India: ಜಾಗತಿಕ ಆರ್ಥಿಕತೆಯ ಬೆಳವಣಿಗೆಗೆ ಭಾರತ ಎಂಜಿನ್: ಪ್ರಧಾನಿ ಮೋದಿ
ದೇಶ ಈಗ ಜಗತ್ತಿನ ಮಿತ್ರ - ವೈಬ್ರೆಂಟ್ ಸಮಾವೇಶಕ್ಕೆ ಅದ್ದೂರಿ ಚಾಲನೆ
Team Udayavani, Jan 11, 2024, 1:32 AM IST
ಗಾಂಧಿನಗರ: ಜಾಗತಿಕ ಆರ್ಥಿಕತೆಯ ಬೆಳವಣಿಗೆಗೆ ಎಂಜಿನ್ ಆಗಿರುವ ಭಾರತವನ್ನು ಜಗತ್ತು ವಿಶ್ವಾಸಾರ್ಹ ಸ್ನೇಹಿತನಾಗಿ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ “ವೈಬ್ರೆಂಟ್ ಗುಜರಾತ್ ಜಾಗತಿಕ ಹೂಡಿಕೆ ಸಮಾವೇಶ’ದ 10ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಜಾಗತಿಕವಾಗಿ ಎದುರಿ ಸಿರುವ ಅನೇಕ ಅನಿಶ್ಚಿತತೆಗಳ ನಡುವೆ ಭಾರತ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ. ಕ್ಷಿಪ್ರ ವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಭಾರತವು “ವಿಶ್ವ ಮಿತ್ರ'(ವಿಶ್ವದ ಮಿತ್ರ)ನಾಗಿ ಹೊರ ಹೊಮ್ಮುತ್ತಿದೆ. ಜಗತ್ತಿನಲ್ಲಿ ಸದ್ಯ ಉಂಟಾಗಿರುವ ಅಸ್ಥಿರತೆಯ ನಡುವೆ ಜಗತ್ತು ಭಾರತವನ್ನು ಪ್ರಮುಖ ಆಧಾರಸ್ತಂಭವಾಗಿ ಪರಿಗಣಿಸುತ್ತದೆ ಎಂದರು. “ನಾವು ಗುರಿಗಳನ್ನು ನಿರ್ಧರಿಸಬಹುದು ಮತ್ತು ಅವುಗಳನ್ನು ಸಾಧಿಸಬಹುದು ಎಂಬ ಭರವಸೆಯನ್ನು ಭಾರತ ಜಗತ್ತಿಗೆ ಮೂಡಿಸಿದೆ. ಜಗತ್ತಿನ ಕಲ್ಯಾಣಕ್ಕಾಗಿ ಭಾರತದ ಬದ್ಧತೆ, ಸಮರ್ಪ ಣೆ ಜಗತ್ತನ್ನು ಹೆಚ್ಚು ಸುರಕ್ಷಿತ ಮತ್ತು ಸಮೃದ್ಧ ಗೊಳಿಸುತ್ತಿದೆ ಎಂದು ಮೋದಿ ಹೇಳಿದರು.
2 ಲಕ್ಷ ಕೋಟಿ ರೂ.ಹೂಡಿಕೆ: ಗೌತಮ್ ಅದಾನಿ
ಗುಜರಾತ್ನಲ್ಲಿ ಅದಾನಿ ಸಮೂಹದಿಂದ ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು ಎಂದು ಉದ್ಯಮಿ ಗೌತಮ್ ಅದಾನಿ ಘೋಷಿಸಿ ದರು. ಅತೀ ದೊಡ್ಡ ಶುದ್ಧ ಇಂಧನ ಯೋಜನೆ ಜತೆಗೆ ಸೌರ ಮಾಡ್ನೂಲ್, ವಿಂಡ್ ಟರ್ಬೈನ್ , ಹೈಡ್ರೋಜನ್ ಎಲೆಕ್ಟ್ರೋಲೈಸರ್ ತಯಾರಿಕೆಗೆ ದೊಡ್ಡ ಕೈಗಾರಿಕೆ ಸ್ಥಾಪಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ