I.N.D.I.A: ಕೆಲ ಟಿವಿ ನಿರೂಪಕರನ್ನು ಬಹಿಷ್ಕರಿಸುತ್ತ ಐಎನ್ಡಿಐಎ?
-ವಿರೋಧ ಪಕ್ಷಗಳಿಗೆ ವಿರುದ್ಧವಾಗಿರುವವರ ವಿರುದ್ಧ ಕ್ರಮಕ್ಕೆ ನಿರ್ಧಾರ: ಮೂಲಗಳು
Team Udayavani, Sep 7, 2023, 8:43 PM IST
ನವದೆಹಲಿ: ಕೆಲ ಟಿವಿ ಚಾನೆಲ್ಗಳ ಕೆಲವು ನಿರೂಪಕರನ್ನು ಬಹಿಷ್ಕರಿಸಲು ಪ್ರತಿಪಕ್ಷಗಳ ಒಕ್ಕೂಟ ಐಎನ್ಡಿಐಎ ಮುಂದಾಗಿದೆ. ಅಲ್ಲದೇ ಈ ನಿರೂಪಕರು ನಡೆಸಿಕೊಡುವ ಸಂವಾದ, ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರಲು ಐಎನ್ಡಿಐಎ ನಾಯಕರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆ.8ರಂದು ಐಎನ್ಡಿಐಎ ಮಾಧ್ಯಮ ಸಮಿತಿ ಸದಸ್ಯರು ಸಭೆ ಸೇರಲಿದ್ದು, ಈ ವೇಳೆ ಬಹಿಷ್ಕರಿಸಲಾಗುವ ನಿರೂಪಕರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. “ಯಾವುದೇ ಚಾನೆಲ್ ಅನ್ನು ಬಹಿಷ್ಕರಿಸುವುದಿಲ್ಲ. ತಮ್ಮ ಟಿವಿ ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ನಿರೂಪಣೆ ಹೇರಲು ಪ್ರಯತ್ನಿಸುವ ಕೆಲವು ನಿರೂಪಕರನ್ನು ಬಹಿಷ್ಕರಿಸಲಾಗುವುದು. ಪಟ್ಟಿಯಲ್ಲಿ 8-9 ನಿರೂಪಕರಿರಬಹುದು’ ಎಂದು ಐಎನ್ಡಿಐಎ ಒಕ್ಕೂಟದ ನಾಯಕರೊಬ್ಬರು ತಿಳಿಸಿದ್ದಾರೆ.
“ವಿರೋಧ ಪಕ್ಷಗಳ ಹಿತಾಸಕ್ತಿಗಳಿಗೆ ವಿರುದ್ಧವಾದ ಹಾಗೂ ಆಡಳಿತರೂಢ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ಮತ್ತು ಈ ನಿಟ್ಟಿನಲ್ಲಿ ನಿರ್ದಿಷ್ಟ ನಿರೂಪಣೆ ಹೇರಲು ಪ್ರಯತ್ನಿಸುವ ನಿರೂಪಕರು ಈ ಪಟ್ಟಿಯಲ್ಲಿ ಇರಲಿದ್ದಾರೆ. 2024ರ ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೂ ಐಎನ್ಡಿಐಎ ನಾಯಕರು ಇವರ ಟಿವಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಚಾನೆಲ್ಗಳ ನಿರೂಪಕರು ಈ ಪಟ್ಟಿಯಲ್ಲಿ ಇರಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ. ಐಎನ್ಡಿಐಎ ಮಾಧ್ಯಮ ಸಮಿತಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಆಪ್ನ ರಾಘವ್ ಚಡ್ಡಾ, ಆರ್ಜೆಡಿಯ ಮನೋಜ್ ಜಾ ಸೇರಿದಂತೆ ಕೆಲವು ನಾಯಕರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ