ಅರೆಕಾಲಿಕ ಉಪನ್ಯಾಸಕರ ಗೌರವಧನ 5 ಸಾವಿರ ರೂ. ಹೆಚ್ಚಳ


Team Udayavani, Jan 1, 2020, 3:08 AM IST

Vidhana-Soudha

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ದಶಕದ ನಂತರ ಸರ್ಕಾರ ಗೌರವ ಧನ ಹೆಚ್ಚಳ ಮಾಡಿದೆ, ಅದು ಕೇವಲ 5 ಸಾವಿರ ರೂ. ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವಧನವನ್ನು 7,500ರೂ.ಗಳಿಂದ 12,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗಳಿಂದ 15 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಎರಡು ವಿಭಾಗದ ಅರೆಕಾಲಿಕ ಉಪನ್ಯಾಸಕರಿಗೂ ತಲಾ 5 ಸಾವಿರ ರೂ. ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಮುಂದಿನ ಕ್ರಮಕ್ಕಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಹಾಗೂ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅರೆಕಾಲಿಕ ಉಪನ್ಯಾಸಕರಿಗೆ ಕನಿಷ್ಠ ವೇತನವನ್ನು ಸರ್ಕಾರ ನೀಡುತ್ತಿರಲಿಲ್ಲ. ಇಲ್ಲಿ ಕಳೆದ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅರೆಕಾಲಿಕ ಉಪನ್ಯಾಸಕರು 2008ರಿಂದ 2019ರ ಡಿಸೆಂಬರ್‌ವರೆಗೂ ಕೇವಲ 10 ಸಾವಿರ ರೂ.ಗಳಿಗೆ ಸೇವೆ ಸಲ್ಲಿಸುತ್ತಿದ್ದರು.

ಕಳೆದ 11 ವರ್ಷದಲ್ಲಿ ಒಮ್ಮೆಯೂ ಇರವ ವೇತನ ಹೆಚ್ಚಳ ಮಾಡಿಲ್ಲ. ಹಾಗೆಯೇ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಹತ್ತಾರು ವರ್ಷಗಳಿಂದ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಕೇವಲ 7500 ರೂ. ಮಾಸಿಕ ವೇತನವಾಗಿ ನೀಡುತ್ತಿದ್ದರು ಎಂದು ಅರೆಕಾಲಿಕ ಉಪನ್ಯಾಸಕರೊಬ್ಬರು ಮಾಹಿತಿ ನೀಡಿದರು.

ಇದನ್ನು ಹೆಚ್ಚಳ ಮಾಡಬೇಕು ಎಂದು ಐದಾರು ವರ್ಷಗಳಿಂದ ಅರೆಕಾಲಿಕ ಉಪನ್ಯಾಸಕರು ಸರ್ಕಾರದ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದರು. ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಅಥವಾ ಅದರ ನಂತರ ಬಂದ ಮೈತ್ರಿ ಸರ್ಕಾರ ಈ ಕುರಿತು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಈಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಸೇವೆ ಸಲ್ಲಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ನಿರ್ದೇಶಕರಿಂದ ಪತ್ರ: ಸರ್ಕಾರವು 2008ರ ಡಿ.1ರಿಂದ ಜಾರಿಗೆ ಬರುವಂತೆ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವಧನವನ್ನು ಪಾಲಿಟೆಕ್ನಿಕ್‌ ವಿಭಾಗದ ಅರೆಕಾಲಿಕ ಉಪನ್ಯಾಸಕರಿಗೆ 7500 ಹಾಗೂ ಎಂಜಿನಿಯರಿಂಗ್‌ ವಿಭಾಗದ ಅರೆಕಾಲಿಕ ಉಪನ್ಯಾಸಕರಿಗೆ 10 ಸಾವಿರ ರೂ. ನಿಗದಿ ಮಾಡಿ ಆದೇಶ ಹೊರಡಿಸಿತ್ತು.

ಈ ಆದೇಶ ಹೊರಡಿಸಿ 10 ವರ್ಷ ಕಳೆದರೂ ಅರೆಕಾಲಿಕ ಉಪನ್ಯಾಸಕರ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ಬಹುತೇಕ ಕಾಲೇಜುಗಳಲ್ಲಿ ಉಪನ್ಯಾಸಕರ ನಿರ್ವಹಣೆಯೇ ಇಲಾಖೆಗೆ ಕಗ್ಗಂಟಾಗಿತ್ತು. ಗೌರವ ಧನ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ದೇಶಕರ ಪತ್ರಕ್ಕೆ ಸ್ಪಂದಿಸಿರುವ ಸರ್ಕಾರ, ಈ ಸಂಬಂಧ ಆದೇಶ ಹೊರಡಿಸಿದೆ.

ಜೀವನ ನಡೆಸಲು ಸಾಧ್ಯವೇ?: ರಾಜ್ಯದಲ್ಲಿ ತಲಾ 11 ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌, 82 ಸರ್ಕಾರಿ ಪಾಲಿಟೆಕ್ನಿಕ್‌, 44 ಅನುದಾನಿತ ಪಾಲಿಟೆಕ್ನಿಕ್‌ ಕಾಲೇಜುಗಳಿವೆ. ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮಂಜೂರಾಗಿರುವ 646 ಬೋಧಕ ಹುದ್ದೆಗಳಲ್ಲಿ 348 ಭರ್ತಿಯಾಗಿದ್ದು, 298 ಬೋಧಕ ಹುದ್ದೆ ಖಾಲಿಯಿದೆ.

ಸರ್ಕಾರಿ ಪಾಲಿಟೆಕ್ನಿಕ್‌ಗಳಿಗೆ 2812 ಬೋಧಕ ಹುದ್ದೆ ಮಂಜೂರಾಗಿದ್ದು, 2060 ಹುದ್ದೆ ಭರ್ತಿಯಾಗಿದ್ದು, 752 ಬೋಧಕ ಹುದ್ದೆ ಖಾಲಿಯಿದೆ. ಅನುದಾನಿತ ಎಂಜಿನಿಯರಿಂಗ್‌ ಕಾಲೇಜಿಗೆ 998 ಬೋಧಕ ಹುದ್ದೆ ಮಂಜೂರಾಗಿದ್ದು, ಅದರಲ್ಲಿ 307 ಹುದ್ದೆ ಖಾಲಿಯಿದೆ. ಅನುದಾನಿತ ಪಾಲಿಟೆಕ್ನಿಕ್‌ಗಳಿಗೆ ಮಂಜೂರಾದ 1314 ಹುದ್ದೆಯಲ್ಲಿ 418 ಹುದ್ದೆ ಖಾಲಿಯಿದೆ.

ಒಟ್ಟಾರೆಯಾಗಿ ಸರ್ಕಾರಿ, ಅನುದಾನಿತ ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಸುಮಾರು 1500ಕ್ಕೂ ಅಧಿಕ ಅರೆಕಾಲಿಕ ಉಪನ್ಯಾಸಕರಿದ್ದರು, ಅವರಿಗೆ ಕನಿಷ್ಠ ವೇತನವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ದಶಕದಿಂದ ಬೇಡಿಕೆ ಇಡುತ್ತಾ ಬಂದಿದ್ದರೂ, ಸೂಕ್ತ ಗೌರವಧನ ನೀಡುವಲ್ಲಿ ಸರ್ಕಾರ ಮುನ್ನಡೆ ಇಟ್ಟಿಲ್ಲ. ಪ್ರಸ್ತುತ ದಿನಗಳಲ್ಲಿ 10 ಸಾವಿರ, 15 ಸಾವಿರ ಮಾಸಿಕ ವೇತನದಲ್ಲಿ ಜೀವನ ನಡೆಸಲು ಸಾಧ್ಯವೇ ಎಂದು ಅರೆಕಾಲಿಕ ಉಪನ್ಯಾಸಕರೊಬ್ಬರು ಪ್ರಶ್ನಿಸುತ್ತಾರೆ.

ಯಾರಿಗೆ ಎಷ್ಟು?
-ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವಧನ 7,500ರೂ.ಗಳಿಂದ 12,500 ರೂ.ಗಳಿಗೆ ಹೆಚ್ಚಳ

-ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವಧನ 10 ಸಾವಿರ ರೂ.ಗಳಿಂದ 15 ಸಾವಿರ ರೂ.ಗಳಿಗೆ ಏರಿಕೆ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.