ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ ಮೂಲದ ರಾಮಕೃಷ್ಣ ಪ್ರಭು

Team Udayavani, May 3, 2020, 6:15 AM IST

ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ: ಆಗ್ನೇಯ ಏಷ್ಯಾದಲ್ಲಿ ನೆಲೆಗೊಂಡ ಫೆಡರಲ್‌ ಸಾಂವಿಧಾನಿಕ ರಾಜಪ್ರಭುತ್ವ ಹೊಂದಿರುವ ಮಲೇಷ್ಯಾಕ್ಕೂ ಕೋವಿಡ್‌ 19 ಸೋಂಕು ಹರಡಿದೆ. ಇಲ್ಲಿನ ವೈದ್ಯಕೀಯ ರಂಗ ಕ್ಷಿಪ್ರಗತಿಯ ಕಾರ್ಯಾಚರಣೆಯಿಂದ ನಿಯಂತ್ರಣದಲ್ಲಿದೆ. ಕಳೆದೊಂದು ವಾರದಿಂದ ಸೋಂಕು ಪ್ರಕರಣಗಳು ಇಳಿಮುಖಗೊಳ್ಳುತ್ತಿವೆ ಎಂದು ಕೌಲಾಲಂಪುರದಲ್ಲಿ ಐಟಿ ಉದ್ಯಮಿಯಾಗಿರುವ ಉಡುಪಿ ಮೂಲದ ರಾಮಕೃಷ್ಣ ಪ್ರಭು ಹೇಳುತ್ತಾರೆ.

ಮನೆಯ ಯಜಮಾನನಿಗೆ ಅವಕಾಶ
ದೂರವಾಣಿ ಮೂಲಕ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾರ್ವಜನಿಕ ನಿರ್ಬಂಧ, ಹೊರಗಡೆ ಚಲಿಸದಂತೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಎಂಒ ಮಲೇಷ್ಯಾ ಲಾಕ್‌ಡೌನ್‌ ಆದೇಶ ಹೊರಡಿಸಿದೆ. ಲಾಕ್‌ಡೌನ್‌ ಅವಧಿ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಇರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮನೆಯ ಯಜಮಾನ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಕಚೇರಿಗಳು, ಕೈಗಾರಿಕೆ ಇತ್ಯಾದಿಗಳು ಮುಚ್ಚಿವೆ.

ನಿಯಂತ್ರಣ ಉಲ್ಲಂಘಿಸುವಂತಿಲ್ಲ
ವಿದೇಶಿಯರಿಗೂ ಮನೆಯೊಳಗೆ ಇರುವಂತೆ ಷರತ್ತು ವಿಧಿಸಿದೆ. ಹೊರಗೆ ಬಂದವರಿಗೆ ದಂಡ ವಿಧಿಸಲಾಗುತ್ತದೆ. ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಬಿಟ್ಟು ಬೇರೆ ಯಾವುದಕ್ಕೂ ನಾವು ಹೊರಗೆ ಹೋಗಲು ಸಾಧ್ಯವಿಲ್ಲ. ಯಾರಾದರೂ ಆದೇಶವನ್ನು ಉಲ್ಲಂಘಿಸಿದರೆ ಪೊಲೀಸರು ಬಂಧಿಸಿ ದಂಡ ವಿಧಿಸುತ್ತಾರೆ.

ಸೋಂಕು ಇಳಿಮುಖ
ಜನರು ಸ್ವಯಂ ಜಾಗೃತಿ ಮೂಲಕ ಜನರು ಆರೋಗ್ಯ ಇಲಾಖೆ ಜತೆ ಕೈ ಜೋಡಿಸುತ್ತಿದ್ದಾರೆ. ಆರಂಭದಲ್ಲಿ ದಿನವೊಂದಕ್ಕೆ 500-600 ಪ್ರಕರಣಗಳು ಕಂಡುಬರುತ್ತಿದ್ದರೆ ವಾರದಿಂದ 200ರ ಆಸುಪಾಸಿಗೆ ಇಳಿದಿದೆ.

ಸಮಾವೇಶ ಇಲ್ಲಿಯೂ ನಡೆದಿತ್ತು
ದಿಲ್ಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲಿ ಜಮಾಅತ್‌ ಸಮಾವೇಶ ಮಾದರಿಯಲ್ಲೇ ಮಲೇಷ್ಯಾ ರಾಜಧಾನಿ ಕೌಲಾಲಂಪುರದಲ್ಲಿಯೂ ಫೆ. 27ರಿಂದ ಮಾರ್ಚ್‌1ರ ವರೆಗೆ ತಬ್ಲಿ ಜಮಾತ್‌ ಸಮಾವೇಶ ನಡೆದಿತ್ತು. 1,500 ವಿದೇಶಿಯರ ಸಹಿತ 16,000 ಅನುಯಾಯಿಗಳು ಭಾಗವಹಿಸಿದ್ದರು. ಅನಂತರ ದೇಶದಲ್ಲಿ ಕೋವಿಡ್‌ 19 ಹೆಚ್ಚಳವಾಗಿದೆ ಅನ್ನುವುದನ್ನು ಜನ ಆಡಿಕೊಳ್ಳುತ್ತಿದ್ದರು. ಆದರೇ ಅದಕ್ಕೆ ಯಾವುದೇ ಪುರಾವೆಗಳಿಲ್ಲ.

ಕೆಟ್ಟ ಮೇಲೆ ಬುದ್ಧಿ
ಭಾರತದ ಬೃಹತ್‌ ಭೌಗೋಳಿಕ ಪ್ರದೇಶವನ್ನು ಗಮನಿಸಿದರೆ ನಾವು ಈ ಯುದ್ಧದಲ್ಲಿ ಉಳಿಯಲು ಭಾರೀ ಹೋರಾಟ ನಡೆಸಬೇಕಾಗುತ್ತದೆ. ಸೋಂಕು ಅಥವಾ ಸಾವು-ನೋವುಗಳ ವಿಷಯದಲ್ಲಿ ನಮ್ಮ ದೇಶದ ಮೇಲೆ ಇತರ ದೇಶಗಳಂತೆ ಪರಿಣಾಮ ಬೀರದ ಕಾರಣ ನಾವು ಅದೃಷ್ಟವಂತರು. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ವ್ಯವಸ್ಥೆಗೊಳಿಸುವುದು ಕಷ್ಟ. ಜನರೇ ಸ್ವಯಂ ಜಾಗೃತರಾಗಬೇಕು. ಅರಿವು ಮೂಡಿಲ್ಲ ಎಂದಾದರೆ “ಕೆಟ್ಟ ಮೇಲೆ ಬುದ್ಧಿ’ ಅನ್ನುತ್ತಾರಲ್ಲ. ಹಾಗಾಗಲಿದೆ ನಮ್ಮ ಜನರ ಸ್ಥಿತಿ.
– ರಾಮಕೃಷ್ಣ ಪ್ರಭು,
ಮಲೇಷ್ಯಾ ಉದ್ಯೋಗಿ

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.