ಎಡೆಬಿಡದೆ ಸುರಿದ ಮಳೆ; ವಿವಿಧೆಡೆ ಮನೆಗಳಿಗೆ ಹಾನಿ


Team Udayavani, Jun 15, 2020, 5:42 AM IST

ಎಡೆಬಿಡದೆ ಸುರಿದ ಮಳೆ; ವಿವಿಧೆಡೆ ಮನೆಗಳಿಗೆ ಹಾನಿ

ಮಹಾನಗರ: ಕರಾವಳಿಯಲ್ಲಿ ಮುಂಗಾರು ಮಳೆ ವೇಗ ಪಡೆಯುತ್ತಿದ್ದು, ರವಿವಾರ ಮಂಗಳೂರು ಸುತ್ತಮುತ್ತಲಿನಲ್ಲಿ ಉತ್ತಮ ಮಳೆಯಾಗಿದೆ. ಜತೆಗೆ ವಿವಿಧೆಡೆ ಹಾನಿಯೂ ಸಂಭವಿಸಿದೆ.

ಮುಂಜಾನೆಯೇ ಆರಂಭಗೊಂಡ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಕೆಲವೆಡೆ ಮಳೆ ನೀರು ಮನೆಗೆ ನುಗ್ಗಿದರೆ, ಕೊಡಕಲ್‌ ಹಾಗೂ ಕಾವೂರಿನಲ್ಲಿ ಮನೆಗೆ ಹಾನಿ ಸಂಭವಿಸಿದೆ. ಪಾಂಡೇಶ್ವರದಲ್ಲಿ ಮರ ಬಿದ್ದಿದೆ. ಮಂಗಳೂರು ನಗರ, ಗ್ರಾಮಾಂತರ ಭಾಗದೆಲ್ಲೆಡೆ ರವಿವಾರ ಉತ್ತಮ ಮಳೆಯಾಗಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಪಂಪ್‌ವೆಲ್‌, ಜ್ಯೋತಿ, ಕೊಟ್ಟಾರಚೌಕಿ ಮೊದಲಾದೆಡೆ ಮಳೆನೀರು ರಸ್ತೆಯಲ್ಲಿಯೇ ಹರಿದು ಸಂಚಾರ ಬಾಧಿತವಾಯಿತು.ಪಡೀಲ್‌ ಕೊಡಕಲ್‌ನ ಸುಗಂಧಿ ಅವರ ಮನೆ ಮೇಲೆ ಪಕ್ಕದ ತಡೆ ಗೋಡೆ ಬಿದ್ದು ಹಾನಿ ಸಂಭವಿಸಿದೆ. ಮನೆ ಮಂದಿ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾವೂರಿನಲ್ಲಿಯೂ ಮನೆಗೆ ಹಾನಿಯಾಗಿದೆ. ಸೂಟರ್‌ಪೇಟೆಯಲ್ಲಿ ಮನೆಯೊಂದಕ್ಕೆ ನೀರು ನುಗ್ಗಿ ಸಮಸ್ಯೆಯಾಗಿತ್ತು. ಪಾಂಡೇಶ್ವರ ದೇವಸ್ಥಾನ‌ ಸಮೀಪ ಮಳೆಯ ಪರಿಣಾಮ ಮರವೊಂದು ಬಿದ್ದಿದೆ

ಸಹಾಯವಾಣಿಗಳ ಅಸಹಾಯಕತೆ!
ಮಳೆಗಾಲದ ಸಂದರ್ಭ ಯಾವುದೇ ಸಮಸ್ಯೆಗಳಿದ್ದರೆ 1077 ನಂಬರಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಆದರೆ ಆ ಸಂಖ್ಯೆಗೆ ಕರೆ ಮಾಡಿದರೆ ಮಳೆಗಾಲದ ವಿಚಾರ ನಮಗೆ ಬರುವುದಿಲ್ಲ. ನೀವು ಜಿಲ್ಲಾಧಿಕಾರಿ ಕಚೇರಿ ನಂಬರಿಗೆ ಕರೆ ಮಾಡಿ ಎನ್ನುತ್ತಾರೆ. ರವಿವಾರ ಜಿಲ್ಲಾಧಿಕಾರಿ ಕಚೇರಿ ನಂಬರಿಗೆ ಕರೆ ಮಾಡಿದರೆ ಸ್ವೀಕರಿಸುವವರು ಯಾರೂ ಇರಲಿಲ್ಲ. ಈ ಮಧ್ಯೆ ಮಂಗಳೂರು ಪಾಲಿಕೆ ವ್ಯಾಪ್ತಿಯ ಮಳೆಗಾಲದ ಸಮಸ್ಯೆ ಇತ್ಯರ್ಥಕ್ಕೆ 2220306 ನಂಬರಿನಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಪಾಲಿಕೆ ಹಲವು ಬಾರಿ ತಿಳಿಸಿದೆ. ಆದರೆ ಆ ನಂಬರಿನಲ್ಲೂ ಕರೆ ಸ್ವೀಕರಿಸುವವರು ಇಲ್ಲ. ಇದ್ದೂ ಇಲ್ಲದಂತೆ ಪಾಲಿಕೆ ವರ್ತಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಕೊಣಾಜೆ, ಅಂಬ್ಲಿಮೊಗರು: 3 ಮನೆಗಳಿಗೆ ಹಾನಿ
ಉಳ್ಳಾಲ: ಭಾರೀ ಮಳೆಯಿಂದಾಗಿ ಕೊಣಾಜೆ ಗ್ರಾಮ ಪಂಚಾಯತ್‌ ಮತ್ತು ಅಂಬ್ಲಿಮೊಗರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತಡೆಗೋಡೆ ಕುಸಿದು ಮೂರು ಮನೆಗಳಿಗೆ ಹಾನಿಯಾಗಿದೆ. ನೀರು ಹರಿದು ಹೋಗಲು ಚರಂಡಿ ಸಮಸ್ಯೆಯಿಂದ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ನೀರು ತುಂಬಿ ವಾಹನ ಚಾಲಕರು ಪರದಾಡುವಂತಾಯಿತು.

ಕೊಣಾಜೆ ಗ್ರಾಮದ ಪಟ್ಟೋರಿಯಲ್ಲಿ ಶಾಂತಪ್ಪ ಅವರಿಗೆ ಸೇರಿದ ಬಾಡಿಗೆ ಮನೆಯ ಮೇಲೆ ಪಕ್ಕದ ತಡೆಗೋಡೆ ಬಿದ್ದು ಮೆಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಅಲ್ಲಿ ವಾಸವಿರುವ ತಿರುಮಲ ಸ್ವಾಮಿ ಅವರ ಕುಟುಂಬದವರು ತತ್‌ಕ್ಷಣ ಮನೆಯಿಂದ ಹೊರಗೆ ಓಡಿ ಅಪಾಯದಿಂದ ಪಾರಾಗಿದ್ದಾರೆ. ಅತಂತ್ರರಾಗಿರುವ ಅವರ ಕುಟುಂಬಕ್ಕೆ ಅಸೈಗೋಳಿಯ ಪ್ರಕಾಶ್‌ ಶೆಟ್ಟಿ ಅವರು ಬೇರೆ ಕಡೆ ಆಶ್ರಯ ಕಲ್ಪಿಸಿದ್ದಾರೆ.

ಕೊಣಾಜೆ ಪುಳಿಂಚಾಡಿಯ ಆಂಟೋನಿ ವಿನ್ಸೆಂಟ್‌ ಲೋಬೋ ಅವರ ಮನೆಗೆ ಪಕ್ಕದ ಮನೆಯ ತಡೆಗೋಡೆ ಕುಸಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟು ಮನೆಗೆ ಅಪಾರ ಹಾನಿ ಸಂಭವಿಸಿದೆ. ಸ್ಥಳ್ಕಕೆ ಗ್ರಾಮ ಕರಣಿಕ ಪ್ರಸಾದ್‌, ಪಂಚಾಯತ್‌ ಅಧ್ಯಕ್ಷ ನಝರ್‌ ಷಾ ಪಟ್ಟೋರಿ, ಸದಸ್ಯರಾದ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಂಬ್ಲಿಮೊಗರು ಗ್ರಾ.ಪಂ. ವ್ಯಾಪ್ತಿಯ ತಿಲಕ್‌ ನಗರದಲ್ಲಿ ರಝೀಯ ಅವರ ಮನೆಗೆ ಪಕ್ಕದ ಮನೆಯ ತಡೆಗೋಡೆ ಬಿದ್ದು ಸುಮಾರು 6 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಹನೀಫ್‌ ಅವರ ಮನೆಯ ತಡೆಗೋಡೆ, ಪರ್ಗಾಂವ್‌ ರಸ್ತೆಯ ಹಮೀದ್‌ ಮತ್ತು ಗುಲಾಬಿ ಅವರಿಗೆ ಸೇರಿದ ತಡೆಗೋಡೆ ಕುಸಿದಿದೆ. ಈ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಅಂಬ್ಲಿಮೊಗರು ಗ್ರಾ.ಪಂ. ಅಧ್ಯಕ್ಷ ರಫೀಕ್‌ ಅಂಬ್ಲಿಮೊಗರು, ಸ್ಥಳೀಯ ಸದಸ್ಯೆ ಧನಲಕ್ಷ್ಮೀ ಭಟ್‌, ಗ್ರಾಮ ಸಹಾಯಕ ನಿತಿನ್‌ ಭೇಟಿ ನೀಡಿದರು.

ಕಡಲ್ಕೊರೆತ
ಇದೇ ವೇಳೆ ಉಳ್ಳಾಲದ ವಿವಿಧೆಡೆ, ಸೋಮೇಶ್ವರ ಉಚ್ಚಿಲದಲ್ಲಿ ಕಡಲಿನ ಅಬ್ಬರ ಹೆಚ್ಚಾಗಿದೆ. ದೊಡ್ಡ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.