ರಾಜಧಾನಿಯಲ್ಲಿ ಸೋಂಕಿತ ಪ್ರಕರಣ ಇಳಿಕೆ


Team Udayavani, Jun 10, 2020, 6:07 AM IST

capital ilike

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಎರಡು, ಮೂರು ಹಾಗೂ ಐದನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದೆ. ಅನ್‌ಲಾಕ್‌ ಪ್ರಾರಂಭವಾದ ಮೇಲೆ ಉಳಿದ  ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲೇ ಸೋಂಕು ಪ್ರಕರಣಗಳು ಹೆಚ್ಚಾಗಲಿವೆ ಎಂದು ಅಂದಾಜಿಸಲಾಗಿತ್ತು. ಆದರೆ, ಈ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ನಗರದಲ್ಲಿ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕುಸಿದಿವೆ.

ನಗರದಲ್ಲಿ  ಕೋವಿಡ್‌ 19 ಪ್ರಕರಣಗಳು ಕಡಿಮೆ ವರದಿಯಾಗುತ್ತಿರುವ ಹಿಂದೆ ನಗರದ ಕ್ವಾರಂಟೈನ್‌ ವ್ಯವಸ್ಥೆಯೂ ಕಾರಣವಾಗಿದೆ. ಉಳಿದ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಗರದಲ್ಲಿ ಹೋಟೆಲ್‌ ಹಾಗೂ ಸಾಮುದಾಯಿಕ ಭವನ, ಹಾಸ್ಟೆಲ್‌  ಕ್ವಾರಂಟೈನ್‌ ವ್ಯವಸ್ಥೆ ತಕ್ಕಮಟ್ಟಿಗೆ ಉತ್ತಮವಾಗಿದ್ದು, ಒಬ್ಬರಿಂದ ಮತ್ತೂ ಬ್ಬರಿಗೆ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.

ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ  ಕ್ವಾರಂಟೈನ್‌ ಪ್ರಕ್ರಿಯೆಪೂರ್ಣಗೊಳಿಸುತ್ತಿರುವುದು, ಜನರಲ್ಲಿ ಜಾಗೃತಿ ಮೂಡಿರುವುದು ಸೋಂಕಿನ ಪಟ್ಟಿಯಲ್ಲಿನ ಮೊದಲನೇ ಸ್ಥಾನದಿಂದ ಕುಸಿಯಲು ಕಾರಣವಾಗುತ್ತಿದೆ. ಇನ್ನು ಸರ್ಕಾರ ಕ್ವಾರಂಟೈನ್‌ ನಿಯಮ ಸಡಿಲಿಕೆ  ಮಾಡಿರುವುದರಿಂದ ನಗರದಲ್ಲಿ ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆ ಹೆಚ್ಚಳವಾಗುವುದಕ್ಕೂ ಕಾರಣವಾಗಿದೆ.

ಕೆಲವೇ ದಿನಗಳ ಹಿಂದೆ 20- 30ರ ಅಸುಪಾಸಿನಲ್ಲಿದ್ದ ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆ ಸದ್ಯ 54ಕ್ಕೆ ಏರಿಕೆ  ಯಾಗಿದೆ.  ಕ್ವಾರಂಟೈನ್‌ ನಿಯಮ ಸಡಿಲಿಕೆ ಮಾಡಿರುವ ಮಧ್ಯೆ ಹೋಂ ಕ್ವಾರಂಟೈನ್‌ ನಿಯಮ ಮತ್ತಷ್ಟು ಕಠಿಣಗೊಳಿಸಲಾಗಿದೆ. ಇದಕ್ಕೆಂದೇ ಬಿಬಿಎಂಪಿ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಒಳಗೊಂಡ 460 ತಂಡಗಳನ್ನು ರಚನೆ  ಮಾಡಿಕೊಳ್ಳಲಾಗಿದೆ. ಅಕ್ಕಪಕ್ಕದ ಮನೆಯವರಿಗೂ ಕ್ವಾರಂಟೈನ್‌ನಲ್ಲಿರು ವವರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೆ, ಕ್ವಾರಂಟೈನ್‌ ನಲ್ಲಿರುವವರು ಹೊರಗೆ ಓಡಾಡಿದರೆ ದೂರು ನೀಡಲು ಸೂಚನೆ ನೀಡಲಾಗಿದೆ. ಈ ಕಾರಣದಿಂದ  ಸೋಂಕು ಪ್ರಮಾಣ ಕಡಿಮೆಯಾಗಿರುವ ಸಾಧ್ಯತೆ ಇದೆ.

ವರದಿ ತಡವೂ ಕಾರಣ?: ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿನ ಕೋವಿಡ್‌ 19 ಶಂಕಿತರ ಗಂಟಲು ದ್ರವ ವರದಿಯನ್ನೂ ನಗರದಲ್ಲೇ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ, ಮೊದಲು ಒಂದು ಅಥವಾ ಎರಡು ದಿನಗಳಲ್ಲಿ  ಬರುತ್ತಿದ್ದ ವರದಿ ಈಗ ಮೂರರಿಂದ ನಾಲ್ಕುದಿನಗಳಿಗೆ ಒಮ್ಮೆ ಬರುತ್ತಿದೆ. ಇದು ಹೆಚ್ಚು ಸೋಂಕು ಪ್ರಕರಣಗಳು ದೃಢಪಡದೆ ಇರುವುದಕ್ಕೆ ಕಾರಣ ಎನ್ನಲಾಗಿದೆ.

ಹಾಸ್ಟೆಲ್‌ ವ್ಯವಸ್ಥೆ ಉತ್ತಮವಾಗಿಲ್ಲ: ನಗರದಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಉಳಿದ ಜಿಲ್ಲೆಗಳಿಗಿಂತ ಉತ್ತಮವಾಗಿ ದೆ. ಆದರೆ, ಅತ್ಯುತ್ತಮವಾಗಿಲ್ಲ. ನಗರದಕ್ಕೆ ಹೊರ ರಾಜ್ಯಗಳಿಂದ ಬಂದು (ಮಹಾರಾಷ್ಟ್ರದಿಂದ) ಹೋಟೆಲ್‌ ಕ್ವಾರಂಟೈನ್‌  ಆಗಲು ಆರ್ಥಿಕವಾಗಿ ಸದೃಢರಲ್ಲ ದವರನ್ನು ಹಾಸ್ಟೆಲ್‌ ಅಥವಾ ಸಮುದಾಯ ಭವನ  ದಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಆದರೆ, ಇಲ್ಲಿ ವ್ಯವಸ್ಥೆ ಉತ್ತಮವಾಗಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕ್ವಾರಂಟೈನ್‌ ವ್ಯವಸ್ಥೆಯಿದ್ದು ಸೋಂಕು ದೃಢಪಡುತ್ತಿರುವವರಲ್ಲಿ ಹೋಟೆಲ್‌ಗ‌ಳಿ  ಗಿಂತ ಈ ರೀತಿ ಸರ್ಕಾರಿ ವ್ಯವಸ್ಥೆಯಲ್ಲಿ ಇರುವವರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ರೀತಿ ಕ್ವಾರಂಟೈನ್‌ಗೆ ಒಳಗಾಗುವವರು ಒಂದೇ ಶೌಚಾಲಯ ಹಾಗೂ ಊಟದ ಸ್ಥಳಗಳನ್ನು ಬಳಸುವುದರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದರು.

ಬೆಂಗಳೂರಿನಲ್ಲಿ ಪ್ರಕರಣಗಳು ಕುಸಿತದ ವಿವರ: ಜೂನ್‌.1ರ ವರೆಗೆ ಬೆಂಗಳೂರು ಕೋವಿಡ್‌ 19 ಪ್ರಕರಣಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಜೂನ್‌.1ರ ಆರೋಗ್ಯ ಇಲಾಖೆಯ ವರದಿಯ ಪ್ರಕಾರ ಬೆಂಗಳೂರಿನಲ್ಲಿ ಒಟ್ಟು  ಸೋಂಕಿತರು 385 ಹಾಗೂ ಒಟ್ಟು ಸಕ್ರಿಯ ಪ್ರಕರಣಗಳು 136 ಇದ್ದವು. ಬೆಂಗಳೂರಿನ ನಂತರದ ಸ್ಥಾನದಲ್ಲಿ ಕಲಬುರಗಿ, ಯಾದಗಿರಿ, ಮಂಡ್ಯ ಹಾಗೂ ಉಡುಪಿ ಇತ್ತು.

ಈ ಜಿಲ್ಲೆಗಳಲ್ಲಿ ಅನುಕ್ರಮವಾಗಿ 305,285,285 ಹಾಗೂ 260ಜನ ಸೋಂಕಿತರಿದ್ದರು. ಜೂನ್‌.2ಕ್ಕೆ ಉಡುಪಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬೆಂಗಳೂರಿಗಿಂತ ಹೆಚ್ಚು ಸೋಂಕು ಪ್ರಕರಣಗಳು ದೃಢವಾದವು. ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿಯಿತು. ಇನ್ನು ಜೂನ್‌ 3ಕ್ಕೆ ಕಲಬುರಗಿ ಪ್ರಥಮ ಸ್ಥಾನ,  ಉಡುಪಿ ದ್ವಿತೀಯ ಸ್ಥಾನ ತಲುಪಿತು. ಜೂನ್‌ 4 ಮತ್ತು 5ಕ್ಕೆ ಮತ್ತೆ ಉಡುಪಿ ಮತ್ತು ಕಲಬುರಗಿ ಜಿಲ್ಲೆಗಳು ಪ್ರಥಮ ದ್ವಿತೀಯ ಸ್ಥಾನದಲ್ಲಿ ಮುಂದುವರಿದವು.

ಜೂನ್‌ 6ಕ್ಕೆ ಯಾದಗಿರಿ ಹಾಗೂ ಜೂನ್‌ 7ಕ್ಕೆ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ  ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರು ನಾಲ್ಕನೇ ಸ್ಥಾನಕ್ಕೆ ಕುಸಿಯಿತು. ಇನ್ನು ಜೂನ್‌ 8ಕ್ಕೆ ಈ ಜಿಲ್ಲೆಗಳಲ್ಲಿ ಸೋಂಕಿತರ ವಿವರ ಈ ರೀತಿ ಇದೆ. ಕಲಬುರಗಿಯಲ್ಲಿ 759, ಯಾದಗಿರಿ 581, ಬೀದರ್‌ 270, ಉಡುಪಿ 947 ಹಾಗೂ  ಬೆಂಗಳೂರಿನಲ್ಲಿ 493 ಜನರಲ್ಲಿ ಕೋವಿಡ್‌ 19 ದೃಢಪಟ್ಟಿದೆ. ಜೂನ್‌ 2ರ ನಂತರ ನಗರದಲ್ಲಿ ಹೆಚ್ಚು ಜನರಲ್ಲಿ ಪ್ರಕರಣಗಳು ದೃಢಪಡದ ಹಿನ್ನೆಲೆಯಲ್ಲಿ ಒಂದನೇ ಸ್ಥಾನದಿಂದ ಹಿಂದುಳಿಯುತ್ತಿದೆ.

* ಹಿತೇಶ್‌ ವೈ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.