ಜಿಪಂಗೆ ಅನುದಾನ ಹೆಚ್ಚಳ
ಆಲೂಗಡ್ಡೆ, ಸಿರಿಧಾನ್ಯ ಬೆಳೆಯುವ ರೈತರಿಗೆ ವಿಶೇಷ ಪ್ಯಾಕೇಜ್
Team Udayavani, Jul 12, 2019, 5:51 AM IST
ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸುವ ಹಾಗೂ ಆಲೂಗಡ್ಡೆ ಮತ್ತು ಸಿರಿಧಾನ್ಯ ಬೆಳೆಯುವ ರೈತರಿಗೆ ವಿಶೇಷ ಪ್ರೋತ್ಸಾಹ ಧನದ ಪ್ಯಾಕೇಜ್ ಘೋಷಿಸಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ರಾಜ್ಯದ 30 ಜಿಪಂಗಳಿಗೆ ಹಾಲಿ ನೀಡುತ್ತಿರುವ 4 ಕೋಟಿ ರೂ. ಮೊತ್ತವನ್ನು ಎಂಟು ಕೋಟಿ ರೂ.ವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹೆಚ್ಚುವರಿ ಅನುದಾನ ಬಿಡುಗಡೆಗೆ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಆಧಾರದ ಮಾನದಂಡ ನಿಗದಿಪಡಿಸಲಾಗಿದೆ. 177 ತಾಪಂಗಳಿಗೆ ಪ್ರಸ್ತುತ ನೀಡುತ್ತಿರುವ 1 ಕೋಟಿ ರೂ. ಮೊತ್ತ ಪ್ರಸಕ್ತ ಸಾಲಿಗೆ 2 ಕೋಟಿ ರೂ.ಗೆ ಏರಿಸಲಾಗಿದೆ. 2020-21ನೇ ಸಾಲಿನಲ್ಲಿ ಗರಿಷ್ಠ 3 ಕೋಟಿ ರೂ.ವರೆಗೆ ಹೆಚ್ಚಿಸಿ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಮಾನದಂಡ ನಿಗದಿಪಡಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು. ಆಲೂಗಡ್ಡೆ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡಲು 2 ಹೆಕ್ಟೇರ್ ಮಿತಿಗೆ ಒಳಪಟ್ಟು ಪ್ರತಿ ಹೆಕ್ಟೇರ್ಗೆ ಬಿತ್ತನೆ ಬೀಜ ಖರೀದಿಗೆ 7500 ರೂ., ಕೀಟನಾಶಕ, ಗೊಬ್ಬರ ಖರೀದಿಗೆ 7200 ರೂ.ನಂತೆ ಪ್ರೋತ್ಸಾಹ ಧನಕ್ಕಾಗಿ 25.50 ಕೋಟಿ ರೂ.ಮೀಸಲಿಡಲಾಗಿದೆ ಎಂದು ಹೇಳಿದರು. ಅದೇ ರೀತಿ ನವಣೆ, ಸಾಮೆ, ಬರುಗು ಸೇರಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡಲು ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ
ಕೆರೆ ತುಂಬಿಸುವ ಯೋಜನೆ: ಕೃಷ್ಣಾ ಮೇಲ್ದಂಡೆ ಎರಡನೇ ಹಂತದಡಿ ಬಲದಂಡೆ ನಾಲೆಯ ಆಧುನೀಕರಣ ಕಾಮಗಾರಿಗೆ 375 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಂಪುಟ ಸಮ್ಮತಿಸಿದೆ. ಹಾಸನ ಜಿಲ್ಲೆ ಕಾಚೇನಹಳ್ಳಿ ವ್ಯಾಪ್ತಿಯಲ್ಲಿ ಏತ ನೀರಾವರಿ ಮೂಲಕ 2.67 ಟಿಎಂಸಿ ನೀರು ಕೃಷಿಗೆ ಒದಗಿಸಲು 141 ಕೋಟಿ ರೂ., ಹೆಬ್ಟಾಳ, ನಾಗವಾರ ಕಣಿವೆಯಿಂದ ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ಹರಿಸಲು 70 ಕೋಟಿ ರೂ., ಕೊಪ್ಪಳದ ಕುಷ್ಠಗಿ ತಾವರಗೆರೆ ಪ್ರದೇಶಕ್ಕೆ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಪೂರೈಸಲು 88 ಕೋಟಿ ರೂ., ಮೇಲುಕೋಟೆಯ ಕಲ್ಯಾಣಿ ಪುನಶ್ಚೇತನಕ್ಕೆ 32 ಕೋಟಿ ರೂ., ರಾಮನಗರದಲ್ಲಿ ಅರ್ಕಾವತಿ ನದಿಯಿಂದ ಕಾಳೇಗೌಡನ ದೊಡ್ಡಿ ಕೆರೆ ತುಂಬಿಸಲು 28 ಕೋಟಿ ರೂ., ಮಂಡ್ಯದಲ್ಲಿ ಲೋಕಪಾವನಿ ನದಿಯಿಂದ ಕೆರೆ ತುಂಬಿಸಲು 30 ಕೋಟಿ ರೂ., ಬೆಂಗಳೂರು ನಗರ ಜಿಲ್ಲೆ ಗಾಣಿಗರಹಳ್ಳಿಯ ಕೆರೆ ಅಭಿವೃದ್ಧಿಗೆ 13 ಕೋಟಿ ರೂ., ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗೆ 30 ಕೋಟಿ ರೂ., ಬೈಲಹೊಂಗಲ ಪಟ್ಟಣಕ್ಕೆ ನೀರು ಪೂರೈಕೆಗೆ 95 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಂಪುಟ ಒಪ್ಪಿಗೆ ನೀಡಿದೆ.
ತಿರುಮಲ-ತಿರುಪತಿಯಲ್ಲಿ ಕರ್ನಾಟಕ ಭವನ ಸಮೀಪ ರಾಜ್ಯದ ಸಾರ್ವಜನಿಕರಿಗೆ ಹೊಸ ಅತಿಥಿಗೃಹ ನಿರ್ಮಾಣಕ್ಕೆ 26 ಕೋಟಿ ರೂ. ಹಾಗೂ ವಿಜಯಪುರದ ಅಲಮೇಲ, ಹಾಸನದ ಸೋಮಹಳ್ಳಿಯಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪನೆಗೆ ಸಂಪುಟ ಅನುಮತಿ ನೀಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ