ಹೆಚ್ಚಿದ ಕಾಡಾನೆ ಹಾವಳಿ- ಮೈಸೂರು, ಚಿಕ್ಕಮಗಳೂರು, ಸುಬ್ರಹ್ಮಣ್ಯದಲ್ಲೂ ಆನೆ ದಾಳಿ
- ಸುಂಟಿಕೊಪ್ಪದ ಪರ್ಚಿಕೆರೆಯಲ್ಲಿ ಮೃತ ಸ್ಥಿತಿಯಲ್ಲಿ ಕಾಡಾನೆ ಪತ್ತೆ
Team Udayavani, Jul 30, 2023, 10:08 PM IST
ಬೆಂಗಳೂರು: ಭಾರೀ ಮಳೆಯ ಜತೆಗೆ ರಾಜ್ಯದ ಹಲವೆಡೆ ಕಾಡಾನೆಗಳ ಹಾವಳಿಯೂ ತೀವ್ರಗೊಂಡಿದೆ. ಇದರ ಮಧ್ಯೆ ಮಡಿಕೇರಿಯ ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮದ ಪರ್ಚಿಕೆರೆಯಲ್ಲಿ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ತೋಟದಲ್ಲಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆಯಾದರೂ ಬೇಲಿಗೆ ಬಳಸುವ ಮುಳ್ಳು ತಂತಿಯ ಉರುಳು ಕುತ್ತಿಗೆಯಲ್ಲಿರುವುದು ಕಂಡುಬಂದಿದೆ. ಅರಣ್ಯ ಇಲಾಖೆ ತನಿಖೆ ಕೈಗೊಂಡಿದೆ.
ಮೈಸೂರಿನ ಶ್ರೀರಂಗಪಟ್ಟಣ ತಾಲೂಕಿನ ಹಂಪಾಪುರ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ರವಿವಾರ ಮಧ್ಯಾಹ್ನ ಮದ್ದೂರು ಕಡೆಯಿಂದ ಬಂದಿರುವ ಕಾಡಾನೆಗಳ ಹಿಂಡು ರೈತರ, ಜಮೀನು, ಗದ್ದೆಗಳಿಗೆ ನುಗ್ಗಿ ಬೆಳೆ ನಾಶ ಮಾಡಿದೆ. ಇದರಿಂದ ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಹಲವೆಡೆ ಕಾಡಾನೆಗಳು ರೈತರ ತೋಟಗಳಿಗೆ ದಾಳಿ ಮಾಡಿ ಬೆಳೆ ಹಾಳು ಮಾಡುತ್ತಿವೆ. ಮೂಡಿಗೆರೆ ತಾಲೂಕಿನ ಸಾರಗೋಡು, ಕುಂದೂರು ಭಾಗದಲ್ಲಿನ ಕಾಫಿ ತೋಟಗಳಿಗೆ 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ಇಡುತ್ತಿದ್ದು, 60ಕ್ಕೂ ಹೆಚ್ಚು ರೈತರ ತೋಟಗಳಲ್ಲಿನ ಕಾಫಿ, ಕಾಳುಮೆಣಸು, ಬಾಳೆ, ಏಲಕ್ಕಿ, ಅಡಿಕೆ ಗಿಡಗಳನ್ನು ನಾಶಗೊಳಿಸಿವೆ.
ದ. ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಶನಿವಾರ ರಾತ್ರಿ ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದೆ. ಮನೆ ಆವರಣಗೋಡೆ ಹಾನಿಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ