ಹೆಚ್ಚಿದ ಸೈಬರ್ ದಾಳಿ ಹಾವಳಿ
Team Udayavani, May 24, 2020, 5:40 AM IST
ಸಾಂದರ್ಭಿಕ ಚಿತ್ರ.
ಕೋವಿಡ್-19 ವೈರಸ್ ಬಿಕ್ಕಟ್ಟು, ಲಾಕ್ ಡೌನ್ ಗಳು ಆರಂಭವಾದ ಬಳಿಕ ಜಗತ್ತಿನಾದ್ಯಂತ ಸೈಬರ್ ದಾಳಿಕೋರರ ಹಾವಳಿಯೂ ಹೆಚ್ಚಾಗಿದೆ. ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಸೈಬರ್ ಅಪರಾಧಗಳ ಪ್ರಮಾಣ ಶೇ.600ರಷ್ಟು ಹೆಚ್ಚಳವಾಗಿದ್ದು, ಈ ಕುರಿತು ಎಚ್ಚರಿಕೆ ವಹಿಸುವಂತೆ ವಿಶ್ವಸಂಸ್ಥೆಯೇ ಸೂಚಿಸಿದೆ. ಅಷ್ಟೇ ಅಲ್ಲ, ಹಲವೆಡೆ ಆರೋಗ್ಯಸೇವಾ ಸಂಸ್ಥೆಗಳು ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರಗಳ ಮೇಲೆಯೂ ಸೈಬರ್ ದಾಳಿಗಳು ನಡೆದಿರುವ ವಿಚಾರ ಬೆಳಕಿಗೆ ಬಂದಿರುವುದಾಗಿಯೂ ವಿಶ್ವಸಂಸ್ಥೆ ಹೇಳಿದೆ. ಭಾರತದಲ್ಲಿ ಅತಿ ಹೆಚ್ಚು ಸೈಬರ್ ದಾಳಿಗೊಳಗಾದ ರಾಜ್ಯ- ಕೇರಳ.
ಭಾರತೀಯರ ಮಾಹಿತಿ ಸೋರಿಕೆ
ಉದ್ಯೋಗಕ್ಕೆಂದು ಅರ್ಜಿ ಸಲ್ಲಿಸಿದ್ದ 2.9 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿಗಳನ್ನು ಒಳಗೊಂಡ ದತ್ತಾಂಶಗಳನ್ನು ಸೋರಿಕೆ ಮಾಡಲಾಗಿದೆ ಎಂಬ ವಿಚಾರವನ್ನು ಶನಿವಾರ ಆನ್ ಲೈನ್ ಗುಪ್ತಚರ ಸಂಸ್ಥೆ ಬಹಿರಂಗಪಡಿಸಿದೆ. ಉದ್ಯೋಗಾಕಾಂಕ್ಷಿಗಳ ಇಮೇಲ್, ದೂರವಾಣಿ ಸಂಖ್ಯೆ, ಮನೆಯ ವಿಳಾಸ, ಶೈಕ್ಷಣಿಕ ಅರ್ಹತೆ, ಕೆಲಸದ ಅನುಭವ ಸೇರಿದಂತೆ ಎಲ್ಲ ಮಾಹಿತಿಗಳನ್ನೂ ಡಾರ್ಕ್ ವೆಬ್ ನಲ್ಲಿ ಉಚಿತವಾಗಿ ಸೋರಿಕೆ ಮಾಡಲಾಗಿದೆ. ಇದೇ ವೇಳೆ, ಪಿಎಂ ಕೇರ್ ನಿಧಿಗೆ ದೇಣಿಗೆ ಹೆಸರಲ್ಲಿ ಹಾಗೂ ಕೋವಿಡ್-19 ಮಾಹಿತಿಯ ಹೆಸರಲ್ಲಿ ಲಿಂಕ್ ಕಳಿಸಿ, ಆ ಲಿಂಕ್ ತೆರೆದವರ ಕ್ರೆಡಿಟ್ ಕಾರ್ಡ್, ಬ್ಯಾಂಕಿಂಗ್ ಮಾಹಿತಿ ಕದ್ದಿರುವ ಘಟನೆಗಳೂ ಇತ್ತೀಚೆಗೆ ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ