ಉಕ್ರೇನ್ನಲ್ಲಿ ಭಾರತೀಯ ರಾಯಭಾರ ಕಚೇರಿ 17ರಂದು ಆರಂಭ
ಮಾ. 13ರಂದು ಪೋಲೆಂಡ್ಗೆ ಸ್ಥಳಾಂತರಗೊಂಡಿದ್ದ ಕಚೇರಿ
Team Udayavani, May 13, 2022, 10:45 PM IST
ಕೀವ್/ಮಾಸ್ಕೋ: ಯುದ್ಧ ಪೀಡಿತ ಉಕ್ರೇನ್ನಲ್ಲಿ ಬಾಗಿಲು ಮುಚ್ಚಿದ್ದ ಭಾರತೀಯ ರಾಯಭಾರ ಕಚೇರಿ ಇದೀಗ ಮತ್ತೆ ಬಾಗಿಲು ತೆರೆಯಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ ರಾಯಭಾರ ಕಚೇರಿಯನ್ನು ಮೇ 17ರಂದು ಪುನರಾರಂಭ ಮಾಡಲಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಉಕ್ರೇನ್ನಿಂದ ಬಹುತೇಕ ಭಾರತೀಯರು ಕಾಲ್ಕಿತ್ತ ನಂತರ ಮಾ.13ರಂದು ರಾಯಭಾರ ಕಚೇರಿಯನ್ನು ಪೋಲೆಂಡ್ನ ವಾರ್ಸಾಗೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿತ್ತು.
ಇನ್ನೊಂದತ್ತ ಉಕ್ರೇನ್ ಮೇಲೆ ರಷ್ಯಾದ ದಾಳಿ ಮುಂದುವರಿದಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ರೊಂದಿಗೆ ನೇರವಾಗಿ ಕುಳಿತು ಶಾಂತಿ ಮಾತುಕತೆ ನಡೆಸಲು ಸಿದ್ಧವೆಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಶುಕ್ರವಾರ ಹೇಳಿದ್ದಾರೆ.
ಆದರೆ ಮಾತುಕತೆಯ ಮೊದಲ ಕೆಲಸ ರಷ್ಯಾವು ಉಕ್ರೇನ್ನಿಂದ ಹಿಂದೆ ಸರಿಯುವುದಾಗಿರಬೇಕೆಂದು ಅವರು ಕೇಳಿದ್ದಾರೆ. ಹಾಗೆಯೇ ಉಕ್ರೇನ್ನಲ್ಲಿ ಯುದ್ಧಾಪರಾಧ ನಡೆಸಿರುವ ಆರೋಪದ ಮೇಲೆ ಮೊದಲ ರಷ್ಯಾ ಯೋಧನನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
21 ವರ್ಷದ ಯೋಧ 62 ವರ್ಷದ ವೃದ್ಧೆಯನ್ನು ಗುಂಡಿಕ್ಕಿ ಕೊಂದಿರುವ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ