World Cup: ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯ ನೆನಪಿನಲ್ಲುಳಿದ ಭಾರತ


Team Udayavani, Nov 19, 2023, 11:50 PM IST

australia wc

ಭಾರತವೇ ಆತಿಥ್ಯ ವಹಿಸಿದ್ದ  ಕ್ರಿಕೆಟ್‌ ವಿಶ್ವಕಪ್‌ ಮುಗಿದಿದೆ. ಆರಂಭದಿಂದ ಫೈನಲ್‌ವರೆಗೆ ಅಜೇಯವಾಗಿ ಬಂದಿದ್ದ ಭಾರತ, ದುರದೃಷ್ಟವಶಾತ್‌ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಸೋತಿದೆ. ಈ ವಿಶ್ವಕಪ್‌ನಲ್ಲಿ ಭಾರತದ ಸಾಧನೆ ಅವಿಸ್ಮರಣೀಯ. ಸಾಂ ಕ ಪ್ರದರ್ಶನದ ಕಾರಣದಿಂದಾಗಿ ಇಡೀ ಲೀಗ್‌ನಲ್ಲಿ ಒಂದೇ ಒಂದು ಪಂದ್ಯ ಸೋಲದೇ ಅಜೇಯವಾಗಿ ಮುನ್ನಡೆದಿತ್ತು. ಜತೆಗೆ ಇಡೀ ವಿಶ್ವಕಪ್‌ನಲ್ಲಿನ ಪ್ರದರ್ಶನಕ್ಕಾಗಿ ರೋಹಿತ್‌ ಶರ್ಮ ಹುಡುಗರಿಗೆ ಶಹಬ್ಟಾಸ್‌ ಹೇಳಲೇಬೇಕು.

ಆದರೆ ಅಹ್ಮದಾಬಾದ್‌ ಬೌಲಿಂಗ್‌ಗೆ ನೆರವಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದ್ದ ವಿಚಾರವೇ. ಹೀಗಾಗಿ ಇಲ್ಲಿ ಯಾರೇ ಟಾಸ್‌ ಗೆದ್ದಿದ್ದರೂ ಬೌಲಿಂಗ್‌ ಅನ್ನೇ ಆರಿಸಿಕೊಳ್ಳುತ್ತಿದ್ದರು. ಇದಕ್ಕೆ ಕಾರಣ ಮೊದಲು ಬ್ಯಾಟಿಂಗ್‌ ಮಾಡುವುದು ಇಲ್ಲಿ ಕಷ್ಟಕರವಾಗಿತ್ತು. ಹೀಗಾಗಿಯೇ ಆಸ್ಟ್ರೇಲಿಯ ನಾಯಕ ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ ಅನ್ನೇ ಆರಿಸಿಕೊಂಡರು. ಇದಕ್ಕೆ ಪೂರಕವೆಂಬಂತೆ, ಆರಂಭದಲ್ಲೇ ಆಸ್ಟ್ರೇಲಿಯ ಬೌಲರ್‌ಗಳು ಮೇಲುಗೈ ಸಾಧಿಸಿದರು. ನಾಯಕ ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌.ರಾಹುಲ್‌ ಅವರು ತಂಡಕ್ಕೆ ಆಸರೆಯಾಗಿ ನಿಂತರು. ಆದರೆ ಶುಭಮನ್‌ ಗಿಲ್‌ ಮತ್ತು ಶ್ರೇಯಸ್‌ ಅಯ್ಯರ್‌ ಅವರ ಬ್ಯಾಟಿಂಗ್‌ ವೈಫ‌ಲ್ಯ ಬಹುವಾಗಿ ಕಾಡಿತು.

ಆದರೆ ಈ ಕೂಟದಲ್ಲಿ ಆಸ್ಟ್ರೇಲಿಯದ ಸಾಧನೆಯನ್ನು ಅವಗಣಿಸುವಂತಿಲ್ಲ. ಆರಂಭದ ಎರಡು ಪಂದ್ಯಗಳಲ್ಲಿ ಸೋತಿದ್ದು ಬಿಟ್ಟರೆ, ಅನಂತರದ ಎಲ್ಲ ಪಂದ್ಯಗಳಲ್ಲಿಯೂ ಅದು ಗಮನಾರ್ಹ ಪ್ರದರ್ಶನ ನೀಡಿ ಫೈನಲ್‌ವರೆಗೆ ಬಂದಿತು. ತಾನಾಡಿದ

ಮೊದಲ ಪಂದ್ಯದಲ್ಲೇ ಭಾರತದ ವಿರುದ್ಧ ಆಸ್ಟ್ರೇಲಿಯ ಹೀನಾಯವಾಗಿ ಸೋತಿತ್ತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಸೋತಿತ್ತು. ಆಗ ಪ್ಯಾಟ್‌ ಕಮಿನ್ಸ್‌ ಬಗ್ಗೆ ಮತ್ತು ಆಸ್ಟ್ರೇಲಿಯ ಆಟಗಾರರ ಬಗ್ಗೆ ಹಲವಾರು ಟೀಕೆಗಳು ವ್ಯಕ್ತವಾಗಿದ್ದವು. ಮೊದಲೆರಡು ಪಂದ್ಯ ಬಿಟ್ಟರೆ ಅನಂತರ ಆಸ್ಟ್ರೇಲಿಯ ಮುಟ್ಟಿದ್ದೆಲ್ಲವೂ ಚಿನ್ನ. ಲೀಗ್‌ನ 7, ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಸೋಲಿಸಿ ಫೈನಲ್‌ಗೇರಿತು.

ಫೈನಲ್‌ನ ಪಂದ್ಯದಲ್ಲಿ ಆರಂಭದಲ್ಲಿ ಮೂರು ವಿಕೆಟ್‌ ಕಳೆದುಕೊಂಡರೂ, ಆಸ್ಟ್ರೇಲಿಯದ ಟ್ರಾವಿಸ್‌ ಹೆಡ್‌ ಮತ್ತು ಲುಬುಶೇನ್‌ ಉತ್ತಮವಾಗಿಯೇ ಆಡಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಫೈನಲ್‌ನಲ್ಲಿ ಸೆಂಚುರಿ ಬಾರಿಸಿದ ಹೆಡ್‌ ಆಸ್ಟ್ರೇಲಿಯ ಪಾಲಿಗೆ ಹೀರೋ ಆದರು. ಹೀಗಾಗಿ ಅವರಿಗೆ ಅಭಿನಂದನೆ ಹೇಳಲೇಬೇಕು.

ಇಡೀ ಕೂಟ ಕೆಲವು ವಿವಾದಗಳ ಹೊರತಾಗಿಯೂ ಉತ್ತಮವಾಗಿಯೇ ನಡೆದಿದೆ. ಭಾರೀ ಪ್ರದರ್ಶನ ನೀಡುತ್ತವೆ ಎಂಬ ನಿರೀಕ್ಷೆಯಲ್ಲಿದ್ದ ತಂಡಗಳು, ಲೀಗ್‌ ಹಂತದಲ್ಲೇ ಕೈಚೆಲ್ಲಿ ಹೋಗಿವೆ. ಹಿಂದಿನ ಚಾಂಪಿಯನ್‌ ಇಂಗ್ಲೆಂಡ್‌ ತೀರಾ

ಕಳಪೆ ಪ್ರದರ್ಶನ ನೀಡಿತು. ಪಾಕಿಸ್ಥಾನ ಕೂಡ ಸೆಮಿಫೈನಲ್‌ಗೆ ಬರಲಾಗಲಿಲ್ಲ. ಅಫ್ಘಾನಿಸ್ಥಾನ, ನೆದರ್ಲೆಂಡ್ಸ್‌ನಂಥ ತಂಡಗಳು ಉತ್ತಮ ಪ್ರದರ್ಶನ ನೀಡಿ, ನೆನಪಿನಲ್ಲಿ ಉಳಿಯುವಂಥ ಆಟ ಆಡಿದವು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.