ಒತ್ತಿನೆಣೆ ತಿರುವು: ಹೆಚ್ಚಿದ ಅಪಘಾತ
Team Udayavani, Sep 27, 2021, 4:09 AM IST
ಬೈಂದೂರು: ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಅಪಘಾತ ನಡೆಯುತ್ತಿದೆ. ಇದು ಅತ್ಯಂತ ಅಪಾಯಕಾರಿ ತಿರುವು ಆಗಿರುವುದರಿಂದ ಈಗಾಗಲೇ ಹಲವು ಬಾರಿ ಸುದಿನ ವರದಿ ಮಾಡಿ ಇಲ್ಲಿನ ಸಮಸ್ಯೆ ಕುರಿತು ಇಲಾಖೆಯ ಗಮನಸೆಳೆದಿತ್ತು.
ಸಂಸದರು ಕೂಡ ಈ ಕುರಿತು ಹೆದ್ದಾರಿ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ತಿರುವನ್ನು ಸಮರ್ಪಕಗೊಳಿಸಿ ಅಪಾಯ ತಡೆಯುವ ಕುರಿತು ಪ್ರಯತ್ನ ನಡೆಸಿದ್ದರು.
ಗಂಭೀರ ಪರಿಗಣನೆಗೆ ಆಗ್ರಹ
ಆದರೆ ಕಾಮಗಾರಿ ಕಂಪೆನಿ, ಹೆದ್ದಾರಿ ಪ್ರಾಧಿಕಾರದ ಸ್ಪಷ್ಟತೆ ದೊರೆಯದ ಕಾರಣ ಇದು ಅಪಾಯಕಾರಿ ತಿರುವಾಗಿ ಮಾರ್ಪಟ್ಟಿದೆ. ವಾರದಲ್ಲಿ ನಾಲ್ಕೈದು ಅಪಘಾತಗಳು ಇದೇ ಸ್ಥಳದಲ್ಲಿ ನಡೆಯುತ್ತಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸರಿಪಡಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಇದನ್ನೂ ಓದಿ:ಲಡಾಖ್ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್ ಹಾರಾಟ
ಮಾಹಿತಿ ನೀಡಲಾಗಿದೆ
ಅವೈಜ್ಞಾನಿಕ ಕಾಮಗಾರಿಯಿಂದ ಒತ್ತಿನೆಣೆ ಪರಿಸರದಲ್ಲಿ ನಿರಂತರ ಅಪಘಾತ ನಡೆಯುತ್ತಿದೆ. ಈ ಕುರಿತು ಕಂಪೆನಿ ಹಾಗೂ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಲಾಗಿದ್ದು ಅಪಘಾತ ನಿಯಂತ್ರಣಕ್ಕೆ ತಿರುವು ಸರಿಪಡಿಸಬೇಕಾದ ಆವಶ್ಯಕತೆ ಇದೆ.
-ಸಂತೋಷ ಕಾಯ್ಕಿಣಿ,
ವೃತ್ತ ನಿರೀಕ್ಷಕರು ಬೈಂದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ