ಕೋವಿಡ್ 19 ಪರೀಕ್ಷೆ ಪ್ರಮಾಣ ಹೆಚ್ಚಿಸಿ: ಸಿದ್ದರಾಮಯ್ಯ
Team Udayavani, Apr 18, 2020, 6:17 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ತಪಾಸಣೆ ಪ್ರಮಾಣವನ್ನು ಹೆಚ್ಚಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕೋವಿಡ್ 19 ಹಿನ್ನೆಲೆಯಲ್ಲಿ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಸೋಂಕಿತರ ಪರೀಕ್ಷೆ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.
ಸೋಂಕು ಕಂಡುಬಂದಾಗಲೇ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕಿತ್ತು. ವಿಧಾನ ಮಂಡಲ ಅಧಿವೇಶನ ಮುಂದೂಡಿ ಗಮನಹರಿಸಿ ಎಂದಿದ್ದೆವು ವಿಳಂಬ ಮಾಡಿದ್ದರಿಂದಲೇ ಈ ಹಂತ ತಲುಪಿದೆ ಎಂದರು. ಜತೆಗೆ ಸೋಂಕಿತರ ಪತ್ತೆಗೆ ಕೇರಳ ಮಾದರಿ ಅನುಸರಿಬೇಕು. ಹಣ್ಣು, ತರಕಾರಿ ಬೆಳೆಯುತ್ತಿರುವ ರೈತರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಸರಕಾರವೇ ಖರೀದಿ ಮಾಡಲಿ ಎಂದು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಕೋವಿಡ್ 19 ಪರೀಕ್ಷೆ ನಡೆಸುವ ಕಿಟ್ಗಳೂ ಸರಬರಾಜು ಆಗುತ್ತಿಲ್ಲ. ಆ ಬಗ್ಗೆ ಸರಕಾರ ತುರ್ತಾಗಿ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!