ಗಡಿಯಲ್ಲಿ ನಿಲ್ಲದ ಪಾಕಿಸ್ಥಾನ, ಚೀನ ಮೊಂಡಾಟ


Team Udayavani, Sep 30, 2021, 5:55 AM IST

ಗಡಿಯಲ್ಲಿ ನಿಲ್ಲದ ಪಾಕಿಸ್ಥಾನ, ಚೀನ ಮೊಂಡಾಟ

ಭಾರತದ ಪಾಲಿಗೆ ಬಲುದೊಡ್ಡ ಹೊರೆಯಾಗಿಯೇ ಪರಿಣಮಿಸಿರುವ ನೆರೆಯ ರಾಷ್ಟ್ರಗಳಾದ ಪಾಕಿಸ್ಥಾನ ಮತ್ತು ಚೀನ ನಿರಂತರವಾಗಿ ಗಡಿಯಲ್ಲಿ ತಮ್ಮ ಮೊಂಡಾಟವನ್ನು ತೋರುತ್ತಲೇ ಬಂದಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರಂತರವಾಗಿ ಭಾರತದಿಂದ ಮುಖಭಂಗಕ್ಕೀಡಾಗುತ್ತಿರುವ ಹೊರತಾಗಿಯೂ ಈ ಎರಡೂ ರಾಷ್ಟ್ರಗಳು ಭಾರತದ ವಿರುದ್ಧ ಕತ್ತಿ ಮಸೆಯುತ್ತಲೇ ಇವೆ. ಪಾಕಿಸ್ಥಾನ ಉಗ್ರರನ್ನು ಭಾರತದ ವಿರುದ್ಧ ಎತ್ತಿಕಟ್ಟುವ ಕಾರ್ಯದಲ್ಲಿ ನಿರತವಾಗಿದ್ದರೆ, ಚೀನದ ಯೋಧರು ಪದೇ ಪದೆ ಗಡಿ ಯಲ್ಲಿ ಭಾರತದ ಭೂಭಾಗದೊಳಗೆ ನುಸುಳಿ ಅಲ್ಲಿನ ಮೂಲಸೌಕರ್ಯ ಗಳನ್ನು ಹಾಳುಗೆಡವುತ್ತಿರುವುದಲ್ಲದೆ ಶಾಂತಿಗೆ ಭಂಗ ತಂದೊಡ್ಡುತ್ತಿದ್ದಾರೆ.

ಪಾಕಿಸ್ಥಾನವು ಉಗ್ರರನ್ನು ಗಡಿಯಲ್ಲಿ ಒಳನುಸುಳಿಸುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದು, ಭಾರತೀಯ ಸೇನಾ ಪಡೆಗಳು ಅವರನ್ನು ಸದೆಬಡಿಯುತ್ತಲೇ ಬಂದಿವೆ. ಇತ್ತೀಚಿನ ದಿನಗಳಲ್ಲಿ ಗಡಿಯಲ್ಲಿ ಉಗ್ರರಿಂದ ನುಸುಳುವಿಕೆ ಪ್ರಯತ್ನ ದಿನಂಪ್ರತಿ ಎಂಬಂತೆ ನಡೆಯುತ್ತಿದೆ. ಉಗ್ರರ ಹತ್ಯಾ ಸರಣಿ ಮುಂದುವರಿಯುತ್ತಿದ್ದರೂ ಪಾಕಿಸ್ಥಾನ ಮಾತ್ರ ತನ್ನ ಕುತಂತ್ರ ವನ್ನು ಬಿಡದೆ ನುಸುಳುಕೋರರಿಗೆ ಆಶ್ರಯ, ತರಬೇತಿ ನೀಡುವ ಕೆಲಸವನ್ನು ಮುಂದುವರಿಸಿದೆ. ಆದರೆ ಭಾರತೀಯ ಪಡೆಗಳು ಪಾಕಿಸ್ತಾನಿ ಸೇನೆಯ ಈ ಎಲ್ಲ ಷಡ್ಯಂತ್ರಗಳನ್ನು ಅರಿತುಕೊಂಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ. ನುಸುಳುಕೋರರ ವಿರುದ್ಧದ ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಸೆರೆ ಹಿಡಿದಿರುವ ಭಾರತೀಯ ಪಡೆಗಳು ಆತನನ್ನು ವಶಕ್ಕೆ ತೆಗೆದುಕೊಂಡು ತೀವ್ರ ತನಿಖೆಗೊಳಪಡಿಸಿವೆ. ಈ ವೇಳೆ ಆತ ಪಾಕಿಸ್ಥಾನ ಸೇನೆಯ ಷಡ್ಯಂತ್ರ, ಕುಕೃತ್ಯಗಳ ಬಗೆಗಿನ ಸಂಪೂರ್ಣ ಮಾಹಿತಿ ಯನ್ನು ಬಾಯ್ಬಿಟ್ಟಿದ್ದು ಪಾಕಿಸ್ಥಾನದ ನರಿಬುದ್ಧಿಗೆ ಮತ್ತಷ್ಟು ಸಾಕ್ಷ್ಯಾಧಾರಗಳು ಲಭಿಸಿವೆ. ಕೆಲವೊಂದು ತಿಂಗಳುಗಳಿಂದೀಚೆಗೆ ಒಂದಿಷ್ಟು ತಣ್ಣಗಾಗಿದ್ದ ಚೀನ ಸೇನೆ ಮತ್ತೆ ತನ್ನ ಬಾಲ ಬಿಚ್ಚಲಾರಂಭಿಸಿದೆ. ತಿಂಗಳ ಹಿಂದೆ ಚೀನ ಯೋಧರು ಉತ್ತರಾಖಂಡದ ಬಾರಾಹೋತಿಯಲ್ಲಿರುವ ಗಡಿ ಪ್ರದೇಶಕ್ಕೆ ನುಸುಳಿ ಸುಮಾರು ಮೂರು ತಾಸು ಅಲ್ಲಿ ಠಿಕಾಣಿ ಹೂಡಿದ್ದೇ ಅಲ್ಲದೆ ಅಲ್ಲಿದ್ದ ಕಾಲ್ಸೇತುವೆಯನ್ನು ಧ್ವಂಸಗೈದು ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟಕ್ಕೂ ಸಿದ್ದರಾಮಯ್ಯರಿಗೂ ಏನು ಸಂಬಂಧ: ಆರಗ ಪ್ರಶ್ನೆ

ಭಾರತೀಯ ಪಡೆಗಳು ಆ ಪ್ರದೇಶಕ್ಕೆ ಧಾವಿಸುವಷ್ಟರಲ್ಲಿ ಚೀನಿ ಯೋಧರು ಅಲ್ಲಿಂದ ಕಾಲ್ಕಿತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ. ಗಡಿ ಭಾಗದಲ್ಲಿ ಚೀನ ಸೇನೆ ಅತ್ಯಂತ ರಹಸ್ಯವಾಗಿ ಸೇನಾ ಮೂಲಸೌಕರ್ಯಗಳ ನಿರ್ಮಾಣ ಕಾರ್ಯ ನಡೆಸುವ ಮೂಲಕ ಗಡಿ ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣ ಸೃಷ್ಟಿಸುತ್ತಿದೆ.

ಪ್ರಧಾನಿ ಮೋದಿ ಅವರು ತಮ್ಮ ಇತ್ತೀಚಿನ ಅಮೆರಿಕ ಪ್ರವಾಸದ ವೇಳೆ ಪಾಲ್ಗೊಂಡಿದ್ದ ಕ್ವಾಡ್‌ ಶೃಂಗಸಭೆ, ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲೂ ಚೀನ ಮತ್ತು ಪಾಕಿ ಸ್ಥಾ ನದ ಈ ನಿಲುವುಗಳ ಕುರಿತಂತೆ ಪರೋಕ್ಷವಾಗಿ ಪ್ರಸ್ತಾವಿಸಿ ಅವುಗಳ ವಿರುದ್ಧ ಕಿಡಿಕಾರಿದ್ದರು. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪಾಕ್‌ ಪ್ರಧಾನಿ ಇಮ್ರಾನ್‌ಖಾನ್‌ ಮತ್ತೆ ಕೆದಕಿದ ಸಂದರ್ಭದಲ್ಲಿ ಭಾರತದ ಪ್ರತಿನಿಧಿ ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಮೂಲಕ ಪಾಕಿಸ್ಥಾನದ ಮುಖವಾಡವನ್ನು ಕಳಚುವಲ್ಲಿ ಯಶಸ್ವಿಯಾಗಿದ್ದರು. ಇವೆಲ್ಲದರ ಹೊರತಾಗಿಯೂ ಚೀನ ಮತ್ತು ಪಾಕಿಸ್ಥಾನ ಅನಾವಶ್ಯಕವಾಗಿ ಗಡಿಯಲ್ಲಿ ತಕರಾರು ತೆಗೆಯುವ ಮೂಲಕ ಈ ಭಾಗದ ಮಾತ್ರವಲ್ಲದೆ ಇಡೀ ವಿಶ್ವದ ಶಾಂತಿಗೆ ಭಂಗ ತರುತ್ತಿರುವುದು ತೀರಾ ಆತಂಕಕಾರಿ ಬೆಳವಣಿಗೆಯಾಗಿದೆ. ಈ ಎರಡೂ ರಾಷ್ಟ್ರಗಳಿಗೆ ಜಾಗತಿಕ ಸಮುದಾಯ ಕಠಿನ ಸಂದೇಶವನ್ನು ರವಾನಿಸಲೇಬೇಕಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.