ವಿಷ ತ್ಯಾಜ್ಯ ಹರಿಸುವ ಕಾರ್ಖಾನೆಗಳಿಗೆ ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ
Team Udayavani, Feb 21, 2022, 4:09 PM IST
ಹುಮನಾಬಾದ್ : ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳ ಮಾಲೀಕರು ಕೂಡಲೇ ಸ್ಥಳೀಯರ ಸಮಸ್ಯೆ ಅರೆತುಕೊಳ್ಳಬೇಕು. ವಿಷಯುಕ್ತ ತ್ಯಾಜ್ಯ ಹೊರ ಬಿಡದಂತೆ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮುಂದಿನ 15 ದಿನಗಳಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವ ಮೂಲಕ ಇಡೀ ಕೈಗಾರಿಕಾ ಪ್ರದೇಶದಲ್ಲಿನ ಎಲ್ಲ ಕಾರ್ಖಾನೆಗಳು ಬಂದ್ ಮಾಡುವಂತೆ ಸರ್ಕಾರವನ್ನು
ಒತ್ತಾಯಿಸಬೇಕಾಗುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಕಾರ್ಖಾನೆಗಳ ಮಾಲೀಕರಿಗೆ ಎಚ್ಚರಿಸಿದರು.
ರವಿವಾರ ಪಟ್ಟಣದ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕಾರ್ಖಾನೆಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಅನೇಕ ಕಾರ್ಖಾನೆಗಳು ಪರಿಸರ ಮಾಲಿನ್ಯ ಉಂಟು ಮಾಡುತ್ತಿವೆ.
ಸುತ್ತಲಿನ ಗಡವಂತಿ, ಮಾಣಿಕನಗರ, ಮೋಳಕೇರಾ, ಬಸವಂತಪುರ ಹಾಗೂ ಹುಮನಾಬಾದ ಪಟ್ಟಣಕ್ಕೂ ಅಧಿಕ ಸಮಸ್ಯೆ ಉಂಟಾಗುತ್ತಿದೆ. ಕಾರ್ಖಾನೆಗಳು ಕೂಡಲೇ ಎಚ್ಚೆತ್ತುಕೊಂಡು ಪರಿಸರ ಮಾಲಿನ್ಯ ಹಾಗೂ ಸರ್ಕಾರದ ಮಾರ್ಗಸೂಚಿ ಅನುಸಾರ ಕಾರ್ಖಾನೆಗಳು ನಡೆಸಬೇಕು ಎಂದು ಈ ಹಿಂದೆ ಸಭೆ ನಡೆಸಿ ಸೂಚನೆ ನೀಡಲಾಗಿತ್ತು. ಇದೀಗ ಮತ್ತೆ ಎಲ್ಲ ಕಾರ್ಖಾನೆಗಳಿಗೆ
ಎಚ್ಚರಿಕೆ ನೀಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಇದೇ ರೀತಿ ಮುಂದುವರಿದರೆ ಗ್ರಾಮಸ್ಥರೊಂದಿಗೆ ಸೇರಿ ರಸ್ತೆಗೆ ಇಳಿದು ಪ್ರತಿಭಟನೆ, ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಈ ಕುರಿತು ಕೈಗಾರಿಕಾ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಸಂಬಂಧಿ ಸಿದ ಅ ಧಿಕಾರಿಗಳ ತಂಡ ಕಳುಹಿಸುವಂತೆ ಮನವರಿಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ : ಎಲ್ಲಾ ಧರ್ಮದ ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು: ಅಮಿತ್ ಶಾ
ಈ ಸಂದರ್ಭದಲ್ಲಿ ಆನಂದರಾಜ ಪ್ರಭು, ಚೇತನರಾಜ ಪ್ರಭು, ತಾಪಂ ಇಒ ಮುರಗೆಪ್ಪಾ, ಡಾ| ಗೋವಿಂದ್, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ರವಿಕುಮಾರ ನಾಯ್ಕೋಡಿ ಸೇರಿದಂತೆ ಅನೇಕ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ