ಸಾರಿಗೆ ಇಲಾಖೆ ಸೇವೆಗಳಿಗೆ ಹೆಚ್ಚಿದ ಬೇಡಿಕೆ


Team Udayavani, Sep 11, 2019, 3:08 AM IST

sarige

ಬೆಂಗಳೂರು: ಸಾರಿಗೆ ನಿಯಮಗಳ ಉಲ್ಲಂಘನೆಗೆ ಭಾರಿ ದಂಡ “ಪ್ರಯೋಗ’ದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಸೇವೆಗಳಿಗೆ ದಿಢೀರ್‌ ಬೇಡಿಕೆ ಬಂದಿದ್ದು, ಮುಖ್ಯವಾಗಿ ಚಾಲನಾ ಪರವಾನಗಿ, ಕಲಿಕಾ ಚಾಲನಾ ಪರವಾನಗಿ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳಿಗಾಗಿ ವಾಹನ ಸವಾರರು ದುಂಬಾಲು ಬಿದ್ದಿದ್ದಾರೆ.

ರಾಜ್ಯದಲ್ಲಿ ತಿಂಗಳಿಗೆ 3.10ರಿಂದ 3.20 ಲಕ್ಷ ಚಾಲನಾ ಪರವಾನಗಿ (ಡಿಎಲ್‌)ಗಳು ವಿತರಣೆ ಆಗುತ್ತವೆ. ಆದರೆ, ಕೇಂದ್ರ ಸರ್ಕಾರವು ಮೋಟಾರು ವಾಹನ ತಿದ್ದುಪಡಿ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದ ನಂತರದಿಂದ ಅಂದರೆ ಆಗಸ್ಟ್‌ 9ರಿಂದ ಈವರೆಗೆ ಚಾಲನಾ ಪರವಾನಗಿ ಪತ್ರ (ಡಿಎಲ್‌)ಗಳ ವಿತರಣೆ 3.50 ಲಕ್ಷ ತಲುಪಿದೆ. ಅಲ್ಲದೆ, ಪ್ರಾದೇಶಿಕ ಮಟ್ಟದಲ್ಲಿ ಕಲಿಕಾ ಚಾಲನಾ ಪರವಾನಗಿ ಪತ್ರ (ಎಲ್‌ಎಲ್‌ಆರ್‌)ಗಳ ಪ್ರಮಾಣ ಕೂಡ ಸಾಕಷ್ಟು ಹೆಚ್ಚಿದೆ ಎಂದು ಸಾರಿಗೆ ಇಲಾಖೆ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.

ಡಿಎಲ್‌ ಮತ್ತು ಎಲ್‌ಎಲ್‌ಆರ್‌ಗಳ ಬೇಡಿಕೆಯಲ್ಲಿ ಒಟ್ಟಾರೆ ಶೇ. 10ರಿಂದ 15ರಷ್ಟು ಬೇಡಿಕೆ ಅಧಿಕವಾಗಿದೆ. ಒಂದು ಡಿಎಲ್‌ಗೆ 200 ರೂ. ಶುಲ್ಕ ಆಗುತ್ತದೆ. ತಿಂಗಳಿಂದ ಇವುಗಳ ಬೇಡಿಕೆ ಹೆಚ್ಚಿದ್ದರಿಂದ ಇಲಾಖೆಗೆ ಬರುವ ಆದಾಯದಲ್ಲಿ 60ರಿಂದ 70 ಲಕ್ಷ ರೂ. ಏರಿಕೆ ಆಗಿದೆ (ಸಾರಿಗೆ ಇಲಾಖೆಗೆ ಪ್ರಮುಖ ಆದಾಯ ಮೂಲ ವಾಹನಗಳ ನೋಂದಣಿ). ಮತ್ತೂಂದೆಡೆ ಅನುಮತಿ ಇಲ್ಲದೆ ವಾಹನಗಳ ವಿನ್ಯಾಸವನ್ನು ವಿರೂಪಗೊಳಿಸಿ, ಶಬ್ದಮಾಲಿನ್ಯ ಉಂಟುಮಾಡುವ ವಾಹನಗಳ ಸದ್ದು ಕೂಡ ಅಡಗಿದೆ. ಇದರಿಂದ ಅಲ್ಟರೇಷನ್‌ ಮಾಡುವವರಿಗೆ ಭಾರೀ ಹೊಡೆತ ಬಿದ್ದಿದೆ ಎಂದೂ ಅಧಿಕಾರಿಗಳು ತಿಳಿಸಿದರು.

ಸ್ವಲ್ಪ ಏರಿಕೆ, ಅಧಿಕಾರಿ: “ಆಗಸ್ಟ್‌ 9ರಲ್ಲಿ ಅಧಿಸೂಚನೆ ಹೊರಡಿಸಿದ್ದರೂ, ರಾಜ್ಯದಲ್ಲಿ ಅದು ಜಾರಿಯಾಗಿ ಕೇವಲ ನಾಲ್ಕು ದಿನಗಳಾಗಿವೆ. ಆದಾಗ್ಯೂ ನಗರದಲ್ಲಿ ಶೇ. 5ರಷ್ಟು ಚಾಲನಾ ಪರವಾನಗಿ ಮತ್ತು ಕಲಿಕಾ ಚಾಲನಾ ಪರವಾನಗಿಗೆ ಬೇಡಿಕೆ ಹೆಚ್ಚಳ ಆಗಿದೆ. ಇನ್ನೊಂದು ವಾರದಲ್ಲಿ ಈ ಪ್ರಮಾಣ ಮತ್ತಷ್ಟು ಏರಿಕೆ ಆಗುವುದರಲ್ಲಿ ಸಂಶಯವಿಲ್ಲ’ ಎಂದು ನಗರ ವಿಭಾಗದ ಜಂಟಿ ಸಾರಿಗೆ ಆಯುಕ್ತ ಜೆ. ಜ್ಞಾನೇಂದ್ರ ಕುಮಾರ್‌ ಸ್ಪಷ್ಟಪಡಿಸಿದರು.

ಈ ಮೊದಲು ತಮ್ಮ ವಾಹನಗಳ ಆರೋಗ್ಯದ ಬಗ್ಗೆಯೂ ಪ್ರಮಾಣಪತ್ರ ತೆಗೆದುಕೊಳ್ಳಬೇಕು ಎಂಬ ಅರಿವು ಬಹುತೇಕ ವಾಹನ ಮಾಲಿಕರಲ್ಲಿ ಇರಲಿಲ್ಲ. ಆದರೆ, ದಂಡದ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ಈ ಬಗ್ಗೆ ತಿಳಿವಳಿಕೆ ಮೂಡಿದೆ. ಅಧಿಸೂಚನೆಗೂ ಮುನ್ನ ರಾಜ್ಯದಲ್ಲಿ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಿಂದ ಒಟ್ಟಾರೆ 15ರಿಂದ 20 ಸಾವಿರ ಪ್ರಮಾಣಪತ್ರಗಳಿಗೆ ಬೇಡಿಕೆ ಬರುತ್ತಿತ್ತು. ಕಳೆದ 3 ದಿನಗಳಿಂದ ಈ ಸಂಖ್ಯೆ 60 ಸಾವಿರ ತಲುಪಿದೆ ಎಂದು ಅಪರ ಸಾರಿಗೆ ಆಯುಕ್ತ (ಪರಿಸರ ಮತ್ತು ಇ-ಆಡಳಿತ) ಶಿವರಾಜ್‌ ಬಿ. ಪಾಟೀಲ “ಉದಯವಾಣಿ‘ಗೆ ಮಾಹಿತಿ ನೀಡಿದರು.

ರಾಜ್ಯಾದ್ಯಂತ 2.10 ಕೋಟಿ ವಾಹನಗಳಿದ್ದು, 1,020 ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಿವೆ. ಈ ಪೈಕಿ ನಗರದಲ್ಲೇ ಸುಮಾರು 385ರಿಂದ 400 ಕೇಂದ್ರಗಳಿವೆ. ಬೆಂಗಳೂರಿನಲ್ಲಿ ಅಂದಾಜು 20ರಿಂದ 25 ಸಾವಿರ ಪ್ರಮಾಣಪತ್ರಗಳಿಗೆ ಬೇಡಿಕೆ ಬರುತ್ತಿದೆ. ಈ ಪ್ರಮಾಣ ಪತ್ರಗಳ ಅವಧಿ 6 ತಿಂಗಳು ಇರುತ್ತದೆ. ಶುಲ್ಕ ವಾಹನಗಳ ಪ್ರಕಾರವನ್ನು ಅವಲಂಬಿಸಿದ್ದು, ಕನಿಷ್ಠ 30 ರೂ.ಗಳಿಂದ ಗರಿಷ್ಠ 100 ರೂ.ವರೆಗೆ ಇರುತ್ತದೆ. ಅವಧಿ ಮುಗಿದ ನಂತರ ಮತ್ತೆ ಪಡೆಯಬೇಕಾಗುತ್ತದೆ. ಇವುಗಳ ತಪಾಸಣೆ ಕಾರ್ಯಾಚರಣೆಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ನಡೆಸುತ್ತಾರೆ ಎಂದು ಅವರು ತಿಳಿಸಿದರು.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.