ಜಾಹೀರಾತು ದರ ಹೆಚ್ಚಿಸಿ: ಕೇಂದ್ರಕ್ಕೆ ಮನವಿ

ಮುದ್ರಣ ಮಾಧ್ಯಮಗಳ ಸ್ಥಿತಿ ಬಗ್ಗೆ ಸರ್ಕಾರಕ್ಕೆ ಐಎನ್‌ಎಸ್‌ಪತ್ರ

Team Udayavani, Apr 26, 2020, 6:14 AM IST

ಜಾಹೀರಾತು ದರ ಹೆಚ್ಚಿಸಿ: ಕೇಂದ್ರಕ್ಕೆ ಮನವಿ

ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್-19 ವೈರಸ್‌ ವ್ಯಾಪಿಸುವಿಕೆಯು ಕಳೆದ ಎರಡು ತಿಂಗಳಿಂದ ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿರುವ ಕಾರಣ, ಈ ಅವಧಿಯಲ್ಲಿ ಮುದ್ರಣ ಮಾಧ್ಯಮವು ಸುಮಾರು 4,500 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದೆ. ಹೀಗಾಗಿ, ಕೇಂದ್ರ ಸರ್ಕಾರವು ಕೂಡಲೇ ಎಲ್ಲ ಪತ್ರಿಕಾ ಸಂಸ್ಥೆಗಳಿಗೆ 2 ವರ್ಷಗಳ ತೆರಿಗೆ ರಜೆ ಘೋಷಿಸಬೇಕು ಹಾಗೂ ಸರ್ಕಾರದ ಜಾಹೀರಾತಿನ ದರವನ್ನು ಹೆಚ್ಚಳ ಮಾಡಬೇಕು ಎಂದು ಇಂಡಿಯನ್‌ ನ್ಯೂಸ್‌ ಪೇಪರ್‌ ಸೊಸೈಟಿ (ಐಎನ್‌ಎಸ್‌)ಮನವಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ರವಿ ಮಿತ್ತಲ್‌ ಅವರಿಗೆ ಈ ಕುರಿತು ಪತ್ರ ಬರೆದಿರುವ ಐಎನ್‌ಎಸ್‌ ಅಧ್ಯಕ್ಷ ಶೈಲೇಶ್‌ ಗುಪ್ತಾ, ಪತ್ರಿಕೆಗಳಿಗೆ ನೀಡಲಾದ ಜಾಹೀರಾತುಗಳ ಬಾಕಿ ಮೊತ್ತವನ್ನು ಕೂಡಲೇ ಪಾವತಿಸುವಂತೆ ಬ್ಯೂರೋ ಆಫ್ ಔಟ್‌ ರೀಚ್‌ ಆ್ಯಂಡ್‌ ಕಮ್ಯೂನಿಕೇಷನ್‌(ಬಿಒಸಿ)ಗೆ ಸೂಚನೆ ನೀಡಬೇಕು ಹಾಗೂ ವಿವಿಧ ರಾಜ್ಯ ಸರ್ಕಾರಗಳಿಗೂ ಈ ಕುರಿತು ಸಲಹೆ ನೀಡಬೇಕು ಎಂದೂ ಕೋರಿಕೊಂಡಿದ್ದಾರೆ.

ಕೋರಿಕೆಗಳೇನು?: ದೇಶದ ಮುದ್ರಣ ಮಾಧ್ಯಮಗಳಿಗೆ ಜಾಹೀರಾತಿನಿಂದಾಗಲೀ, ಪ್ರಸರಣದಿಂದಾಗಲೇ ಸದ್ಯಕ್ಕೆ ಯಾವುದೇ ಆದಾಯ ಬರುತ್ತಿಲ್ಲ. ಹೀಗಾಗಿ, ಎಲ್ಲ ಪತ್ರಿಕಾ ಸಂಸ್ಥೆಗಳಿಗೆ ಸರ್ಕಾರವು 2 ವರ್ಷಗಳ ತೆರಿಗೆ ರಜೆ ಘೋಷಿಸಬೇಕು, ಬಿಒಸಿ ಜಾಹೀರಾತು ದರವನ್ನು ಶೇ.50ರಷ್ಟು ಹೆಚ್ಚಳ ಮಾಡಬೇಕು, ಜಾಹೀರಾತಿನ ಬಾಕಿಯನ್ನು ತಕ್ಷಣ ಪಾವತಿಸಬೇಕು ಮತ್ತು ಮುದ್ರಣ ಮಾಧ್ಯಮಗಳಿಗೆ ಮೀಸಲಾದ ಬಜೆಟ್‌ ನ ವೆಚ್ಚವನ್ನು ಶೇ.100ರಷ್ಟು ಏರಿಸಬೇಕು ಎಂದು ಪತ್ರದಲ್ಲಿ ಗುಪ್ತಾ ಕೋರಿದ್ದಾರೆ.

ಪತ್ರಿಕೆಗಳ ಸದ್ಯದ ಸ್ಥಿತಿ ಬಗ್ಗೆ ಪತ್ರದಲ್ಲಿ ಬೆಳಕು ಚೆಲ್ಲಿರುವ ಅವರು, ಆರ್ಥಿಕ ಚಟುವಟಿಕೆಯು ಪತನಗೊಂಡಿರುವ ಕಾರಣ, ಖಾಸಗಿ ಕಂಪನಿಗಳಿಂದಲೂ ಜಾಹೀರಾತುಗಳು ಬರುವ ನಿರೀಕ್ಷೆಯಿಲ್ಲ. ಮುಂದಿನ 6-7 ತಿಂಗಳವರೆಗೆ ಮುದ್ರಣ ಮಾಧ್ಯಮಗಳು ಇದೇ ರೀತಿ ನಷ್ಟದಲ್ಲಿ ಮುಂದುವರಿಯಬೇಕಾಗುತ್ತದೆ. ಸರ್ಕಾರವು ಕೂಡಲೇ ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ, ಪತ್ರಿಕೆಗಳು ಮುಂದಿನ 7 ತಿಂಗಳಲ್ಲೇ
ಸುಮಾರು 12 ರಿಂದ 15 ಸಾವಿರ ಕೋಟಿ ರೂ. ನಷ್ಟ ಅನುಭವಿಸಬೇಕಾಗುತ್ತದೆ. ಇದು ಸುಮಾರು 30 ಲಕ್ಷ ನೌಕರರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದೂ ಉಲ್ಲೇಖೀಸಿದ್ದಾರೆ.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.