ಜಿಲ್ಲೆಯ 4 ತಾಲೂಕುಗಳಲ್ಲಿ ಗ್ರಾ.ಪಂ. ಚುನಾವಣೆ: ಸಿದ್ಧತೆ ಸಂಪೂರ್ಣ: ಇಂದು ಪ್ರಥಮ ಹಂತದ ಮತದಾನ


Team Udayavani, Dec 22, 2020, 3:25 AM IST

udupiಜಿಲ್ಲೆಯ 4 ತಾಲೂಕುಗಳಲ್ಲಿ ಗ್ರಾ.ಪಂ. ಚುನಾವಣೆ: ಸಿದ್ಧತೆ ಸಂಪೂರ್ಣ: ಇಂದು ಪ್ರಥಮ ಹಂತದ ಮತದಾನ

ಉಡುಪಿ: ಉಡುಪಿ ಜಿಲ್ಲಾದ್ಯಂತ ಒಂದನೇ ಹಂತದ ಮತದಾನಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳು ನಡೆದಿವೆ. ಮಂಗಳವಾರ 67 ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.

2,349 ಅಭ್ಯರ್ಥಿಗಳು
ಮೊದಲ ಚುನಾವಣೆ ನಡೆಯಲಿರುವ ನಾಲ್ಕು ತಾಲೂಕುಗಳಲ್ಲಿ 1,241 ಸಾಮಾನ್ಯ ಮತ್ತು 1,108 ಮಹಿಳೆಯರು ಸೇರಿದಂತೆ 2,349 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ಕೂ ತಾಲೂಕುಗಳ 67 ಗ್ರಾ.ಪಂ.ಗಳಲ್ಲಿ 1,122 ಸ್ಥಾನಗಳಿದ್ದು ಇದರಲ್ಲಿ 63 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. 1,047 ಸ್ಥಾನಗಳಿಗೆ ಚುನಾವಣೆ ನಡೆಯ ಲಿದೆ. 12 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ.

3.77 ಲಕ್ಷ ಮತದಾರರು
ಉಡುಪಿ ತಾಲೂಕಿನಲ್ಲಿ 53,159 ಪುರುಷ ಮತ್ತು 57,281 ಮಹಿಳಾ ಮತದಾರರು, ಬ್ರಹ್ಮಾವರದಲ್ಲಿ 66,684 ಪುರುಷ, 71,970 ಮಹಿಳಾ ಮತದಾರರು, ಬೈಂದೂರಿನಲ್ಲಿ 42,910 ಪುರುಷ, 44,822 ಮಹಿಳಾ ಮತದಾರರು, ಹೆಬ್ರಿಯಲ್ಲಿ 19,654 ಪುರುಷ, 20,621 ಮಹಿಳಾ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,82,407 ಪುರುಷ, 1,94,694 ಮಹಿಳಾ ಮತ್ತು 6 ಇತರ ಮತದಾರರು ಸೇರಿದಂತೆ ಒಟ್ಟು 3,77,107 ಮಂದಿ ಮತದಾರರಿದ್ದಾರೆ.

ಮತಗಟ್ಟೆಗಳಿಗೆ ತೆರಳಿದ ಸಿಬಂದಿ
ಸೋಮವಾರ ಮಧ್ಯಾಹ್ನ ತಾಲೂಕು ಮಸ್ಟರಿಂಗ್‌ ಕೇಂದ್ರಗಳಿಂದ ತಯಾರಿ ಪೂರ್ಣಗೊಳಿಸಿ ಚುನಾವಣೆ ಅಧಿಕಾರಿಗಳು, ಸಿಬಂದಿ ಮತದಾನ ಕರ್ತವ್ಯಕ್ಕೆ ತಮ್ಮ ತಮ್ಮ ಮತಗಟ್ಟೆಗೆ ತೆರಳಿದರು. ಉಡುಪಿ ಬ್ರಹ್ಮಗಿರಿಯಲ್ಲಿರುವ ಸಂತ ಸಿಸಿಲೀಸ್‌ ವಿದ್ಯಾಸಂಸ್ಥೆ ಮಸ್ಟರಿಂಗ್‌ ಕೇಂದ್ರವಾಗಿದ್ದು, ಜಿಲ್ಲಾ ಚುನಾವಣ ವೀಕ್ಷಕ ಜಿ.ಟಿ. ದಿನೇಶ್‌ ಕುಮಾರ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಸ್ಥಳದಲ್ಲಿದ್ದರು. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್‌ ಕೇಂದ್ರಕ್ಕೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬೈಂದೂರು, ಬ್ರಹ್ಮಾವರದ ಮಸ್ಟರಿಂಗ್‌ ಕೇಂದ್ರದಿಂದ ಸಿಬಂದಿ ಮತಗಟ್ಟೆಗೆ ತೆರಳಿದರು. ಬೆಳಗ್ಗೆ 9 ಗಂಟೆಗೆ ಮಸ್ಟರಿಂಗ್‌ ಕೇಂದ್ರಕ್ಕೆ ಆಗಮಿಸಿದ ಸಿಬಂದಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಮಧ್ಯಾಹ್ನದ ವೇಳೆಗೆ ತೆರಳಿದರು. ಚುನಾವಣ ಆಯೋಗದಿಂದ ಅಧಿಕಾರಿ ಮತ್ತು ಸಿಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಡುಪಿ ತಾಲೂಕು ಮಸ್ಟರಿಂಗ್‌ ಕೇಂದ್ರದಿಂದ 22 ಕೆಎಸ್‌ಆರ್‌ಟಿಸಿ ಬಸ್‌, 3 ಮ್ಯಾಕ್ಸಿಕ್ಯಾಬ್‌, 4 ಜೀಪ್‌ಗ್ಳಿಂದ ವಿವಿಧ ಮತಗಟ್ಟೆಗಳಿಗೆ 1,350ಕ್ಕೂ ಅಧಿಕ ಮಂದಿ ಸಿಬಂದಿ ತೆರಳಿದರು.

370 ಹೊರ ಜಿಲ್ಲೆ ಪೊಲೀಸ್‌ ಸಿಬಂದಿ
ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಯಿಂದ 370 ಸಿಬಂದಿ ಕರೆಸಿಕೊಳ್ಳಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, 8 ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದಾರೆ.
– ಕುಮಾರಚಂದ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ

ಪ್ರಕ್ರಿಯೆ
ಮಂಗಳವಾರ ನಡೆಯಲಿರುವ ಪ್ರಥಮ ಹಂತದ ಚುನಾವಣೆಗೆ 556 ಮತಗಟ್ಟೆಗಳಿದ್ದು, ಒಟ್ಟು 68 ನಾವಣಾಧಿಕಾರಿಗಳನ್ನು, 73 ಸಹಾಯಕ ಚುನಾವಣಾಧಿಕಾರಿಗಳನ್ನು ಹಾಗೂ 4 ನೋಡಲ್‌ ಅಧಿಕಾರಿಗಳನ್ನು ಚುನಾವಣೆ ಪ್ರಕ್ರಿಯೆಗಾಗಿ ನೇಮಿಸಲಾಗಿದೆ. ಚುನಾವಣೆಗೆ ಬೇಕಿರುವ ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿದೆ.
– ಜಿ. ಜಗದೀಶ್‌, ಜಿಲ್ಲಾಧಿಕಾರಿ

ಊಟ, ತಿಂಡಿಗೆ ಟಿಎ, ಡಿಎ
ಉಡುಪಿ ತಾಲೂಕಿನಲ್ಲಿ 133 ಸಾಮಾನ್ಯ, 20 ಸೂಕ್ಷ್ಮ, 8 ಅತೀಸೂಕ್ಷ್ಮ ಮತಗಟ್ಟೆಗಳಿವೆ. ಕೋವಿಡ್‌ ಕಾರಣದಿಂದಾಗಿ ಈ ಬಾರಿ ಮತಗಟ್ಟೆ ಅಧಿಕಾರಿ, ಸಿಬಂದಿಗೆ ಆಯೋಗದಿಂದ ಟಿಎ, ಡಿಎ ನೀಡಲಾಗುತ್ತಿದೆ. ಮತಗಟ್ಟೆ ಸಮೀಪದ ಹೊಟೇಲ್‌, ಕ್ಯಾಂಟೀನ್‌ಗಳಿಂದ ಊಟ, ಉಪಾ‌ಹಾರ ತರಿಸಿಕೊಂಡು ಸೇವಿಸಲಿದ್ದಾರೆ ಎಂದು ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.