ಚೇತೇಶ್ವರ್‌ ಪೂಜಾರ ಸೆಂಚುರಿ ಬಾರಿಸಲಿ: ಗಾವಸ್ಕರ್‌ ಹಾರೈಕೆ


Team Udayavani, Feb 18, 2023, 7:42 AM IST

ಚೇತೇಶ್ವರ್‌ ಪೂಜಾರ ಸೆಂಚುರಿ ಬಾರಿಸಲಿ: ಗಾವಸ್ಕರ್‌ ಹಾರೈಕೆ

ಚೇತೇಶ್ವರ್‌ ಪೂಜಾರ 100ನೇ ಟೆಸ್ಟ್‌ ಪಂದ್ಯದಲ್ಲಿ ಸೆಂಚುರಿ ಬಾರಿಸಿದ ಮೊದಲ ಭಾರತೀಯ ಆಟಗಾರನಾಗಿ ಮೂಡಿಬರಲಿ ಎಂಬುದಾಗಿ ಲೆಜೆಂಡ್ರಿ ಓಪನರ್‌ ಸುನೀಲ್‌ ಗಾವಸ್ಕರ್‌ ಹೇಳಿದರು. ಅವರು 100ನೇ ಟೆಸ್ಟ್‌ ಆಡಲಿಳಿದ ಪೂಜಾರ ಅವರಿಗೆ ಕ್ಯಾಪ್‌ ನೀಡಿ ಗೌರವಿಸುವ ಸಂದರ್ಭದಲ್ಲಿ ಹಾರೈಸಿದರು.

“ನೂರನೇ ಟೆಸ್ಟ್‌ ಕ್ಲಬ್‌ಗ ಸ್ವಾಗತ. ನೀವು ನೂರನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗನಾಗಬೇಕೆಂಬುದು ನನ್ನ ಹಾರೈಕೆ. ಇದರಿಂದ ಹೊಸದಿಲ್ಲಿ ಟೆಸ್ಟ್‌ನಲ್ಲಿ ಮತ್ತೂಂದು ಗೆಲುವಿಗೆ ನಿಮ್ಮಿಂದ ಬುನಾದಿ ನಿರ್ಮಾಣಗೊಳ್ಳಲಿ. ಕಠಿನ ದುಡಿಮೆ ಮತ್ತು ಅಪಾರ ಆತ್ಮವಿಶ್ವಾಸಕ್ಕೆ ನೀವೊಂದು ರೋಲ್‌ ಮಾಡೆಲ್‌…’ ಎಂದು ಗಾವಸ್ಕರ್‌ ಗುಣಗಾನಗೈದರು. ಕ್ಯಾಪ್‌ ಜತೆಗೆ “100 ಟೆಸ್ಟ್‌ ಮ್ಯಾಚಸ್‌’ ಎಂದು ಬಂಗಾರ ವರ್ಣದಲ್ಲಿ ಕೆತ್ತಿದ ಸ್ಮರಣಿಕೆಯೊಂದನ್ನು ಪೂಜಾರ ಅವರಿಗೆ ನೀಡಲಾಯಿತು.

“ನಿಮ್ಮಂಥ ಲೆಜೆಂಡ್ರಿ ಕ್ರಿಕೆಟಿಗರೇ ನನಗೆ ಸ್ಫೂರ್ತಿ. ಬಾಲ್ಯದಲ್ಲೇ ನಾನು ಭಾರತ ಪರ ಆಡುವ ಕನಸು ಕಾಣುತ್ತಿದ್ದೆ. ಆದರೆ 100 ಟೆಸ್ಟ್‌ ಪಂದ್ಯಗಳನ್ನು ಆಡುತ್ತೇನೆಂದು ಭಾವಿಸಿದವನೇ ಅಲ್ಲ. ಟೆಸ್ಟ್‌ ಕ್ರಿಕೆಟೇ ನಿಜವಾದ ಕ್ರಿಕೆಟ್‌ ಎಂದು ನಂಬಿದವನು ನಾನು. ಬದುಕು ಮತ್ತು ಟೆಸ್ಟ್‌ ಪಂದ್ಯಗಳ ನಡುವೆ ಬಹಳಷ್ಟು ಸಾಮ್ಯಗಳಿವೆ. ಕಠಿನ ಸಂದರ್ಭದಲ್ಲಿ ಹೋರಾಡಿದರೆ ಖಂಡಿತವಾಗಿಯೂ ಬಹಳ ಎತ್ತರಕ್ಕೇರಬಹುದು ಎಂಬುದು ಇಲ್ಲಿನ ಪಾಠ’ ಎಂದು ಪೂಜಾರ ಪ್ರತಿಕ್ರಿಯಿಸಿದರು.

ತನ್ನನ್ನು ಬೆಂಬಲಿಸಿದ ಕುಟುಂಬ, ಮಿತ್ರರು, ಬಿಸಿಸಿಐ, ಮಾಧ್ಯಮ, ಸಹ ಆಟಗಾರರು ಹಾಗೂ ಸಹಾಯಕ ಸಿಬಂದಿಗೆಲ್ಲ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪೂಜಾರ ಅವರ ಪತ್ನಿ, ಪುತ್ರಿ, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.