ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ ಬಿಸಿಲು, ಸೆಕೆ; ಬೆಂಕಿ ಅವಘಡ

ಅರಣ್ಯ, ಕೃಷಿ ಭೂಮಿಗೆ ಅಪಾಯ!

Team Udayavani, Apr 18, 2020, 6:15 AM IST

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ ಬಿಸಿಲು, ಸೆಕೆ; ಬೆಂಕಿ ಅವಘಡ

ಸಾಂದರ್ಭಿಕ ಚಿತ್ರ..

ವಿಶೇಷ ವರದಿ-ಮಂಗಳೂರು / ಸುಳ್ಯ: ಅಬ್ಬಬ್ಟಾ… ಎಂಥಾ ಸೆಕೆ ಮಾರಾಯ್ರೆ! ಇದು ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಎಲ್ಲರ ಬಾಯಿಯಿಂದ ಕೇಳಿ ಬರುತ್ತಿರುವ ಮಾತು.

ಇದರ ಜತೆಗೇ ಅರಣ್ಯ, ರಬ್ಬರ್‌ ತೋಟಗಳಲ್ಲಿ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯುತ್‌ ಸಹಿತ ಹಲವು ಕಾರಣಗಳಿಂದ ಬೆಂಕಿ ಕಿಡಿ ಹಸುರು ಸಂಪತ್ತನ್ನು ದಹಿಸುತ್ತಿದೆ.

ಹಲವು ಪ್ರಕರಣ
ಸುಳ್ಯ ತಾಲೂಕಿನ ಹತ್ತಕ್ಕೂ ಅಧಿಕ ಕಡೆಗಳಲ್ಲಿ ಈಗಾಗಲೇ ಬೆಂಕಿ ಅವಘಡ ಸಂಭವಿಸಿದೆ. ಅರಂತೋಡು ಭಾಗದಲ್ಲಿ ಅರಣ್ಯ ಪ್ರದೇಶ, ಕನಕಮಜಲು, ಐವರ್ನಾಡು, ಪೆರುವಾಜೆ ಮೊದಲಾದೆಡೆ ರಬ್ಬರ್‌, ಗೇರು ತೋಟಗಳು ಬೆಂಕಿಗೆ ಆಹುತಿ ಆಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಬೀಡಿ, ಸಿಗರೇಟ್‌ ಸೇದಿ ಎಲ್ಲೆಂದರಲ್ಲಿ ಎಸೆಯುವುದೇ ಮೊದಲಾದ ಮನುಷ್ಯನ ನಿರ್ಲಕ್ಷ್ಯ ಬೆಂಕಿ ಅವಘಡಕ್ಕೆ ಕಾರಣವಾಗುತ್ತದೆ. ಕೆಲವು ಬಾರಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳಿಂದ ಸಿಡಿಯುವ ಬೆಂಕಿ ಕಿಡಿ ಅಥವಾ ವಿದ್ಯುತ್‌ ತಂತಿಗಳು ಬೆಸೆದು ಸೃಷ್ಟಿಯಾಗುವ ಕಿಡಿಯಿಂದ ಕೃಷಿ ಮತ್ತು ಅರಣ್ಯ ಪ್ರದೇಶ ಆಹುತಿಯಾಗುವುದೂ ಇದೆ. ಆದರೆ ಟ್ರಾನ್ಸ್‌ಫಾರ್ಮರ್‌ಗಳಿಂದ ಕಿಡಿ ಹಬ್ಬಿರುವ ಯಾವುದೇ ಲಕ್ಷಣ ಕಂಡು ಬರುತ್ತಿಲ್ಲ ಎನ್ನುತ್ತಾರೆ ಸುಳ್ಯ ಮೆಸ್ಕಾಂ ಎಇ ಹರೀಶ್‌ ಅವರು.

ಈ ಬಾರಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡದ ಒಂದು ಪ್ರಕರಣ ಕಂಡುಬಂದಿದ್ದು, ಅದನ್ನು ತತ್‌ಕ್ಷಣ ತಹಬದಿಗೆ ತಂದಿದ್ದೇವೆ ಎನ್ನುತ್ತಾರೆ ಸುಳ್ಯ ವಲಯ ಅರಣ್ಯಧಿಕಾರಿ ಮಂಜುನಾಥ ಎನ್‌.

ಬೆಂಕಿ ರೇಖೆ
ಅರಣ್ಯದಲ್ಲಿ ಅಲ್ಲಲ್ಲಿ ಬೆಂಕಿ ರೇಖೆಗಳನ್ನು ನಿರ್ಮಿಸುವುದರಿಂದ ಕಾಳಿYಚ್ಚು ವ್ಯಾಪಿಸುವುದನ್ನು ತಡೆಯಬಹುದು. ಪದೇ- ಪದೇ ಇದರ ಪರಿಶೀಲನೆ ಅಗತ್ಯ ಇದೆ. ತರೆಗೆಲೆಗಳು ಬೆಂಕಿ ರೇಖೆಯನ್ನು ಮುಚ್ಚುವುದರಿಂದ ಬೆಂಕಿ ಹರಡಲು ಕಾರಣವಾಗಬಹುದು.

ಈಗ ಲಾಕ್‌ಡೌನ್‌ ಪರಿಶೀಲನೆಗೆ ಅಡ್ಡಿ ಆಗುತ್ತಿದೆ ಎನ್ನುತ್ತಾರೆ ಕಾಡಿನ ಸನಿಹದ ನಿವಾಸಿಗಳು.ವಿದ್ಯುತ್‌ ತಂತಿ, ಟ್ರಾನ್ಸ್‌ಫಾರ್ಮರ್‌ ಅಳವಡಿಸಿರುವಲ್ಲಿ ಅಪಾಯ ಹೆಚ್ಚು. ಅಲ್ಲಿರುವ ಒಣ ಗಿಡ, ಮರ, ಎಲೆಗಳನ್ನು ತೆರವು ಮಾಡಬೇಕು. ಆ ಕಾರ್ಯವನ್ನು ಯಾರು ಮಾಡಬೇಕು ಎಂಬ ಗೊಂದಲ ಇದೆ. ಮೆಸ್ಕಾಂಗೆ ನಿತ್ಯವೂ ಅದನ್ನು ಗಮನಿಸಲು ಅಸಾಧ್ಯವಾಗಿರುವ ಕಾರಣ ಸ್ಥಳೀಯಾಡಳಿತ ನಿಗಾ ಇರಿಸಬೇಕಿದೆ.

ಬಿಸಿ ಹೆಚ್ಚಿಸಿದ ಲಾಕ್‌ಡೌನ್‌
ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಮನೆಯೊಳಗಡೆಯೇ ಇರುವುದು ಜನರಿಗೆ ಅನಿವಾರ್ಯವಾಗಿದೆ. ಕಚೇರಿಗಳಲ್ಲಿ, ಕೆಲವು ಮನೆಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಇದ್ದರೂ ಕೋವಿಡ್ 19 ಮುನ್ನೆಚ್ಚರಿಕೆಯಾಗಿ ಅದನ್ನು ಬಳಸುತ್ತಿಲ್ಲ. ತಂಪು ಪಾನೀಯಗಳ ಮಳಿಗೆಗಳು, ಕ್ರೀಂ ಪಾರ್ಲರ್‌ಗಳು ಬಂದ್‌ ಆಗಿರುವುದರಿಂದ ಹಣ್ಣುಗಳನ್ನು ಮನೆಗೊಯ್ದು ಹಾಗೆಯೇ ಅಥವಾ ಜ್ಯೂಸ್‌ ತಯಾರಿಸಿ ಕುಡಿದು ಹೊಟ್ಟೆಯನ್ನು ತಣ್ಣಗಾಗಿಸಿ ಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಗರಗಳಲ್ಲಿ ಡೋರ್‌ ಡೆಲಿವರಿ ಇರುವುದರಿಂದ ಕೆಲವರು ತಂಪು ಪಾನೀಯ, ಜ್ಯೂಸ್‌, ಐಸ್‌ಕ್ರೀಂಗಳನ್ನು ಮನೆಗೇ ತರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಕಲ್ಲಂಗಡಿ, ಕಬೂìಜ, ದಾಳಿಂಬೆ, ದ್ರಾಕ್ಷಿ, ಸೇಬು, ಬಾಳೆ ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಅಲ್ಪಸ್ವಲ್ಪ ಮಳೆಯಿಂದ
ಸೆಕೆ ಹೆಚ್ಚಳ
ಕರಾವಳಿಯ ಕೆಲವೆಡೆ ಇತ್ತೀಚೆಗೆ ಅಲ್ಪಸ್ವಲ್ಪ ಮಳೆ ಬರುತ್ತಿರುವುದೂ ಸೆಕೆ ಹೆಚ್ಚಾಗಲು ಕಾರಣ. ಮಂಗಳೂರಿನಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 36ರಿಂದ 37 ಡಿಗ್ರಿ ಸೆಲ್ಸಿಯಸ್‌ ಇತ್ತು. 3-4 ದಿನಗಳಿಂದ ಇದೇ ಮಟ್ಟದಲ್ಲಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.