ದೇಶದ ಸಂಸ್ಕೃತಿ ಅರಿಯಲು ಪೌರಾಣಿಕ ನಾಟಕ ಸಹಕಾರಿ


Team Udayavani, Mar 24, 2022, 2:52 PM IST

ದೇಶದ ಸಂಸ್ಕೃತಿ ಅರಿಯಲು ಪೌರಾಣಿಕ ನಾಟಕ ಸಹಕಾರಿ

ನೆಲಮಂಗಲ: ಪೌರಾಣಿಕ ನಾಟಕಗಳ ಪ್ರದರ್ಶನಗಳಿಂದ ಯುವಕರಿಗೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ತಿಳಿಸಿಕೊಡಲು ಸಹಕಾರಿಯಾಗುತ್ತದೆ. ಆಧುನಿಕತೆಯಿಂದ ಯುವಪೀಳಿಗೆ ನಾಡಿನ ಶ್ರೀಮಂತ ಇತಿಹಾಸ ಅರಿತುಕೊಳ್ಳಲು ಮುಂದಾಗುತ್ತಿಲ್ಲ ಎಂದು ತಾಪಂ ಮಾಜಿ ಅಧ್ಯಕ್ಷ ಪುಟ್ಟಗಂಗಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ಅಗಲಕುಪ್ಪೆ ಗ್ರಾಪಂ ವ್ಯಾಪ್ತಿಯ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಆಯೋಜಿಸಿದ್ದ ಕುರುಕ್ಷೇತ್ರ, ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜಕ್ಕೆ ಕಲಾವಿದರು ಸಲ್ಲಿಸಿರುವ ಸೇವೆ ಯಾರೊಬ್ಬರು ಮರೆಯಲಾಗುವುದಿಲ್ಲ, ಗ್ರಾಮೀಣ ಪ್ರದೇಶದ ಜನರು ಜನಪದ ಕಲೆಗಳನ್ನು ಯಾವುದೇ ತರಬೇತಿಯಿಲ್ಲದೆ ಮೈಗೂಡಿಸಿ ಕೊಂಡಿರುತ್ತಾರೆ.

ಇತ್ತೀಚೆಗೆ ಜನಪದ ಕಲೆಗಳು ಹೆಚ್ಚು ಪ್ರಚಲಿತದಲ್ಲಿದ್ದು, ಸಾವಿರಾರು ಕಲಾವಿದರು ಜನಪದದ ಮೂಲಕ ಜನರನ್ನು ಮನರಂಜಿಸುತ್ತಿದ್ದಾರೆ ಎಂದರು.

ಶ್ಲಾಘನೀಯ: ಯುವಕರು ತಾಂತ್ರಿಕತೆಯನ್ನು ಮೈಗೂಢಿಸಿಕೊಂಡಂತೆಲ್ಲ ನಾಡಿನ ಸಂಸ್ಕೃತಿ ಮತ್ತು ನಡೆ-ನುಡಿಯನ್ನು ಮರೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಗ್ರಾಮದ ಯುವಕರು ಪೌರಾಣಿಕ ನಾಟಕ ಅಭಿನಯಿಸುತ್ತಿರುವುದು ಹೆಮ್ಮೆಯ ವಿಚಾರ. ಬೀರಗೊಂಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ತಡರಾತ್ರಿಯಲ್ಲಿಯೂ ಕುರುಕ್ಷೇತ್ರ ನಾಟಕ ವೀಕ್ಷಣೆಗೆ ಮುಂದಾಗುವ ಮೂಲಕ ತಮ್ಮ ಗ್ರಾಮದ ಕಲಾವಿದರಿಗೆ ಪ್ರೋತ್ಸಾಹ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕಲಾವಿದರಿಗೆ ಪ್ರೋತ್ಸಾಹ: ಗ್ರಾಪಂ ಸದಸ್ಯ ಲಕ್ಷ್ಮೀಶ್‌ ಪಟೇಲ್‌ ಮಾತನಾಡಿ, ಸಂಜೆ ಆದತಕ್ಷಣ ಕಿರುತೆರೆಯ ಧಾರಾವಾಹಿಗಳ ವೀಕ್ಷಣೆ ಮಾಡುವದನ್ನೇ ರೂಢಿಸಿಕೊಂಡಿರುವ ನಾಗರಿಕ ಸಮಾಜ ಕಲಾವಿದರಿಗೆ ಪ್ರೋತ್ಸಾಹ ನೀಡಲು ಮುಂದಾಗಿರುವುದು ಹೆಮ್ಮೆಯ ವಿಚಾರ. ಬೆಳ್ಳಿ ಮತ್ತು ಕಿರುತೆರೆಯಲ್ಲಿ ಪ್ರದರ್ಶನಗೊಳ್ಳುವ ಮನರಂಜನಾ ಕಾರ್ಯಕ್ರಮ ಹಲವು ದಿನಗಳು
ಮುಂಚಿ ತವಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತದೆ.

ಚಿತ್ರ ಕಲಾವಿದರಿಗೆ ಸಾಕಷ್ಟು ಬಾರಿ ಸರಿತಪ್ಪು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಗ್ರಾಮೀಣ ಭಾಗದ ಕಲಾವಿದರು ನೇರವಾಗಿ ವೇದಿಕೆಯ ಮೇಲೆ ತಮ್ಮಲ್ಲಿ ಅಡಕವಾಗಿರುವ ಕಲೆಯನ್ನು ಪ್ರದರ್ಶಿಸಲು ಮುಂದಾಗುತ್ತಾರೆ. ಇದು ಹೆಮ್ಮೆಯ ಸಂಗತಿ ಎಂದರು.

ಅಭಿನಂದನೆ: ಸೋಫ‌ುರ ಗ್ರಾಪಂ ಅಧ್ಯಕ್ಷ ಪಂಚಾಕ್ಷರಿ, ಎಪಿಎಂಸಿ ನಿರ್ದೇಶಕ ಗಂಗಣ್ಣ, ಬಿಜೆಪಿ ತಾಲೂಕು ಉಪಾಧ್ಯಕ್ಷ ಜಗದೀಶ್‌ಚೌದರಿ, ಮುಖಂಡ ಗಂಗರುದ್ರಯ್ಯ, ಚಿಲುಮೆ ಟ್ರಸ್ಟ್‌ ಮುಖ್ಯಸ್ಥ ಕೆ.ಕೆಂಪೇಗೌಡ ಮತ್ತಿತರರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಗ್ರಾಪಂ ಮಾಜಿ ಸದಸ್ಯ ಪಟೇಲ್‌ ಸಿದ್ದಪ್ಪ, ಮುಖಂಡ ಮಂಜುನಾಥ್‌, ಕಲ್ಲನಾಯಕನಹಳ್ಳಿ ಕೆಂಪರಾಜು, ಅಭಯ್‌ ಲಕ್ಷ್ಮೀಶ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.