ವಂಚಿಸಿದ್ದಾರೆ ಎಂದು “ದಿ ನ್ಯೂಯಾರ್ಕ್‌ ಟೈಮ್ಸ್‌ ‘ ಗಂಭೀರ ಆರೋಪ ಮಾಡಿದೆ.

ಈ ಕುರಿತಂತೆ ವರದಿಯೊಂದನ್ನು ಪ್ರಕಟಿಸಿರುವ ದಿ ನ್ಯೂಯಾರ್ಕ್‌ ಟೈಮ್ಸ್, 2016ರಲ್ಲಿ ಟ್ರಂಪ್‌ ಶ್ವೇತಭವನವನ್ನು ಪ್ರವೇಶಿಸಿದಾಗ ಅವರು ಆ ವರ್ಷ (2016-17) 750 ಡಾಲರ್ ‌(ಸುಮಾರು 55,000 ರೂ.) ತೆರಿಗೆಯನ್ನು ಪಾವತಿಸಿದ್ದರು. 2017ರಲ್ಲಿಯೂ ಅವರು 750 ಡಾಲರ್‌ ತೆರಿಗೆ ಮಾತ್ರ ಪಾವತಿಸಿದ್ದರು. ಆದರೆ ಟ್ರಂಪ್‌ ಒಡೆತನದ ಸಂಸ್ಥೆಯು  ಭಾರತದಲ್ಲಿ ಅದೇ ಅವಧಿಗೆ 1,45,400 ಡಾಲ್‌ (ಸುಮಾರು 1.07 ಕೋಟಿ ರೂ.) ತೆರಿಗೆ ಪಾವತಿಸಿದೆ ಎಂದು ದಿ ನ್ಯೂಯಾರ್ಕ್‌ ಟೈಮ್ಸ್  ಹೇಳಿದೆ.

ವರದಿಯ ಪ್ರಕಾರ ಕಳೆದ 15 ವರ್ಷಗಳಲ್ಲಿ 10 ವರ್ಷ ಅವರು ಯಾವುದೇ ತೆರಿಗೆಯನ್ನು ಪಾವತಿಸಿಲ್ಲ. ಇದು ಈಗ ಅಮೆರಿಕದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದ್ದು, ಟ್ರಂಪ್‌ ಎರಡನೇ ಬಾರಿಗೆ ಚುನಾವಣಾ ರಂಗದಲ್ಲಿ ಸ್ಪರ್ಧಿಸುತ್ತಿರುವಾಗ ತೆರಿಗೆ ಪಾವತಿಗೆ ಸಂಬಂಧಿಸಿದ ವಿಷಯ ಬಂದಿದೆ. ಇದು ಟ್ರಂಪ್‌ಗೆ ನುಂಗಲಾರದ ತುತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದರೆ ನ್ಯೂಯಾರ್ಕ್‌ ಟೈಮ್ಸ್  ವರದಿಯನ್ನು ಟ್ರಂಪ್‌ ಸುಳ್ಳು ಎಂದಿದ್ದಾರೆ. ಅದರ ಜತೆಗೆ ಯು.ಎಸ್‌.ಎ. ಅಧ್ಯಕ್ಷರು ತಮ್ಮ ವೈಯಕ್ತಿಕ ಹಣಕಾಸಿನ ವಿವರಗಳನ್ನು ಬಿಡುಗಡೆ ಮಾಡುವುದು ಅನಿವಾರ್ಯವಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಆದರೆ ರಿಚರ್ಡ್‌ ನಿಕ್ಸನ್‌ (1969-74)ರಿಂದ ಬರಾಕ್‌ ಒಬಾಮ (2008-16)ರ ವರೆಗಿನ ಅಧ್ಯಕ್ಷರು ವೈಯಕ್ತಿಕ ಹಣಕಾಸು ಖಾತೆಗಳ ವಿವರಗಳನ್ನು ನೀಡಿದ್ದಾರೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನಿರಾಕರಿಸುವ ಮೂಲಕ ಟ್ರಂಪ್‌ ಈ ಸಂಪ್ರದಾಯವನ್ನು ಮುರಿದಿದ್ದಾರೆ ಎಂದು ವಿಪಕ್ಷ ಮುಗಿಬಿದ್ದಿದೆ. ಟ್ರಂಪ್‌ ಅವರ ತೆರಿಗೆ ರಿಟರ್ನ್ಸ್ 2016ರ ಚುನಾವಣೆಯಲ್ಲಿ ಒಂದು ಪ್ರಮುಖ ವಿಷಯವಾಗಿತ್ತು.

ಅಧ್ಯಕ್ಷೀಯ ಚುನಾವಣೆಯ ಸಂದರ್ಭ ಅಮೆರಿಕದಲ್ಲಿ ಸಾಮಾನ್ಯವಾಗಿ ಪ್ರತಿಸ್ಪರ್ಧಿಯ ಜತೆ ಸಾರ್ವಜನಿಕವಾಗಿ ಚರ್ಚೆಗಳು ನಡೆಯುತ್ತವೆ. ಇದನ್ನು ಅಲ್ಲಿ traditional presidential debate ಎಂದು ಕರೆಯಲಾಗುತ್ತದೆ. ಈ ಬಾರಿ ಆ ಚರ್ಚೆಯ ಮೊದಲು ಈ ವರದಿ ಪ್ರಕಟವಾಗಿದ್ದು, ಸಹಜವಾಗಿ ಟ್ರಂಪ್‌ ಅವರಿಗೆ ಆರಂಭಿಕ ಹಿನ್ನಡೆ ಎಂದೇ ಪರಿಗಣಿಸಲಾಗಿದೆ. ಮೊದಲ ಚರ್ಚೆ ಸೆಪ್ಟೆಂಬರ್‌ 29 ರಂದು ಓಹಿಯೋದಲ್ಲಿ ನಡೆಯಲಿದೆ. ಎರಡನೇ ಚರ್ಚೆ ಅಕ್ಟೋಬರ್‌ 15ರಂದು ಮತ್ತು ಮೂರನೆಯದು ಅಕ್ಟೋಬರ್‌ 22ರಂದು ನಡೆಯಲಿದೆ. ಏತನ್ಮಧ್ಯೆ ಡೆಮಾಕ್ರಟಿಕ್‌ ಅಭ್ಯರ್ಥಿ ಜೋ ಬಿಡನ್‌ ಅವರೂ ಈ ವರದಿಯ ಕುರಿತಾಗಿ ಟ್ರಪ್‌ ಮೇಲೆ ಆರೋಪಗಳು ಸುರಿಮಳೆಗೈಯುತ್ತಿದ್ದಾರೆ.

ಸೋಷಿಯಲ್‌ ಮೀಡಿಯಾ ಮೂಲಕ ಟ್ರಂಪ್‌ ಅವರ ಈ ನಡವಳಿಕೆಯನ್ನು ಡೆಮಾಕ್ರಟ್ಸ್‌ ಟೀಕಿಸಿದ್ದಾರೆ. ಟ್ರಂಪ್‌ , 1970ರ ಬಳಿಕ ತಮ್ಮ ತೆರಿಗೆ ರಿಟರ್ನ್ ಅನ್ನು ಬಹಿರಂಗಗೊಳಿಸದ ಅಮೆರಿಕದ ಮೊದಲ ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದ್ದಾರೆ. ಈ ವರದಿಯನ್ನು ಬಹಿರಂಗಗೊಳಿಸುವುದು ಕಾನೂನಾತ್ಮಕವಾಗಿ ತಪ್ಪಲ್ಲದಿದ್ದರೂ ಟ್ರಂಪ್‌ ಅಮೆರಿಕದ ಸಂಪ್ರದಾಯವನ್ನು ಮುರಿದಿದ್ದಾರೆ ಎನ್ನುವುದು ಅವರ ವಾದ.

 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.