Asian Championship Trophy Hockey: ಪಾಕ್‌ ವಿರುದ್ಧ ಭಾರತಕ್ಕೆ ಗೆಲುವು

ಕೂಟದಿಂದಲೇ ಹೊರಬಿದ್ದ ಪಾಕಿಸ್ಥಾನ

Team Udayavani, Aug 10, 2023, 12:41 AM IST

hockey

ಚೆನ್ನೈ: ಏಷ್ಯನ್‌ ಚಾಂಪಿಯನ್‌ಶಿಪ್‌ ಟ್ರೋಫಿ ಹಾಕಿಯ ಲೀಗ್‌ ಹಂತದಲ್ಲಿ ಅಜೇಯವಾಗಿ ಉಳಿದ ಭಾರತವು ಬುಧವಾರ ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧ 4-0 ಗೋಲುಗಳ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಸೋತ ಪಾಕಿಸ್ಥಾನ ಕೂಟದಿಂದಲೇ ಹೊರಬಿದ್ದಿದೆ. ಟಾಪ್‌ 4 ತಂಡಗಳಾಗಿ ಭಾರತ, ಮಲೇಷ್ಯಾ, ಕೊರಿಯ ಮತ್ತು ಜಪಾನ್‌ ಸೆಮಿಫೈನಲ್‌ನಲ್ಲಿ ಸೆಣಸಲಿವೆ.

ಆರಂಭದಿಂದಲೇ ಭಾರತ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. 15ನೇ ನಿಮಿಷದಲ್ಲಿ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಪೆನಾಲ್ಟಿ ಕಾರ್ನರ್‌ ಮೂಲಕ ಭಾರತಕ್ಕೆ ಮೊದಲ ಗೋಲು ತಂದುಕೊಟ್ಟರು. ಈ ಮೂಲಕ ಮೊದಲ ಕ್ವಾರ್ಟರ್‌ನಲ್ಲಿ ಭಾರತ 1-0 ಗೋಲು ಅಂತರದಲ್ಲಿ ಮುನ್ನಡೆ ಸಾಧಿಸಿತು.

23ನೇ ನಿಮಿಷದಲ್ಲಿ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಪೆನಾಲ್ಟಿ ಮೂಲಕ ಮತ್ತೂಂದು ಗೋಲು ಬಾರಿಸಿ ಮುನ್ನಡೆಯನ್ನು ಹೆಚ್ಚಿಸಿ ದರು. ಹೀಗಾಗಿ ಎರಡನೇ ಕ್ವಾರ್ಟರ್‌ ಅಂತ್ಯಕ್ಕೆ ಭಾರತ 2-0 ಗೋಲುಗಳ ಮುನ್ನಡೆ ಸಾಧಿಸಿ, ಪಂದ್ಯದಲ್ಲಿ ಮೇಲುಗೈ ಪಡೆದಿತ್ತು.

ಮೂರನೇ ಕ್ವಾರ್ಟರ್‌ನಲ್ಲಿ ಜುಗ್ರಾಜ್‌ ಸಿಂಗ್‌ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಬಾರಿಸಿದರು. 36ನೇ ನಿಮಿಷದಲ್ಲಿ ಈ ಗೋಲು ದಾಖಲಾಯಿತು. ನಾಲ್ಕನೇ ಕ್ವಾರ್ಟರ್‌ನಲ್ಲಿ ಪಂದ್ಯದ 55ನೇ ನಿಮಿಷದಲ್ಲಿ ಆಕಾಶ್‌ದೀಪ್‌ ಸಿಂಗ್‌ ಫೀಲ್ಡ್‌ ಗೋಲು ಬಾರಿಸಿದರು.

ಸೋತರೂ ಸೆಮೀಸ್‌ಗೆ ಕೊರಿಯಾ

ಬುಧವಾರ ನಡೆದ ಮತ್ತೂಂದು ಪಂದ್ಯದಲ್ಲಿ ಮಲೇಷ್ಯಾವು ದಕ್ಷಿಣ ಕೊರಿಯಾವನ್ನು 1-0 ಗೋಲುಗಳಿಂದ ಸೋಲಿಸಿತು. ಎರಡು ತಂಡಗಳಿಗೆ ಇದು ಕಡೇ ಲೀಗ್‌ ಪಂದ್ಯವಾಗಿದ್ದು, ದಕ್ಷಿಣ ಕೊರಿಯಾ ಪಾಲಿಗೆ ಭಾರೀ ಪ್ರಾಮುಖ್ಯತೆ ಪಡೆದಿದ್ದ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಸೋತರೂ ದಕ್ಷಿಣ ಕೊರಿಯಾ ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ.

ಪಂದ್ಯದ ಮೊದಲ ಕ್ವಾರ್ಟರ್‌ನಲ್ಲಿ ಉಭಯ ತಂಡಗಳು ಯಾವುದೇ ಗೋಲು ದಾಖಲಿಸಲು ವಿಫ‌ಲವಾದವು. ಆದರೆ ದ್ವಿತೀಯ ಕ್ವಾರ್ಟರ್‌ನಲ್ಲಿ ಮಲೇಷ್ಯಾದ ಅಬು ಕಮಲ್‌ ಅಜೈì ಗೋಲು ಬಾರಿಸಿ ಮಲೇಷ್ಯಾಗೆ  ಮುನ್ನಡೆ ತಂದುಕೊಟ್ಟರು. ಸದ್ಯ ಕೊರಿಯಾ 5 ಅಂಕಗಳೊಂದಿಗೆ ನಾಲ್ಕನೇ ಸ್ಥಾನಿಯಾಗಿ ಸೆಮಿಫೈನಲ್‌ ಪ್ರವೇಶಿಸಿದೆ.

ಚೀನಾ ವಿರುದ್ಧ ಗೆದ್ದ ಜಪಾನ್‌

ಚೀನ ವಿರುದ್ಧ 2-1ರ ಅಂತರದಿಂದ ಜಪಾನ್‌ ಗೆಲುವು ಸಾಧಿಸಿತು. ಇನ್ನೊಂದೆಡೆ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಭಾರತ, ಪಾಕಿ ಸ್ಥಾನವನ್ನು 4-0 ಗೋಲುಗಳಿಂದ ಸೋಲಿಸಿದ ಕಾರಣದಿಂದ ಗೋಲುಗಳ ಲೆಕ್ಕಾಚಾರದಲ್ಲಿ ಜಪಾನ್‌ ಸೆಮಿಫೈನಲ್‌ಗೆ ಪ್ರವೇಶಿಸಿತು.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.