ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿ: ಕೊಠಡಿ ಕೊರತೆ

ಪುದು-ಮಾಪ್ಲ ಉನ್ನತೀಕರಿಸಿದ ಸರಕಾರಿ ಶಾಲೆ

Team Udayavani, Sep 4, 2021, 6:16 AM IST

ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿ: ಕೊಠಡಿ ಕೊರತೆ

ಸರಕಾರಿ ಶಾಲೆಯ ದಾಖಲಾತಿ ಹೆಚ್ಚಳವಾಗುತ್ತಿರುವುದು ಸಂತಸದ ವಿಚಾರವಾದರೂ ಮೂಲ ಸೌಕರ್ಯಗಳ ಕೊರತೆ ಚಿಂತೆಗೆ ಕಾರಣವಾಗಿದೆ. ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಉದಯವಾಣಿ ಸುದಿನವು ಮಕ್ಕಳು ಬರುವರು ಶಾಲೆಗೆ-ಸೌಲಭ್ಯ ಕಲ್ಪಿಸಿ ಅಭಿಯಾನದ ಮೂಲಕ ಬೆಳಕು ಚೆಲ್ಲಲಿದೆ.

ಬಂಟ್ವಾಳ: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿಯಾಗುವುದು ಒಂದು ಉತ್ತಮ ಬೆಳವಣಿಗೆಯಾದರೆ, ಮತ್ತೂಂದೆಡೆ ಅಲ್ಲಿನ ಮೂಲಸೌಕರ್ಯ ಕೊರತೆ ವೃದ್ಧಿಯಾಗುವುದು ದೊಡ್ಡ ಹಿನ್ನಡೆಯಾಗಿದೆ. ಪ್ರಸ್ತುತ ಅಂತಹ ಸ್ಥಿತಿ ಪುದು-ಮಾಪ್ಲ ಸರಕಾರಿ ಶಾಲೆಗೆ ಬಂದೊದಗಿದೆ. ಶಾಲೆಯಲ್ಲಿ ಪ್ರಸ್ತುತ ವರ್ಷ ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿಯಾಗಿದ್ದು, ತರಗತಿ ಕೊಠಡಿ, ಪೀಠೊಪಕರಣಗಳ ಕೊರತೆ ಕಾಡುತ್ತಿದೆ.

ಪುದು-ಮಾಪ್ಲ ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಕಳೆದ ವರ್ಷ 283 ವಿದ್ಯಾರ್ಥಿಗಳಿದ್ದು, ಪ್ರಸ್ತುತ 411 ವಿದ್ಯಾರ್ಥಿಗಳಿದ್ದಾರೆ. ಅಂದರೆ 128 ವಿದ್ಯಾರ್ಥಿಗಳು ಈ ವರ್ಷ ಹೆಚ್ಚಳವಾಗಿದೆ. ಜತೆಗೆ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗಿದ್ದು, ಆದರೆ ಅವರ ಟಿಸಿ ನೋಂದಣಿಯಾಗದೆ ಅದರ ಸಂಖ್ಯೆ ಇನ್ನೂ ಅಂತಿಮಗೊಂಡಿಲ್ಲ ಎಂದು ಶಾಲೆಯ ಮೂಲಗಳು ತಿಳಿಸಿವೆ.

ಒಟ್ಟು 70 ಸೆಂಟ್ಸ್‌ ನಿವೇಶನವನ್ನು ಹೊಂದಿರುವ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಕೊಠಡಿ ಸೇರಿ ಒಟ್ಟು 9 ತರಗತಿ ಕೊಠಡಿಗಳಿವೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಎ, ಬಿಗಳೆಂದು ವರ್ಗೀಕರಣ ಮಾಡಿದರೆ ಒಟ್ಟು 20 ಕೊಠಡಿಗಳ ಅವಶ್ಯಕತೆ ಇರುತ್ತದೆ.

ಇದನ್ನೂ ಓದಿ:ವರ್ಷಾಂತ್ಯಕ್ಕೆ ಖಾದ್ಯ ತೈಲಗಳ ಬೆಲೆಯಲ್ಲಿ ಇಳಿಕೆ : ಸುಧಾಂಶು ಪಾಂಡೆ

ಇತ್ತೀಚೆಗೆ ಶಾಸಕರ ಅನುದಾನದ ಮೂಲಕ ಶಾಲೆಯ ಸಭಾಂಗಣ ಉದ್ಘಾಟನೆಗೊಂಡಿದೆ. ಆದರೆ ತರಗತಿ ಕೊಠಡಿಗಳ ಬೇಡಿಕೆ ಹಾಗೇ ಇದೆ.
ಶಾಲೆಯ 1ನೇ ತರಗತಿಯಲ್ಲಿ 107 ವಿದ್ಯಾರ್ಥಿಗಳಿದ್ದು, 30 ವಿದ್ಯಾ ರ್ಥಿಗಳಂತೆ ವಿಭಾಗಿಸಿದರೆ ಕನಿಷ್ಠ 3 ತರಗತಿ ಕೊಠಡಿಗಳು ಬೇಕಾಗುತ್ತದೆ. 2-3ನೇ ತರಗತಿಯಲ್ಲಿ 80ಕ್ಕೂ ಅಧಿಕ ಮಕ್ಕಳಿದ್ದು, 40ರಂತೆ ವಿಭಾಗಿಸಿದರೆ ತಲಾ ಎರಡು ಕೊಠಡಿ ಬೇಕಾಗುತ್ತದೆ. ಉಳಿದಂತೆ 4ರಿಂದ 8ರ ವರೆಗೆ 5 ತರಗತಿ ಕೊಠಡಿಗಳು ಬೇಕಾಗುತ್ತದೆ. ಜತೆಗೆ ಪೀಠೊಪಕರಣಗಳು ಕೊರತೆಯಾಗುತ್ತಿದೆ.

ಮೌಲನಾ ಆಝಾದ್‌ ಶಾಲೆಯೂ ಇದೆ
ಪುದುವಿಗೆ ಮಂಜೂರಾಗಿರುವ ಮೌಲನಾ ಆಝಾದ್‌ ಶಾಲೆಯು ಪುದು-ಮಾಪ್ಲ ಶಾಲೆಯ ಕಟ್ಟಡದಲ್ಲೇ ಇದ್ದು, ಸುಮಾರು 200 ಮಕ್ಕಳು ಅಲ್ಲಿದ್ದಾರೆ.ಅಂದರೆ 4 ಕೊಠಡಿಗಳನ್ನು ಅವರಿಗೆ ಬಿಟ್ಟು ಕೊಡಲಾಗಿದೆ. ಈ ಶಾಲೆಗೆ ತರಗತಿ ಕೊಠಡಿಗಳ ಕೊರತೆಗೆ ಇದು ಕೂಡ ಮುಖ್ಯ ಕಾರಣವಾಗಿದೆ. ಮೌಲನಾ ಆಝಾದ್‌ ಶಾಲೆಯ ಕಟ್ಟಡ ಇನ್ನೂ ನಿರ್ಮಾಣ ಹಂತದಲ್ಲಿದೆ.

ಶೌಚಾಲಯದ ಬೇಡಿಕೆಯೂ ಇದೆ
ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾದಾಗ ಶೌಚಾಲಯದ ಬೇಡಿಕೆಯೂ ಇದ್ದು, ಹಾಲಿ ತಲಾ 5ರಂತೆ ಬಾಲಕ-ಬಾಲಕಿಯರಿಗೆ ಒಟ್ಟು 10 ಶೌಚಾಲಯಗಳಿವೆ. ಒಂದು ವಿಶೇಷ ಮಕ್ಕಳ ಶೌಚಾಲಯವಿದೆ. ಆದರೆ ಮುಂದೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭಗೊಂಡು ಅಲ್ಪ ವಿರಾಮದಲ್ಲಿ ಎಲ್ಲರೂ ಶೌಚಾಲಯವನ್ನು ಉಪ ಯೋಗಿಸುವುದು ಕಷ್ಟ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಶಿಕ್ಷಕರ ಹುದ್ದೆ ಮಂಜೂರು
ಶಾಲೆಯಲ್ಲಿ ಪ್ರಸ್ತುತ 6 ಖಾಯಂ ಶಿಕ್ಷಕರಿದ್ದು, ಕಳೆದ ವರ್ಷ 3 ಅತಿಥಿ ಶಿಕ್ಷಕರು ಸೇರಿ 9 ಮಂದಿ ಕರ್ತವ್ಯ ನಿರ್ವಹಿಸಿದ್ದರು. ಈ ವರ್ಷ ಮುಂದಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಶಾಲೆಗೆ 4 ಶಿಕ್ಷಕರನ್ನು ನೀಡುವ ಭರವಸೆ ಸಿಕ್ಕಿದ್ದು, ಜತೆಗೆ ಅತಿಥಿ ಶಿಕ್ಷಕರೂ ಸಿಗುವುದರಿಂದ ಶಿಕ್ಷಕರ ಸಂಖ್ಯೆ ಕೊರತೆಯಾಗದು ಎಂದು ಶಾಲೆಯ ಮೂಲಗಳು ತಿಳಿಸಿವೆ.

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.