G-20 ಶೃಂಗಕ್ಕೆ ಹೊಸ ಭಾಷ್ಯ ಬರೆಯಲು ಭಾರತ ಸನ್ನದ್ಧ


Team Udayavani, Sep 8, 2023, 11:43 PM IST

G 20

ಭಾರತದಲ್ಲಿ ಇದೇ ಮೊದಲ ಬಾರಿಗೆ ಜಿ 20 ರಾಷ್ಟ್ರಗಳ ಶೃಂಗಸಭೆ ರಾಜಧಾನಿ ಹೊಸದಿಲ್ಲಿಯಲ್ಲಿ ಶನಿವಾರ ಮತ್ತು ರವಿವಾರಗಳಂದು ನಡೆಯಲಿದೆ. ಶುಕ್ರವಾರವೇ ಜಿ20 ರಾಷ್ಟ್ರಗಳು ಮತ್ತು ಅತಿಥಿ ರಾಷ್ಟ್ರಗಳ ನಾಯಕರು ಹೊಸದಿಲ್ಲಿಗೆ ಬಂದಿಳಿದಿದ್ದಾರೆ.

ಪ್ರಪ್ರಥಮ ಬಾರಿಗೆ ಜಿ20 ರಾಷ್ಟ್ರಗಳ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಭಾರತ ಕಳೆದ 10 ತಿಂಗಳುಗಳ ಅವಧಿಯಲ್ಲಿ ದೇಶದ ಮೂಲೆಮೂಲೆಗಳಿಗೆ ಜಿ20 ರಾಷ್ಟ್ರಗಳ ಪ್ರತಿನಿಧಿಗಳನ್ನು ಕರೆದೊಯ್ದು ಅಲ್ಲಿನ ಇತಿಹಾಸ, ಸಂಸ್ಕೃತಿಯನ್ನು ಪರಿಚಯಿಸಿದೆ. ಈಗ ತನ್ನ ಅಧ್ಯಕ್ಷತೆಯ ಜಿ20 ಶೃಂಗಸಭೆಯನ್ನು ಅತ್ಯಂತ ಅದ್ದೂರಿಯಿಂದ ಮತ್ತು ಅಷ್ಟೇ ಮಹತ್ವಪೂರ್ಣ ಚರ್ಚೆ, ಸಮಾಲೋಚನೆಗಳು ನಡೆದು ಐತಿಹಾಸಿಕ ನಿರ್ಣಯಗಳನ್ನು ಕೈಗೊಳ್ಳುವ ರೂಪರೇಖೆಗಳೊಂದಿಗೆ ಸಜ್ಜಾಗಿ ನಿಂತಿದೆ.

ಜಿ20 ಅಧ್ಯಕ್ಷತೆಯನ್ನು ಕೇವಲ ರಾಜತಾಂತ್ರಿಕ ಪ್ರಕ್ರಿಯೆಯ ಭಾಗ ಎಂದು ಭಾವಿಸದೆ ಪ್ರತಿಯೊಂದೂ ಹಂತದಲ್ಲೂ ಜಾಗತಿಕ ಸಮುದಾಯವನ್ನು ತನ್ನತ್ತ ಆಕರ್ಷಿಸುವಲ್ಲಿ ಸಫ‌ಲವಾಗಿದೆ. “ವಸುಧೈವ ಕುಟುಂಬಕಂ; ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಜಿ20 ರಾಷ್ಟ್ರಗಳ ಅಧ್ಯಕ್ಷಗಿರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಈಗ ಈ ಎಲ್ಲ ಯಶಸ್ಸಿನ ಗೋಪುರಕ್ಕೆ ಜಿ20 ಶೃಂಗಸಭೆಯ ಸ್ವರ್ಣ ಕಲಶವನ್ನಿಡಲು ಮುಹೂರ್ತ ಕೂಡಿಬಂದಿದೆ.

ಜಿ20 ಶೃಂಗ ಸಭೆಯಲ್ಲಿ ರಷ್ಯಾ-ಉಕ್ರೇನ್‌ ಸಮರ, ಕೆಲವೊಂದು ದೇಶಗಳ ವಿಸ್ತರಣಾವಾದ, ಭಯೋತ್ಪಾದನೆ, ಜಾಗತಿಕ ಆರ್ಥಿಕ ಬಿಕ್ಕಟ್ಟು, ಹವಾಮಾನ ಬದಲಾವಣೆ, ಪರಿಸರ ಸ್ನೇಹಿ ಇಂಧನ ಬಳಕೆ ಸಹಿತ ವಿವಿಧ ಜಾಗತಿಕ ಸಮಸ್ಯೆಗಳು ಮತ್ತು ಆದ್ಯತೆಯ ವಿಷಯಗಳ ಕುರಿತಂತೆ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಚರ್ಚಿಸಲಿದ್ದಾರೆ. ಇವೆಲ್ಲದರ ನೇತೃತ್ವವನ್ನು ಸ್ವತಃ ಭಾರತವೇ ವಹಿಸಲಿದೆ ಎಂಬುದು ದೇಶವಾಸಿಗಳಾದ ನಮಗೆಲ್ಲರಿಗೂ ಹೆಮ್ಮೆಯ ಮತ್ತು ಗೌರವದ ವಿಷಯ.

ಇದೇ ವೇಳೆ ಜಿ20 ಶೃಂಗಸಭೆಗೆ ಆಗಮಿಸಿರುವ ವಿವಿಧ ರಾಷ್ಟ್ರಗಳ ನಾಯಕರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಶುಕ್ರವಾರದ ಸಂಜೆಯಿಂದಲೇ ಪ್ರಧಾನಿ ಅವರು ಈ ಮಾತುಕತೆ ಸರಣಿಗೆ ಚಾಲನೆ ನೀಡಿದ್ದು ವಿವಿಧ ದೇಶಗಳೊಂದಿಗಿನ ಬಾಂಧವ್ಯ ವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದ, ನಿರ್ಣಯಗಳಿಗೆ ಅಂಕಿತ ಹಾಕುವ ನಿರೀಕ್ಷೆ ಇದೆ.

ಇಡೀ ವಿಶ್ವದ ಶಾಂತಿ, ಅಭಿವೃದ್ಧಿ ಮತ್ತು ಭವಿಷ್ಯದ ದೃಷ್ಟಿಕೋನದಲ್ಲಿ ಭಾರತ ಜಿ20 ಶೃಂಗದ ಅಧ್ಯಕ್ಷತೆಯ ಹೊಣೆಗಾರಿಕೆಯನ್ನು ನಿಭಾಯಿಸಲು ಆರಂಭದಲ್ಲಿಯೇ ಸಂಕಲ್ಪ ತೊಟ್ಟಿತ್ತು. ಅದರಂತೆ ತನ್ನ ಜವಾಬ್ದಾರಿಯನ್ನು ಈವರೆಗೆ ಸಮರ್ಥವಾಗಿ ನಿಭಾಯಿಸಿರುವ ಭಾರತ, ತನ್ನ ಅಧ್ಯಕ್ಷತೆಯ ಕೊನೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಮಾದರಿಯಾಗಿ ನಡೆಸಲು ಮತ್ತು ಶೃಂಗಕ್ಕೆ ಹೊಸಭಾಷ್ಯ ಬರೆಯಲು ಮುಂದಾಗಿದೆ. ಇದೇ ವೇಳೆ ಭಾರತ ತನ್ನ ಸಾರ್ವಭೌಮತೆ, ಘನತೆಗೆ ಎಲ್ಲೂ ಕುಂದುಂಟಾಗದಂತೆ ಎಚ್ಚರಿಕೆಯ ಹೆಜ್ಜೆ ಇಡುವ ಜತೆಯಲ್ಲಿ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಲು ಇದನ್ನೊಂದು ಅವಕಾಶವನ್ನಾಗಿ ಪರಿವರ್ತಿಸಿಕೊಂಡುದುದು ಶ್ಲಾಘನೀಯ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.