ಮೀನಿಗೆ ಬೇಡಿಕೆ ಹೆಚ್ಚಳ : 14 ದಿನಗಳಲ್ಲಿ ಕೇವಲ 60,924 ಕೆ.ಜಿ. ಮೀನು ಲಭ್ಯ


Team Udayavani, Apr 27, 2020, 6:20 AM IST

ಮೀನಿಗೆ ಬೇಡಿಕೆ ಹೆಚ್ಚಳ : 14 ದಿನಗಳಲ್ಲಿ ಕೇವಲ 60,924 ಕೆ.ಜಿ. ಮೀನು ಲಭ್ಯ

ವಿಶೇಷ ವರದಿ- ಮಹಾನಗರ: ಸರಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ವ್ಯಾಪ್ತಿ ಯಲ್ಲಿಯೂ ಎ. 13ರಿಂದ ನಾಡದೋಣಿ ಮೀನುಗಾರಿಕೆ ಆರಂಭಗೊಂಡಿದೆ. ಆದರೆ ಜಿಲ್ಲೆಯ ಗ್ರಾಹಕರ ಬೇಡಿಕೆ, ನಿರೀಕ್ಷೆಗೆ ತಕ್ಕಂತೆ ಮೀನು ದೊರೆಯುತ್ತಿಲ್ಲ.ಇತ್ತ ಮೀನುಗಾರರಿಗೂ ನರಾಶೆ ಮೂಡಿಸಿದೆ. ಮುಖ್ಯವಾಗಿ ಬೆಲೆ ಗಗನಕ್ಕೇರಿದೆ.

60, 924 ಕೆ.ಜಿ. ಮೀನು ಲಭ್ಯ
ಕಳೆದ 14 ದಿನಗಳಲ್ಲಿ ಒಟ್ಟು 1,384 ನಾಡದೋಣಿಗಳು ಮೀನುಗಾರಿಕೆ ನಡೆಸಿದ್ದು ಎ.26ರ ವರೆಗೆ ಒಟ್ಟು 60,924 ಕೆ.ಜಿ. ಮೀನು ಲಭ್ಯವಾಗಿದೆ. ಕೆಲವು ದಿನ ಸುಮಾರು ಒಂದು ಸಾವಿರ ಕೆ.ಜಿ.ಯಷ್ಟು ಮಾತ್ರ ಮೀನು ದೊರೆತಿದೆ. ಇನ್ನು ಕೆಲವು ದಿನ 6,575 ಕೆ.ಜಿ.ಯಷ್ಟು ಮೀನು ಸಿಕ್ಕಿದೆ. ಆದರೆ ಮೀನುಗಾರರ ಪ್ರಕಾರ ಮೀನಿನ ಲಭ್ಯತೆ ತೀರಾ ಕಡಿಮೆ. ದಿನವೊಂದಕ್ಕೆ ಸರಾಸರಿ ಸುಮಾರು 80ಕ್ಕೂ ಅಧಿಕ ದೋಣಿಗಳು ಮೀನುಗಾರಿಕೆ ನಡೆಸುತ್ತಿವೆ.

ಪ್ರಸ್ತುತ ನಾಡದೋಣಿ ಬಲೆಗೆ ಕೊಡ್ಡೆಯಿ, ಬೊಳಿಂಜಿರ್‌, ಸ್ವಾಡಿ, ಬಂಗುಡೆ, ಕೇದಾರ್‌, ಮಿಶ್ರ ಮೀನುಗಳು ಬೀಳುತ್ತಿವೆ. ಎ.26ರಂದು ಕೆಲವು ಕಡೆಗಳಲ್ಲಿ ಕಾನೆ, ಅಂಜಲ್‌, ಕಲ್ಲೂರ್‌ ಮೀನುಗಳು ಸಿಕ್ಕಿವೆ. ಆದರೆ ಬೆಲೆ ಗಗನಕ್ಕೇರಿದೆ. ದೋಣಿಗಳು ವಾಪಸ್ಸು ಬರುವಾಗಲೇ ವ್ಯಾಪಾರಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಗ್ರಾಹಕರಿಂದ ಬೇಡಿಕೆ ಹೆಚ್ಚುತ್ತಿರುವುದರಿಂದ ವ್ಯಾಪಾರಿಗಳು ಬೆಲೆ ಇಳಿಸಲು ಒಪ್ಪುತ್ತಿಲ್ಲ. ಮೀನಿನ ದರದ ಮೇಲೆ ಇಲಾಖೆಗೂ ನಿಯಂತ್ರಣ ಇಲ್ಲ. ಆಳಸಮುದ್ರ ಸೇರಿದಂತೆ ಯಾಂತ್ರೀಕೃತ ಮೀನುಗಾರಿಕೆ ಆರಂಭವಾದರಷ್ಟೆ ಜಿಲ್ಲೆಯ ಅಗತ್ಯವಿರುವಷ್ಟು ಮೀನು ಲಭ್ಯವಾಗಬಹುದು. ಬೆಲೆಯೂ ಇಳಿಮುಖವಾಗಬಹುದು.

ಸಾಮಾಜಿಕ ಅಂತರ ಕಡ್ಡಾಯ
ಒಟ್ಟು 10 ಮೀನು ಇಳಿದಾಣ ಗುರುತಿಸಲಾಗಿದ್ದು, ಎಲ್ಲ ಇಳಿದಾಣ ಕೇಂದ್ರ ಗಳಲ್ಲಿಯೂ ಸಾಮಾಜಿಕ ಅಂತರ ಕಟ್ಟು ನಿಟ್ಟಾಗಿ ಪಾಲನೆಯಾಗುವಂತೆ ಕ್ರಮ ಕೈಗೊಂಡು ನಿಗಾ ವಹಿಸಲಾಗುತ್ತಿದೆ. ಇಂತಹ ಪಾಯಿಂಟ್‌ಗಳಿಗೆ ಪಾಸ್‌ ಹೊಂದಿರುವ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಜನರು ಗುಂಪುಗೂಡುವುದನ್ನು ತಪ್ಪಿಸಲು, ವ್ಯವಸ್ಥಿತವಾಗಿ ವ್ಯವಹಾರ ನಡೆಯುವಂತಾಗಲು ಈ ಕ್ರಮ ಅಗತ್ಯ. ಸಾರ್ವಜನಿಕರು ಸಹಕರಿಸಬೇಕಿದೆ.
 -ಹರೀಶ್‌ ಕುಮಾರ್‌, ಮೀನುಗಾರಿಕಾ ಉಪನಿರ್ದೇಶಕರು, ದ.ಕ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.