ಬಾದಾಮಿಯಿಂದಲೇ ಸ್ಪರ್ಧೆಗೆ ಸಿದ್ದರಾಮಯ್ಯಗೆ ಹೆಚ್ಚಿದ ಒತ್ತಡ

ಸಿದ್ದು ನಿವಾಸದ ಬಳಿ ಪ್ರತಿಭಟಿಸಿದ ಸಾವಿರಾರು ಕಾಯಕರ್ತರು, ಅಭಿಮಾನಿಗಳು

Team Udayavani, Feb 15, 2023, 6:20 AM IST

ಬಾದಾಮಿಯಿಂದಲೇ ಸ್ಪರ್ಧೆಗೆ ಸಿದ್ದರಾಮಯ್ಯಗೆ ಹೆಚ್ಚಿದ ಒತ್ತಡ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿ ಒತ್ತಾಯಿಸಿದರು.

ಮಂಗಳವಾರ ಬೆಳಗ್ಗೆ ಬಾದಾಮಿಯಿಂದ ಬಂದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲೇಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಸಿದ್ದರಾಮಯ್ಯ ಅವರು, ದೂರ ಎಂಬ ಕಾರಣಕ್ಕೆ ನಾನು ಕೋಲಾರದಲ್ಲಿ ಸ್ಪರ್ಧೆಗೆ ಬಯಸಿದ್ದೇನೆ. ಆದರೆ, ಹೈಕಮಾಂಡ್‌ ತೀರ್ಮಾನ ಅಂತಿಮ. ಆದರೆ, ನನ್ನನ್ನು ಕೈ ಹಿಡಿದು ಗೆಲ್ಲಿಸಿದ ನಿಮ್ಮ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು.

ಇಷ್ಟಾದರೂ ಬಾದಾಮಿಗೆ ಬರಬೇಕೆಂದು ಕಾರ್ಯಕರ್ತರು ಒತ್ತಾಯಿಸಿದಾಗ ಗದರಿದ ಸಿದ್ದರಾಮಯ್ಯ, ಏ ಕೇಳಪ್ಪಾ ಇಲ್ಲಿ. ನನಗೆ ಈಗ 76 ವರ್ಷ. ದಯವಿಟ್ಟು ಕ್ಷಮಿಸಬೇಕು ನೀವು. ನಾನು ದಿನನಿತ್ಯ ಓಡಾಡಲು ಕಷ್ಟವಾಗುತ್ತಿತ್ತು. ಕೋಲಾರದ ಜನತೆ ಸಹ ನನಗೆ ಸ್ಪರ್ಧೆ ಮಾಡಲು ಒತ್ತಾಯಿಸಿದರು. ಹೀಗಾಗಿ, ಘೋಷಿಸಿದ್ದೇನೆ. ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಬಿಟ್ಟದ್ದು. ಕೋಲಾರ, ಬಾದಾಮಿ, ವರುಣಾ ಎಲ್ಲಾದರೂ ಸರಿ. ನನಗೆ ಈಗ ವಿಧಾನಸಭೆಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ಅಲ್ಲಿಂದ ನಿರ್ಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ನಾವು ಸ್ವಯಂ ಪ್ರೇರಿತರಾಗಿ ಬಂದಿದ್ದೇವೆ. ಸಿದ್ದರಾಮಯ್ಯ ಅವರಿಗೆ ಪುನರ್‌ಜನ್ಮ ಕೊಟ್ಟ ಕ್ಷೇತ್ರ ಬಾದಾಮಿ. ಈ ಬಾರಿ ಅವರು ಕೇವಲ ನಾಮಪತ್ರ ಸಲ್ಲಿಸಿ ಹೋದರೆ ಸಾಕು, ಗೆಲ್ಲಿಸುತ್ತೇವೆ. 2018ರಲ್ಲಿ ದೂರ ಆಗದ ಕ್ಷೇತ್ರ ಈಗ ಹೇಗೆ ದೂರ ಆಗುತ್ತದೆ ಎಂದು ಹೇಳಿದರು.

ವಿಧಾನಸಭೆಗೆ ಹೋಗಬೇಕು ಎಂದಿದ್ದಕ್ಕೆ ಬಿಟ್ಟಿದ್ದೇವೆ. ಹೈಕಮಾಂಡ್‌ ಮೇಲೂ ಒತ್ತಡ ಹಾಕಿ ಬಾದಾಮಿಯಿಂದಲೇ ಸ್ಪರ್ಧೆಗೆ ಆಗ್ರಹಿಸುತ್ತೇವೆ. ಕೋಲಾರ ಕ್ಷೇತ್ರಕ್ಕೆ ಹೋಗಲು ಬಿಡುವುದಿಲ್ಲ ಎಂದು ತಿಳಿಸಿದರು.

ಎರಡು ಕಡೆಯಿಂದ ಸ್ಪರ್ಧೆ ಮಾಡ್ತಾರಾ?
ಒಂದೆಡೆ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ. ಮತ್ತೊಂದೆಡೆ ಬಾದಾಮಿಯಿಂದಲೂ ಸ್ಪರ್ಧೆಗೆ ಕಾರ್ಯಕರ್ತರು, ಮುಖಂಡರು ಬಂದು ಒತ್ತಡ ಹಾಕುತ್ತಿರುವುದರಿಂದ ಅಲ್ಲಿಂದಲೂ ಸ್ಪರ್ಧೆ ಮಾಡ್ತಾರಾ ಎಂಬ ಮಾತುಗಳು ಕೇಳಿಬರುತ್ತಿವೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಆಪ್ತ ಬಸಪು ಶೆಟ್ಟರ್‌ ಹಾಗೂ ಮಾಜಿ ಸಚಿವ ಚಿಮ್ಮನಕಟ್ಟಿ ಪುತ್ರನ ನಡುವೆ ಟಿಕೆಟ್‌ಗೆ ಪೈಪೋಟಿಯಿದ್ದು, ಸಿದ್ದರಾಮಯ್ಯ ಅವರೇ ಸ್ಪರ್ಧೆ ಮಾಡಬಹುದು ಎಂದು ಹೇಳಲಾಗಿದೆ. ಆದರೆ, ಒಬ್ಬರಿಗೆ ಒಂದೇ ಟಿಕೆಟ್‌ ಎಂದು ಕೆಪಿಸಿಸಿ ಅಧ್ಯಕ್ಷರು ಘೋಷಿಸಿದ್ದಾರೆ, ಸಿದ್ದರಾಮಯ್ಯ ಅವರೂ ಒಂದೇ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಎಂದೂ ಹಲವಾರು ಬಾರಿ ಸ್ಪಷ್ಟಪಡಿಸಿರುವುದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.