ಚೀನ-ನೇಪಾಲ ತಂಟೆ : ಕೋವಿಡ್ ಸಮಯದಲ್ಲಿ ಗದ್ದಲ


Team Udayavani, May 22, 2020, 5:50 AM IST

ಚೀನ-ನೇಪಾಲ ತಂಟೆ : ಕೋವಿಡ್ ಸಮಯದಲ್ಲಿ ಗದ್ದಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಈಗ ಮತ್ತೂಮ್ಮೆ ಲಡಾಖ್‌ ಹಾಗೂ ಸಿಕ್ಕಿಂ ಪ್ರದೇಶಗಳ ಬಳಿ ಭಾರತ ಮತ್ತು ಚೀನ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಚೀನದ ಸೈನಿಕರು ಜಮೆಯಾಗುತ್ತಿದ್ದಂತೆಯೇ ಇತ್ತ ಭಾರತವೂ ನಮ್ಮ ಸೈನಿಕರನ್ನು ಸಜ್ಜುಗೊಳಿಸಿದ್ದು, ಚೀನದ ಈ ಅಪ್ರಚೋದಿತ ವರ್ತನೆಗೆ ಕಾರಣವೇನಿರಬಹುದು ಎಂಬ ಅನುಮಾನವಂತೂ ಭಾರತಕ್ಕೆ ದಟ್ಟವಾಗಿದೆ.

ಆದಾಗ್ಯೂ ಈ ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರಗಳ ನಡುವಿನ ಗಡಿ ವಿವಾದ ಹೊಸತಲ್ಲವಾದರೂ, ಕೋವಿಡ್ ಸಂಕಷ್ಟದ ಈ ಸಮಯದಲ್ಲೂ ಚೀನ ತನ್ನ ವಿಸ್ತರಣಾವಾದಿ ದುರ್ಬುದ್ಧಿಯನ್ನು ಬಿಡದೇ ಇರುವುದು ನಿಜಕ್ಕೂ ದುರಂತವೇ ಸರಿ.

ಭಾರತಕ್ಕಿಂತೂ ಇದು ಸವಾಲಿನ ಸಮಯ. ಅತ್ತ ಪಾಕಿಸ್ತಾನವು ನಿತ್ಯ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಾ, ಉಗ್ರರನ್ನು ನುಸುಳಿಸಲು ಪ್ರಯತ್ನಿಸುತ್ತಿದ್ದರೆ, ಇತ್ತ ಚೀನದ ಹಾವಳಿ. ಇನ್ನೊಂದೆಡೆ ಈ ಸಾಲಿಗೆ ನೇಪಾಲ ಕೂಡ ಸೇರಿಕೊಂಡಿದೆ.

ಕೆ.ಪಿ. ಶರ್ಮಾ ಓಲಿ ನೇತೃತ್ವದ ನೇಪಾಲ ಸರ್ಕಾರವೀಗ ಭಾರತಕ್ಕೆ ಸೇರಿದ ಪ್ರದೇಶವನ್ನು ತನ್ನದೆಂದು ಹೇಳುತ್ತಾ ನಕ್ಷೆಯನ್ನು ಬಿಡುಗಡೆಗೊಳಿಸಿದೆ. ಹಠಾತ್ತನೆ ನೇಪಾಲ ಎತ್ತಿರುವ ಈ ಭೂತಕರಾರಿನ ಹಿಂದೆ ನಿಸ್ಸಂಶಯವಾಗಿಯೂ ಚೀನದ ಕುಮ್ಮಕ್ಕು ಇದೆ.

ಕಮ್ಯುನಿಸ್ಟ್‌ ಕೆ.ಪಿ. ಶರ್ಮಾ ಹಾಗೂ ಚೀನ ನಡುವಿನ ಸ್ನೇಹ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಲೇ ಸಾಗಿದೆ. ಭಾರತವನ್ನು ಏನಕೇನ ಸುತ್ತುವರಿಯಬೇಕು ಎಂಬ ಚೀನದ ಮಹತ್ವಾಕಾಂಕ್ಷೆಗೆ ಈಗ ನೇಪಾಲ ಬಹುಮುಖ್ಯ ದಾಳವಾಗಿ ಬದಲಾಗಿದೆ.

ವಾಸ್ತವದಲ್ಲಿ ನೇಪಾಲ, ಸಿಕ್ಕಿಂ ಮತ್ತು ಭೂತಾನವನ್ನು ಚೀನ, ಭಾರತದ ವಿರುದ್ಧದ ಸಾಮರಿಕ ದೃಷ್ಟಿಯಿಂದ ಮಹತ್ವದ ಕ್ಷೇತ್ರಗಳೆಂದು ಭಾವಿಸುತ್ತದೆ. ಈ ಕಾರಣಕ್ಕಾಗಿಯೇ ಅದು ಡೋಕ್ಲಾಂನಲ್ಲಿ ರಸ್ತೆ ನಿರ್ಮಾಣ ಆರಂಭಿಸಿತ್ತು.

ಆ ಮೂಲಕ ಭಾರತದ ಪೂರ್ವೋತ್ತರ ಭಾಗಗಳ ಜತೆಗಿನ ಸಂಪರ್ಕ ಸುಲಭವಾಗಬಹುದು ಹಾಗೂ ಭಾರತೀಯ ಸೈನಿಕರ ಕಣ್ಗಾವಲು ಶಕ್ತಿಯನ್ನು ತಗ್ಗಿಸಬಹುದು ಎಂಬ ದುರಾಲೋಚನೆ ಚೀನದ್ದು. ಆದರೆ, ಯಾವಾಗ ಭೂತಾನ್‌ ಚೀನದ ಈ ನಡೆಗೆ ವಿರೋಧ ವ್ಯಕ್ತಪಡಿಸಿತೋ, ಭಾರತ ಕೂಡ ಖಡಕ್‌ ಎಚ್ಚರಿಕೆಯನ್ನೇ ನೀಡಿತ್ತು. ಡೋಕ್ಲಾಂ ವಿಷಯದಲ್ಲಿ ಎರಡೂ ದೇಶಗಳ ನಡುವೆ ಬಿಕ್ಕಟ್ಟು ಹೆಚ್ಚುತ್ತಾ ಹೋಗಿ, ಕೊನೆಗೂ ಚೀನ ಹಿಂದೆ ಸರಿಯುವಂತಾಗಿತ್ತು.

ಸತ್ಯವೇನೆಂದರೆ, ಲಿಪುಲೇಖ್‌ನಲ್ಲಿ ಭಾರತದ ರಸ್ತೆ ನಿರ್ಮಾಣವಾಗುತ್ತಿದ್ದಂತೆಯೇ, ಭಾರತೀಯ ಸೈನಿಕರಿಗೆ ಚೀನದ ಗಡಿ ಭಾಗದಲ್ಲಿನ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲು ಸಾಧ್ಯವಾಗುತ್ತದೆ. ಈ ಕಾರಣಕ್ಕಾಗಿಯೇ, ಚೀನ ನೇಪಾಳವನ್ನು ಎತ್ತಿಕಟ್ಟುತ್ತಿರುವುದು.

ಲಿಪುಲೇಖ್‌ ಪ್ರದೇಶದಲ್ಲಿ ಭಾರತವು ರಸ್ತೆ ನಿರ್ಮಾಣದ ವಿಚಾರದಲ್ಲಿ ನೇಪಾಳದ ಜತೆಗೆ ಬಹಳ ಹಿಂದೆಯೇ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಈಗಿನ ನೇಪಾಲ ಪ್ರಧಾನಮಂತ್ರಿಗಳು ಆ ಒಪ್ಪಂದಕ್ಕೆ ಮನ್ನಣೆ ನೀಡಲು ಒಪ್ಪುತ್ತಿಲ್ಲ.

ಒಟ್ಟಲ್ಲಿ ಭಾರತದ ಬಗ್ಗೆ ನೇಪಾಳದ ಬದಲಾದ ಈ ಧೋರಣೆಯನ್ನು ಅರ್ಥಮಾಡಿಕೊಳ್ಳುವುದು ಕಷ್ಟವೇನೂ ಅಲ್ಲ. ನಿಸ್ಸಂಶಯವಾಗಿಯೂ ಇದರ ಹಿಂದೆ ಚೀನದ ಕುತಂತ್ರ ಕೆಲಸ ಮಾಡುತ್ತಿದೆ. ಆದಾಗ್ಯೂ, ವ್ಯಾಪಾರಿ ಬುದ್ಧಿಯ ಚೀನಕ್ಕೆ ಮುಂದಿನ ದಿನಗಳಲ್ಲಿ ಭಾರತದೊಂದಿಗೆ ವ್ಯವಹಾರ ಅನಿವಾರ್ಯವೂ ಹೌದು.

ಕೋವಿಡ್ ನಿಂದಾಗಿ ಅದರ ಜಾಗತಿಕ ವರ್ಚಸ್ಸಿಗೆ ಬಹಳ ಪೆಟ್ಟು ಬಿದ್ದಿದೆ. ಇನ್ನು ನೇಪಾಳವೂ ಕೂಡ ಈ ವಿಚಾರದಲ್ಲಿ ಚೀನದ ತಾಳಕ್ಕೆ ತಕ್ಕಂತೆ ಹೆಚ್ಚು ದಿನ ಕುಣಿಯಲಾರದು. ಹೀಗಾಗಿ, ಪ್ರಸಕ್ತ ಬಿಕ್ಕಟ್ಟು ತಾತ್ಕಾಲಿಕ ಮಾತ್ರ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.