IPC: ಭಾರತೀಯ ನ್ಯಾಯ ಸಂಹಿತೆ: ಕೇಂದ್ರದ ಕ್ರಾಂತಿಕಾರಿ ನಡೆ


Team Udayavani, Aug 12, 2023, 5:28 AM IST

lok adalat

ದೇಶದಲ್ಲಿ ಜಾರಿಯಲ್ಲಿರುವ ಅಪರಾಧ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಮೂರು ಮಹತ್ವದ ಮಸೂದೆಗಳನ್ನು ಕೇಂದ್ರ ಸರಕಾರ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದೆ. ಹಾಲಿ ಇರುವ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಾಗಿ ಹೊಸದಾಗಿ ರೂಪಿಸಲಾಗಿರುವ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷ ಸಂಹಿತೆ(ಬಿಎಸ್‌ಎಸ್‌ಎಸ್‌) ಮಸೂದೆ-2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ-2023 ಅನ್ನು ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿದೆ.

ಈ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ ಅವರು, ವಸಾಹತು ಕಾಲದ ಹಳೆಯ ಅಪರಾಧ ಕಾನೂನುಗಳು ಗುಲಾಮಗಿರಿಯ ಸಂಕೇತವಾಗಿದ್ದವು. ಇವು ನ್ಯಾಯದಾನಕ್ಕಿಂತ ಶಿಕ್ಷೆಗೇ ಹೆಚ್ಚಿನ ಒತ್ತು ನೀಡಿದ್ದವು ಮಾತ್ರವಲ್ಲದೆ ಬ್ರಿಟಿಷ್‌ ಆಡಳಿತದ ರಕ್ಷಣೆ ಹಾಗೂ ಬಲವರ್ಧನೆಯತ್ತ ಗಮನಹರಿಸಿದ್ದವು.

ಈ ಹಿನ್ನೆಲೆಯಲ್ಲಿ ಸರಕಾರ ಈ ಮೂರು ಅಪರಾಧ ಕಾನೂನುಗಳ ಬದಲಾಗಿ ತ್ವರಿತ ನ್ಯಾಯದಾನ ಹಾಗೂ ಸಮಕಾಲೀನ ಆವಶ್ಯಕತೆಗಳು ಮತ್ತು ಜನರ ಆಕಾಂಕ್ಷೆಗಳಿಗೆ ತಕ್ಕುದಾದ ಕಾನೂನು ವ್ಯವಸ್ಥೆಯನ್ನು ಜಾರಿಗೆ ತರುವ ಉದ್ದೇಶದಿಂದ ಈ ಹೊಸ ಕಾನೂನುಗಳನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದಿದ್ದಾರೆ.

ಕೇಂದ್ರ ಜಾರಿಗೆ ತರಲುದ್ದೇಶಿಸಿರುವ ಈ ಮೂರು ಮಸೂದೆಗಳಲ್ಲಿ ಹಲವಾರು ಮಹತ್ವದ ಅಂಶಗಳಿದ್ದು ದೇಶದ್ರೋಹ ಕಾನೂನಿನ ಬದಲಿಗೆ ಸೆಕ್ಷನ್‌ 150 ಅನ್ನು ಪರಿಚಯಿಸಲಾಗಿದೆ. ಇನ್ನು ಗುಂಪು ಹತ್ಯೆಯಂಥ ಗಂಭೀರ ಪ್ರಕರಣದಲ್ಲಿ ಪ್ರತಿಯೋರ್ವ ಅಪರಾಧಿಗೆ ಮರಣದಂಡನೆ, ಅಪ್ರಾಪ್ತ ವಯಸ್ಕರ ಅತ್ಯಾಚಾರ ಪ್ರಕರಣಗಳ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಪ್ರಸ್ತಾವಗಳನ್ನು ಹೊಸ ಕಾನೂನು ಹೊಂದಿದೆ. ಇನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಧಾರಣ ಕ್ರಮವಾಗಿ ಪ್ರಕರಣದ ದಾಖಲಿನಿಂದ ಹಿಡಿದು ನ್ಯಾಯಾಲಯದ ತೀರ್ಪಿನವರೆಗೆ ಇಡೀ ಪ್ರಕ್ರಿಯೆಯ ಡಿಜಟಲೀಕರಣ, ಅಪರಾಧ ಸಾಬೀತು ಪ್ರಮಾಣವನ್ನು ಶೇ.90ಕ್ಕೆ ಹೆಚ್ಚಿಸುವ ಗುರಿ, ಮುಂದಿನ 4 ವರ್ಷಗಳೊಳಗಾಗಿ ದೇಶದ ಎಲ್ಲ ನ್ಯಾಯಾಲಯಗಳ ಕಂಪ್ಯೂಟರೀಕರಣ, ಇ-ಎಫ್ಐಆರ್‌ಗಳ ದಾಖಲು, ಆರೋಪಿಗಳ ಗೈರಿನಲ್ಲಿಯೇ ವಿಚಾರಣೆ ಸಹಿತ ಹಲವಾರು ಪ್ರಮುಖ ಅಂಶಗಳನ್ನು ಹೊಸ ಮಸೂದೆಗಳು ಒಳಗೊಂಡಿವೆ.

ಕೇಂದ್ರ ಸರಕಾರ ಅಪರಾಧ ಕಾನೂನುಗಳ ಪರಿಷ್ಕರಣೆಗಾಗಿ 2020ರಲ್ಲಿ ರಚಿಸಿದ್ದ ತಜ್ಞರ ಸಮಿತಿ ಕಳೆದ ವರ್ಷದ ಫೆಬ್ರವರಿಯಲ್ಲಿ ಸಾರ್ವಜನಿಕರಿಂದ ಸಲಹೆಗಳನ್ನು ಪಡೆದು ಸರಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಸಮಗ್ರ ಪರಿಶೀಲನೆಯ ಬಳಿಕ ಇದೀಗ ಕೇಂದ್ರ ಸರಕಾರ ಈ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದೆ.
ಇದರೊಂದಿಗೆ ದೇಶದ ಜನರ ಬಹುದಶಕಗಳ ಬೇಡಿಕೆಗೆ ಕೇಂದ್ರ ಸರಕಾರ ಕೊನೆಗೂ ಓಗೊಟ್ಟಿದ್ದು ಅಪರಾಧ ಕಾನೂನುಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಸಜ್ಜಾಗಿದೆ. ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರಲ್ಲಿ ಕಾನೂನಿನ ಭಯ ಮೂಡಿಸುವ ಜತೆಯಲ್ಲಿ ಜನರ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲೂ ಈ ಹೊಸ ಮಸೂದೆಗಳಲ್ಲಿ ಹಲವಾರು ಮಹತ್ತರ ಮಾರ್ಪಾಡುಗಳನ್ನು ಮಾಡಲಾಗಿದೆ.

ಈ ಕಾನೂನುಗಳ ಜಾರಿಗೂ ಮುನ್ನ ಈ ಬಗ್ಗೆ ಇನ್ನಷ್ಟು ವಿಸ್ತೃತ ಚರ್ಚೆ, ವಿಚಾರವಿಮರ್ಶೆ ಅತ್ಯಗತ್ಯ. ಈ ಮೂರೂ ಮಸೂದೆಗಳನ್ನು ಪರಾಮರ್ಶೆಗಾಗಿ ಸಂಸದೀಯ ಸಮಿತಿಗೆ ಒಪ್ಪಿಸಲು ಸರಕಾರ ನಿರ್ಧರಿಸಿರುವುದು ಈ ದಿಸೆಯಲ್ಲಿ ಉತ್ತಮ ಬೆಳವಣಿಗೆ. ಈ ಹೊಸ ಕಾನೂನುಗಳು ಸರಕಾರದ ನೈಜ ಆಶಯ ಮತ್ತು ಉದ್ದೇಶಗಳನ್ನು ಸಾಕಾರಗೊಳಿಸಲಿ. ಈ ಮೂಲಕ ನ್ಯಾಯದಾನದ ಮೇಲೆ ರಾಜಕೀಯ, ಆರ್ಥಿಕ ಪ್ರಭಾವ ಬೀರುವುದು ಕೊನೆಗೊಳ್ಳಲಿ ಎಂಬುದೇ ದೇಶವಾಸಿಗಳೆಲ್ಲರ ಮಹದಾಸೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.