Gaza: ಗಾಜಾದಲ್ಲಿ ನಿಲ್ಲದ ವೈಮಾನಿಕ ದಾಳಿ- ದಾಳಿಯಿಂದ ನೆರವಿಗೆ ತೊಂದರೆ: ವಿಶ್ವಸಂಸ್ಥೆ


Team Udayavani, Oct 25, 2023, 11:12 PM IST

isreal bomb

ಟೆಲ್‌ ಅವಿವ್‌: ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ನಿಂದ ಬಾಂಬ್‌ ದಾಳಿಗಳು ತೀವ್ರಗೊಂಡಿದೆ. ಇದೇ ವೇಳೆ ತನಗೆ ಕೂಡಲೇ ಇಂಧನ ಒದಗಿಸದಿದ್ದರೆ ಗಾಜಾ ಪಟ್ಟಿಯಲ್ಲಿ ನೆರವಿನ ಕಾರ್ಯವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

ಈಗಾಗಲೇ ಸಿಬಂದಿ ಕೊರತೆ ಹಾಗೂ ಸಂಪನ್ಮೂಲ ಕೊರತೆಯ ಕಾರಣ ಗಾಜಾ ನಗರದ ಹಲವು ಆಸ್ಪತ್ರೆಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ಅಗತ್ಯ ವಸ್ತುಗಳ ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದಾಗಿ ನೆರವು ಕಾರ್ಯಾಚರಣೆ ಮುಂದುವರಿಸುವುದು ಕಷ್ಟಕರ ಎಂದು ವಿಶ್ವಸಂಸ್ಥೆ ಹೇಳಿದೆ.

8 ಸಿರಿಯಾ ಯೋಧರ ಸಾವು: ಇಸ್ರೇಲ್‌ ನಡೆಸಿದ ವಾಯು ದಾಳಿಗೆ ಸಿರಿಯಾದ 8 ಯೋಧರು ಮೃತಪಟ್ಟಿದ್ದಾರೆ. ಅಲ್ಲೆಪ್ಪೊ ವಿಮಾನ ನಿಲ್ದಾಣದ ಮೇಲೆ ಪುನಃ ಇಸ್ರೇಲ್‌ ಬಾಂಬ್‌ ದಾಳಿ ನಡೆಸಿದೆ. ಕಳೆದ 15 ದಿನಗಳಲ್ಲಿ ಅಲ್ಲೆಪ್ಪೊ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್‌ ವಾಯು ಸೇನೆ ದಾಳಿ ಮಾಡಿರುವುದು ಇದು ನಾಲ್ಕನೇ ಬಾರಿ ಎಂದು ಸಿರಿಯಾ ವಿದೇಶಾಂಗ ಸಚಿವಾಲಯ ತಿಳಿಸಿದೆ.

750ಕ್ಕೂ ಹೆಚ್ಚು ಮಂದಿ ಸಾವು: ಇನ್ನೊಂದೆಡೆ ಗಾಜಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಇಸ್ರೇಲ್‌ ಸೇನೆಯ ವಾಯು ದಾಳಿಯಿಂದ ಮಂಗಳವಾರ ಮತ್ತು ಬುಧವಾರ ಗಾಜಾದಲ್ಲಿ 750ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎಂದು ತಿಳಿಸಿದೆ. ಆದರೆ ಈ ಪೈಕಿ ಹಮಾಸ್‌ ಉಗ್ರರು ಎಷ್ಟು ಎಂಬುದನ್ನು ಅದು ಬಹಿರಂಗಪಡಿಸಿಲ್ಲ. ಅ.7ರಿಂದ ಇದುವರೆಗೆ ಗಾಜಾ ಪಟ್ಟಿಯಲ್ಲಿ

6,546ಕ್ಕೂ ಅಧಿಕ, ಇಸ್ರೇಲ್‌ನಲ್ಲಿ 1,400 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಉಗ್ರ ಸಂಘಟನೆಯಲ್ಲ: “ಹಮಾಸ್‌ ಉಗ್ರ ಸಂಘಟನೆಯಲ್ಲ. ಬದಲಾಗಿ ತನ್ನ ಭೂಮಿಯನ್ನು ರಕ್ಷಿಸಲು ಹೋರಾಟ ನಡೆಸುತ್ತಿರುವ ವಿಮೋಚನ ಸಂಘಟನೆ” ಎಂದು ಟರ್ಕಿ ಅಧ್ಯಕ್ಷ ರೀಪ್‌ ತಯ್ಯಿಪ್‌ ಎರ್ಡೋಗನ್‌ ಪ್ರತಿಪಾದಿಸಿದ್ದಾರೆ. “ಇಸ್ರೇಲ್‌ ಮತ್ತು ಹಮಾಸ್‌ ಕೂಡಲೇ ಕದನ ವಿರಾಮ ಘೋಷಿಸಬೇಕು. ಗಾಜಾ ಪಟ್ಟಿಯಲ್ಲಿ ಶಾಂತಿ ನೆಲೆಸಲು ಎಲ್ಲ ಮುಸ್ಲಿಂ ರಾಷ್ಟ್ರಗಳ ಒಟ್ಟಾಗಿ ಕೆಲಸ ಮಾಡಬೇಕು. ಗಾಜಾ ಮೇಲಿನ ದಾಳಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ವಿಶ್ವ ಸಮುದಾಯವು ಇಸ್ರೇಲ್‌ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದ್ದಾರೆ.

ಫ್ರಾನ್ಸ್‌ ನೆರವಿನ ಹಸ್ತ: ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳ ನೆರವಿಗಾಗಿ ಔಷಧಗಳು ಹಾಗೂ ವೈದ್ಯಕೀಯ ಪರಿಕರಗಳನ್ನು ಹೊತ್ತ ಫ್ರಾನ್ಸ್‌ ನೌಕಾ ಪಡೆಯ ಹಡಗು ಶೀಘ್ರ ಗಾಜಾ ಕರಾವಳಿಗೆ ತೆರಳಲಿದೆ ಎಂದು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯಲ್‌ ಮ್ಯಾಕ್ರಾನ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.