ಕೈಗಾರಿಕೆ ಕೈ ಹಿಡಿದ ನಾನಾ ಯೋಜನೆ


Team Udayavani, Mar 6, 2020, 3:08 AM IST

kaigarike

ರಾಜಧಾನಿ ಬೆಂಗಳೂರಿನಲ್ಲಿ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸೆಂಟರ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ “ರಕ್ಷಣೆ ಮತ್ತು ಬಾಹ್ಯಾಕಾಶ ಸಲಕರಣೆ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆ. ಶಿವಮೊಗ್ಗ ಜಿಲ್ಲೆಯನ್ನು “ಹೆಲ್ತ್‌ ಆ್ಯಂಡ್‌ ವೆಲ್‌ನೆಸ್‌ ಕ್ಲಸ್ಟರ್‌’, ಧಾರವಾಡ ಜಿಲ್ಲೆಯನ್ನು “ಹೋಮ್‌ ಆ್ಯಂಡ್‌ ಪರ್ಸನಲ್‌ ಕೇರ್‌ ಕನ್ಸೂಮರ್‌ ಗೂಡ್ಸ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌; ಆಗಿ ಅಭಿವೃದ್ಧಿ…

ಇದು, 2020-21ನೇ ಸಾಲಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‌ನ ಹೈಲೈಟ್ಸ್‌!. ಹೂಡಿಕೆ ಆಕರ್ಷಣೆಗೆ ಹೊಸ ಕೈಗಾರಿಕಾ ನೀತಿ ಜಾರಿ, ಹೂಡಿಕೆದಾರರ ಸಮಾವೇಶ ಆಯೋಜನೆ. “ಕಾಯರ್‌ ಎಕ್ಸ್‌ ಪೀರಿಯನ್ಸ್‌ ಸೆಂಟರ್‌’ ಸ್ಥಾಪನೆ, ತಿಪಟೂರನ್ನು “ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌’ ಆಗಿ ಅಭಿವೃದ್ಧಿ ಜತೆಗೆ ಹೂಡಿಕೆಗೆ ಆಕರ್ಷಿಸಲು ಕಾನೂನಿಗೆ ಅಗತ್ಯ ತಿದ್ದುಪಡಿ ತರುವ ಭರವಸೆಯನ್ನೂ ನೀಡಿದ್ದಾರೆ.

ರಾಜ್ಯದಲ್ಲಿ ಬಾಹ್ಯಾಕಾಶ-ರಕ್ಷಣಾ ಸಲಕರಣೆಗಳ ಉತ್ಪಾದನೆಗೆ ಪೂರಕ ವಾತಾವರಣ ಕಲ್ಪಿಸಲು ಒತ್ತು ನೀಡಿದೆ. ಬೆಂ. ಗ್ರಾಮಾಂತರ ಜಿಲ್ಲೆಯ ಹರಳೂರು-ಮುದ್ದೇನಹಳ್ಳಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೈಗಾರಿಕಾ ಪ್ರದೇಶದಲ್ಲಿ “ರಕ್ಷಣಾ ಮತ್ತು ಬಾಹ್ಯಾಕಾಶ ಸಲಕರಣೆ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆ ಘೋಷಣೆಯಾಗಿದೆ. “ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್‌ ಅಭಿವೃದ್ಧಿ’ ಯೋಜನೆಯಡಿ ಈಗಾ ಗಲೇ 9 ಜಿಲ್ಲೆಗಳಲ್ಲಿ ವಿವಿಧ ಕ್ಲಸ್ಟರ್‌ಗಳು ಸ್ಥಾಪನೆಯಾಗುತ್ತಿವೆ.

ಶಿವಮೊಗ್ಗ ಜಿಲ್ಲೆಯನ್ನು “ಹೆಲ್ತ್‌ ಆ್ಯಂಡ್‌ ವೆಲ್‌ನೆಸ್‌ ಕ್ಲಸ್ಟರ್‌’, ಧಾರವಾಡ ಜಿಲ್ಲೆಯನ್ನು “ಹೋಮ್‌ ಆ್ಯಂಡ್‌ ಪರ್ಸನಲ್‌ ಕೇರ್‌ ಕನ್ಸೂಮರ್‌ ಗೂಡ್ಸ್‌ ಮ್ಯಾನು ಫ್ಯಾಕ್ಚರಿಂಗ್‌ ಕ್ಲಸ್ಟರ್‌’ ಆಗಿ ಅಭಿವೃದ್ಧಿಪಡಿಸು ವುದಾಗಿ ಪ್ರಕಟಿಸಲಾಗಿದೆ. ಎಲೆಕ್ಟ್ರಿಕಲ್‌ ವಾಹನ-ಇಂಧನ ಶೇಖರಣಾ ನೀತಿ ಘೋಷಿಸಿದ ದೇಶದ ಪ್ರಥಮ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ಪಾತ್ರವಾ ಗಿದೆ. ಇದೀಗ ರಾಮನಗರ ಜಿಲ್ಲೆ ಹಾರೋಹಳ್ಳಿಯಲ್ಲಿ “ಎಲೆಕ್ಟ್ರಿಕ್‌ ವಾಹನ ಹಾಗೂ ಇಂಧನ ಶೇಖರಣಾ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆಯ ಘೋಷಣೆಯಾ ಗಿದ್ದು, ಆಯವ್ಯಯದಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ತೆಂಗು ಆಧಾರಿತ ಕೈಗಾರಿಕೆಗೆ ಉತ್ತೇಜನ: ತೆಂಗಿನ ನಾರಿನ ಉತ್ಪಾದನೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಹೀಗಾಗಿ ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ವ್ಯಾಪಕ ಮಾರುಕಟ್ಟೆ ಒದಗಿಸಲು “ಕಾಯರ್‌ ಎಕ್ಸ್‌ಪೀರಿಯನ್ಸ್‌ ಸೆಂಟರ್‌’ ಸ್ಥಾಪನೆಗೆ 5 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೇ, ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಅನುಕೂಲ ಕ್ಕಾಗಿ ಸಹಾಯವಾಗಲು “ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌’ ಆಗಿ ಅಭಿವೃದ್ಧಿಪಡಿಸುವ ಭರವಸೆ ನೀಡಲಾಗಿದೆ.

“ಪವರ್‌ಟೆಕ್ಸ್‌ ಇಂಡಿಯಾದ ನೂಲು ನಿಧಿ ಯೋಜನೆ’ಯಡಿ ಕೇಂದ್ರ ಸರ್ಕಾರದ ವಂತಿಗೆಯೊಂದಿಗೆ ರಾಜ್ಯ ಸರ್ಕಾರ ಗರಿಷ್ಠ 50 ಲಕ್ಷ ರೂ. ಸಹಾಯಧನದೊಂದಿಗೆ ವಿದ್ಯುತ್‌ ಮಗ್ಗ ಸಾಂದ್ರತೆ ಇರುವ 2 ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪಿಸುವು ದಾಗಿ ಪ್ರಕಟಿಸಲಾಗಿದೆ. ಕೈಮಗ್ಗ ನೇಕಾರಿಕೆ ಕರಕುಶಲತೆ ಇನ್ನಷ್ಟು ಅಭಿವೃದ್ಧಿಪಡಿಸಲು ರಾಜ್ಯಕ್ಕೆ ಸೀಮಿತವಾದ ಜಿ.ಐ.ಟ್ಯಾಗ್‌ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ “ಪ್ರಿಯದರ್ಶಿನಿ’ ಬ್ರಾಂಡ್‌ ಮೂಲಕ ಸೂಕ್ತ ಮಾರುಕಟ್ಟೆ ಒದಗಿಸುವ ವಾಗ್ಧಾನ ನೀಡಲಾಗಿದೆ.

ಸಕಾಲ ವ್ಯಾಪ್ತಿಗೆ ಸೇವೆ: ಉದ್ದಿಮೆದಾರರು, ಹೂಡಿಕೆದಾರರು ಕೈಗಾರಿಕೆಗಳನ್ನು ಸುಲಭವಾಗಿ ಸ್ಥಾಪಿಸಲು ಅನುಕೂಲವಾಗುವಂತೆ ಕೆಲ ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ ತರಲು ಸರ್ಕಾರ ನಿರ್ಧರಿಸಿದೆ. ಮುಖ್ಯವಾಗಿ ಭೂಮಿ ಹಂಚಿಕೆ, ನಕ್ಷೆ ಅನುಮೋದನೆ, ಲೀಸ್‌ ಕಂ ಸೇಲ್‌ ಡೀಡ್‌, ಕ್ರಯಪತ್ರ ಇತರೆ ಸೇವೆಗಳನ್ನು ಕ್ಷಿಪ್ರಗತಿಯಲ್ಲಿ ಪೂರೈಸಲು ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿಯ ಪ್ರಮುಖ ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ ತರುವ ಭರವಸೆ ನೀಡಲಾಗಿದೆ.

ಹೂಡಿಕೆಗೆ ಕಾನೂನು ತಿದ್ದುಪಡಿ: ಸ್ವಿಡ್ಜರ್ಲೆಂಡ್‌ನ‌ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಸಮ್ಮೇಳನದಲ್ಲಿ 40ಕ್ಕೂ ಹೆಚ್ಚು ಜಾಗತಿಕ ಮಟ್ಟದ ಕಂಪನಿಗಳು, ಹೂಡಿಕೆದಾರರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಿತ್ತು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣವಿದ್ದರೂ ಭೂ ಖರೀದಿ ಮತ್ತು ವಿವಿಧ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆಯುವುದು ಕ್ಲಿಷ್ಟಕರ ಎಂದು ಹೂಡಿಕೆದಾರರು ಅಳಲು ತೋಡಿಕೊಂಡಿದ್ದರು. ಅದರಂತೆ ರಾಜ್ಯದಲ್ಲಿ ಹೂಡಿಕೆ ದಾರರಿಗೆ ಉತ್ತೇಜನ ನೀಡಲು, ಕೈಗಾರಿಕಾ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತಂದು ನಿಯಮ ರೂಪಿಸುವ ವಾಗ್ಧಾನವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಜೆಟ್‌ನಲ್ಲಿ ನೀಡಿದ್ದಾರೆ.

ಕೈಗಾರಿಕಾ ನೀತಿ: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಅಭಿವೃದ್ಧಿಗಾಗಿ ನೂತನ ಕೈಗಾರಿಕಾ ನೀತಿ ಜಾರಿಗೊಳಿಸುವುದಾಗಿ ಆಯವ್ಯಯದಲ್ಲಿ ಘೋಷಿಸಲಾಗಿದೆ. ಮುಖ್ಯವಾಗಿ ದ್ವಿತೀಯ ಹಾಗೂ ತೃತೀಯ ಹಂತದ ನಗರಗಳಿಗೂ ಹೂಡಿಕೆ ಆಕರ್ಷಿಸುವುದಕ್ಕೆ ಕೈಗಾರಿಕಾ ನೀತಿಯಲ್ಲಿ ಆದ್ಯತೆ ಸಿಗಲಿದೆ. ವಿನೂತನ ತಂತ್ರ ಜ್ಞಾನಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶವಿರುವ ವಲಯಗಳಿಗೆ ಆದ್ಯತೆ ನೀಡಲು ಚಿಂತಿಸಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.