ಹುಬ್ಬಳ್ಳಿ: ವಿಭವ ಇಂಡಸ್ಟ್ರೀಸ್ನಲ್ಲಿ ಅಗ್ನಿಅನಾಹುತ; ಕೋಟ್ಯಂತರ ರೂ. ಮೌಲ್ಯದ ವಸ್ತು ಹಾನಿ
Team Udayavani, Oct 27, 2020, 11:33 AM IST
ಹುಬ್ಬಳ್ಳಿ: ತಾಲೂಕಿನ ಶೆರೇವಾಡ ಕ್ರಾಸ್ ಬಳಿಯ ವಿಭವ ಇಂಡಸ್ಟ್ರೀಸ್ನಲ್ಲಿ ಸೋಮವಾರ ಸಂಜೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ರೂ. ಮೌಲ್ಯದ ಪಿನಾಯಿಲ್ ತಯಾರಿಕೆ ರಾಸಾಯನಿಕ ಹಾಗೂ ಕಸಬರಿಗೆ ತಯಾರಿಸುವ ಕಚ್ಚಾ ಸಾಮಗ್ರಿ ಸುಟ್ಟು ಕರಕಲಾಗಿದೆ.
ಹಳೆಯ ಫ್ಯಾಕ್ಟರಿ ಕಟ್ಟಡದ ಗೋದಾಮಿನಲ್ಲಿ ಅಕಸ್ಮಾತ್ ಕಾಣಿಸಿಕೊಂಡ ಬೆಂಕಿಯು ನಂತರ ಸಂಪೂರ್ಣ ಗೋದಾಮಿಗೆ ವ್ಯಾಪಿಸಿಕೊಂಡಿದೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಹತೋಟಿಗೆ ತರಲು ಪ್ರಯತ್ನಿಸಿದರು. ಒಟ್ಟು ಮೂರು ಜಲ ಫಿರಂಗಿ ವಾಹನಗಳ ಮೂಲಕ ಸುಮಾರು ಎರಡು ತಾಸು ಹರಸಾಹಸಪಟ್ಟು ಬೆಂಕಿ ನಿಯಂತ್ರಿಸಿ ಹತೋಟಿಗೆ ತಂದರು. ಗೋದಾಮು ಪಕ್ಕದಲ್ಲಿಯೇ ಪಿನಾಯಿಲ್ ತಯಾರಿಸಲು ಬೇಕಾದ ಕಚ್ಚಾ ರಾಸಾಯನಿಕದ ಬ್ಯಾರೇಲ್ಗಳನ್ನು ಇಡಲಾಗಿತ್ತು. ಅದೃಷ್ಟವಶಾತ್ ಬೆಂಕಿ ಅವುಗಳತ್ತ ವ್ಯಾಪಿಸಿರಲಿಲ್ಲ.
ಇದನ್ನೂ ಓದಿ;“ಯಾರೂ ಅಲ್ಲಾ, ಯಡಿಯೂರಪ್ಪಾನೇ ವಿಲನ್”: ಸಚಿವ ಸೋಮಶೇಖರ್ ಹೇಳಿಕೆ
ಆಕಾಶದ ತುಂಬೆಲ್ಲ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿತ್ತು. ಅವಘಡದಿಂದ ಸುತ್ತಮುತ್ತಲಿನ ಗ್ರಾಮದ ಜನರು ಆತಂಕಗೊಂಡಿದ್ದರು.
ಇಂಡಸ್ಟ್ರೀಸ್ನಲ್ಲಿ ಶೌಚಾಲಯ ಮತ್ತು ನೆಲ ಸ್ವತ್ಛಗೊಳಿಸುವ ಪಿನಾಯಿಲ್ ರಾಸಾಯನಿಕ ಹಾಗೂ ಹೆಸರಾಂತ ಮಂಕಿ 555 ಬ್ರ್ಯಾಂಡ್ ಕಸಬರಿಗೆ ತಯಾರಿಸಲಾಗುತ್ತಿತ್ತು. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ನೂಟ್ದಿಂದ ಅವಘಡ
ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ