ಆರ್‌ಟಿಇ ಮೊದಲ ಸುತ್ತಿನಲ್ಲಿ 7,636 ಸೀಟು ಹಂಚಿಕೆ


Team Udayavani, May 7, 2019, 3:06 AM IST

rte

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಲಭ್ಯವಿರುವ 17,720 ಸೀಟಿಗೆ ಸೋಮವಾರ ಮೊದಲ ಸುತ್ತಿನ ಆನ್‌ಲೈನ್‌ ಲಾಟರಿ ಪ್ರಕ್ರಿಯೆ ನಡೆಯಿತು.

ಮೊದಲನೇ ಸುತ್ತಿನಲ್ಲಿ 7636 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ವಿಶೇಷ ವರ್ಗಕ್ಕೆ 23, ಪರಿಶಿಷ್ಟ ಜಾತಿಗೆ 1,382, ಪರಿಶಿಷ್ಟ ಪಂಗಡಕ್ಕೆ 262, ಇತರ ವರ್ಗಕ್ಕೆ 5969 ಸೀಟುಗಳನ್ನು ಆನ್‌ಲೈನ್‌ ಮೂಲಕ ಹಂಚಿಕೆ ಮಾಡಲಾಗಿದೆ. ಆದರೆ, 643 ಶಾಲೆಗಳ 7243 ಸೀಟುಗಳಿಗೆ ಒಂದು ಅರ್ಜಿಯೂ ಬಂದಿಲ್ಲ.

ರಾಜ್ಯದ 2172 ಅನುದಾನಿತ ಮತ್ತು 219 ಅನುದಾನ ರಹಿತ ಶಾಲೆಗಳ 17,720 ಸೀಟುಗಳಲ್ಲಿ, ಪರಿಶಿಷ್ಟ ಜಾತಿಗೆ 5,461, ಪರಿಶಿಷ್ಟ ಪಂಗಡಕ್ಕೆ 1,157 ಮತ್ತು ಇತರೆ ವರ್ಗಕ್ಕೆ 1,102 ಸೀಟುಗಳನ್ನು ನಿಗದಿ ಮಾಡಲಾಗಿದೆ. ಅನುದಾನಿತ ಶಾಲೆಗಳಲ್ಲಿ 15,011 ಒಂದನೇ ತರಗತಿ ಹಾಗೂ 92 ಎಲ್‌ಕೆಜಿ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1,209 ಎಲ್‌ಕೆಜಿ ಮತ್ತು 1,408 ಒಂದನೇ ತರಗತಿ ಲಭ್ಯವಿದೆ.

ಆನ್‌ಲೈನ್‌ ಲಾಟರಿ ಪ್ರಕ್ರಿಯೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಎಂ.ಟಿ.ರೇಜು, ಎಲ್‌ಕೆಜಿಗೆ 5,197 ಮತ್ತು ಒಂದನೇ ತರಗತಿಗೆ 13,201 ಸೇರಿದಂತೆ 18,398 ಅರ್ಜಿಗಳು ದಾಖಲಾಗಿವೆ. ಇದರಲ್ಲಿ ಎಲ್‌ಕೆಜಿಗೆ 4,269 ಮತ್ತು 1ನೇ ತರಗತಿಗೆ 12,294 ಅರ್ಜಿಗಳು ಅರ್ಹವಾಗಿದೆ. ಸಮರ್ಪಕ ದಾಖಲೆಗಳಿಲ್ಲದ 1,836 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ವಿವರಿಸಿದರು.

ಸೀಟು ಸಿಕ್ಕಿರುವ ಮಕ್ಕಳ ಪಾಲಕ, ಪೋಷಕರ ಮೊಬೈಲ್‌ಗ‌ಳಿಗೆ ಸಂದೇಶ ರವಾನೆಯಾಗಿರುತ್ತದೆ. ಮೇ 15ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡಬೇಕು. ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಮೇ 25ರಂದು ನಡೆಯಲಿದೆ. ಮೇ 30ರೊಳಗೆ ಆರ್‌ಟಿಇ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಆರ್‌ಟಿಇ ಕಾಯ್ದೆಯ ನಿಯಮಕ್ಕೆ ತಿದ್ದುಪಡಿ ತಂದಿದ್ದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದಲ್ಲಿ ಬರುವ ಅಂತಿಮ ತೀರ್ಪಿಗೆ ಇಲಾಖೆ ಬದ್ಧವಾಗಿರುತ್ತದೆ. ಹೊಸ ನಿಯಮದಂತೆ ಲಾಟರಿ ಪ್ರಕ್ರಿಯೆ ನಡೆಸಿದ್ದೇವೆ. ಬೆಂಗಳೂರಿನ ಗಿರಿನಗರ ಮತ್ತು ಗಣೇಶ ಮಂದಿರ ವಾರ್ಡ್‌ಗಳಲ್ಲಿ ಸರ್ಕಾರಿ ಶಾಲೆಗಳು ಇಲ್ಲದಿರುವುದರಿಂದ ಈ ವಾರ್ಡ್‌ಗಳಲ್ಲಿ ಆರ್‌ಟಿಇ ಸೀಟು ಹಂಚಿಕೆ ಮಾಡಿದ್ದೇವೆ ಎಂದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.