ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಯಲ್ಲೇ ಚುಚ್ಚುಮದ್ದು


Team Udayavani, Apr 16, 2020, 5:40 PM IST

ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಯಲ್ಲೇ ಚುಚ್ಚುಮದ್ದು

ಬೆಳ್ತಂಗಡಿ: ಕೋವಿಡ್ ವೈರಸ್‌ನಿಂದಾಗಿ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗೆ ವಿವಿಧ ಹಂತಗಳಲ್ಲಿ ಚುಚ್ಚುಮದ್ದು ನೀಡುವ ವ್ಯವಸ್ಥೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿತ್ತು. ಜಿಲ್ಲೆಯಾದ್ಯಂತ ಹೆತ್ತವರು ದುಬಾರಿ ದರ ತೆತ್ತು ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಿದ್ದರಿಂದ ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಗಳಲ್ಲೇ ಚುಚ್ಚುಮದ್ದು ನೀಡಲಾಗುತ್ತಿದೆ.

ಚುಚ್ಚುಮದ್ದು ಒಂದು ತಿಂಗಳ ಅಂತರದಲ್ಲಿ ನೀಡಬಹುದಾಗಿದ್ದರೂ ಗ್ರಾಮೀಣ ಭಾಗದ ಜನರು ಮಾಹಿತಿ ಕೊರತೆಯಿಂದ ಖಾಸಗಿ ವೈದ್ಯರ ಬಳಿ ತೆರಳುತ್ತಿದ್ದಾರೆ. ಪರಿಸ್ಥಿತಿ ಲಾಭ ಪಡೆದು ದುಬಾರಿ ಮೊತ್ತಕ್ಕೆ ಚುಚ್ಚುಮದ್ದು ನೀಡುತ್ತಿರುವ ಆರೋಪ ವ್ಯಕ್ತವಾಗಿದೆ.

ಮಗು ಹುಟ್ಟಿದ 24 ಗಂಟೆಯೊಳಗೆ ಬಿಸಿಜಿ (0.05 ಎಂಎಲ್‌), ಹೆಪಟೈಟಿಸ್‌ ಬಿ (0.5 ಎಂಎಲ್‌) ಆಸ್ಪತ್ರೆಯಲ್ಲೇ ನೀಡಲಾಗುತ್ತಿದೆ. ಬಳಿಕ ವಿವಿಧ ಹಂತಗಳಲ್ಲಿ ಆ್ಯಂಟಿಮೈಕ್ರೋ ಬ್ಯಾಕ್ಟೀರಿಯಾ, ಪೆಪ್ಟೀರಿಯಾ ಹಾಗೂ ಇತರೆ ಲಸಿಕೆ ನೀಡಬೇಕು. ಸರಕಾರಿ ಆಸ್ಪತ್ರೆಯಲ್ಲಿ ಇವುಗಳು ಉಚಿತವಾಗಿವೆ. 15 ದಿನಗಳ ಹಸುಗೂಸಿಗೆ ಒಪಿವಿ ಸಿಂಗಲ್‌ ಡ್ರಾಪ್‌, 6ರಿಂದ 14 ವಾರಗಳ ಮಗುವಿಗೆ ಪೆಂಟಾವಾಲೆಂಟ್‌ 1.2.3 (0.5ಎಂಲ್‌) ಚುಚ್ಚುಮದ್ದು, 9 ತಿಂಗಳ ಮಗುವಿಗೆ ಮೀಸೆಲ್ಸ್‌ (0.5 ಎಂಎಲ್‌), 14 ತಿಂಗಳ ಮಗುವಿಗೆ ಒಪಿವಿ ಡಬಲ್‌ ಡ್ರಾಪ್‌ ಮತ್ತು ಮೊದಲ ಹಂತದ ಡಿಪಿಟಿ ಚುಚ್ಚುಮದ್ದು, 5 ವರ್ಷದ ಮಗುವಿಗೆ 2ನೇ ಹಂತದ ಡಿಪಿಟಿ ಚುಚ್ಚುಮದ್ದು ನೀಡಬೇಕು. ಇವು ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯ. ಆದರೆ, ಸದ್ಯ ಸರಕಾರಿ ಆಸ್ಪತ್ರೆಗಳಲ್ಲಿ ಚುಚ್ಚುಮದ್ದು ಹಾಗೂ ಲಸಿಕೆ ನೀಡುವುದನ್ನು ನಿಲ್ಲಿಸಿದ್ದರಿಂದ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು 2ರಿಂದ 4 ಸಾವಿರ ರೂ. ಪಡೆದು ಚುಚ್ಚುಮದ್ದು ನೀಡುತ್ತಿದ್ದಾರೆ ಎನ್ನುವ ಆರೋಪ ಹೆತ್ತವರಿಂದ ಕೇಳಿಬಂದಿದೆ.

ಸದ್ಯ ಪರಿಸ್ಥಿತಿ ಮನಗಂಡು ಗರ್ಭಿಣಿಯರಿಗೆ ನೀಡುವ (ಖಛ), ನವಜಾತ ಶಿಶುಗಳಿಗೆ (ಹೆರಿಗೆ ಬಳಿಕ) ಬಿಸಿಜಿ, ಓರಲ್‌ ಪೋಲಿಯೋ ಹನಿ, ಹೆಪಟೈಟಿಸ್‌ ಬಿ.  ಇವುಗಳನ್ನು ಸರಕಾರಿ ಆಸ್ಪತ್ರೆಯಲ್ಲೇ ನೀಡಲು ಸೂಚಿಸಲಾಗಿದೆ. ಪ್ರತಿ ಗುರುವಾರ ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ನಡೆಸುತ್ತಿದ್ದ ಲಸಿಕಾ ಶಿಬಿರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ತಿಂಗಳಿಗೆ ಸರಾಸರಿ 2,500 ಶಿಶು ಜನನ
ಜಿಲ್ಲೆಯಲ್ಲಿ ಒಟ್ಟು 66 ಪ್ರಾಥಮಿಕ ಆರೋಗ್ಯ ಕೇಂದ್ರ, 12 ನಗರ ಪ್ರಾಥಮಿಕ ಆರೋಗ್ಯ, 6 ಸಮುದಾಯ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆ, 2 ಜಿಲ್ಲಾ ಆಸ್ಪತ್ರೆಗಳಿವೆ. ಜಿಲ್ಲೆಯಲ್ಲಿ ಪ್ರತಿ ತಿಂಗಳು ಸರಾಸರಿ 2,500 ಶಿಶುಗಳು ಜನಿಸುತ್ತವೆ. ವರ್ಷದಲ್ಲಿ ಸುಮಾರು 30,000 ಶಿಶು ಜನನವಾಗುತ್ತಿದೆ.

ಆತಂಕ ಬೇಡ
ಸರಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಹಾಗೂ ಗರ್ಭಿಣಿಯರಿಗೆ ಅಗತ್ಯವಾಗಿ ಚುಚ್ಚುಮದ್ದು ನೀಡಲಾಗಿದೆ. 16ರಿಂದ 24 ತಿಂಗಳ ಮಧ್ಯೆ ಹಾಗೂ 5 ವರ್ಷಗಳ ಒಳಗಾಗಿ ನೀಡುವ ಡೋಸೇಜನ್ನು ಕೊರೊನಾ ಹಿನ್ನೆಲೆ ಸದ್ಯ ಮುಂದೂಡಲಾಗಿದೆ. ಹೆತ್ತವರು ಆತಂತಕ್ಕೆ ಒಳಗಾಗಬೇಕಿಲ್ಲ. ಔಷಧ ನೀಡಲು ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶವಿದೆ. ಲಾಕ್‌ಡೌನ್‌ ಮುಗಿದ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿ ಚುಚ್ಚುಮದ್ದು ಪಡೆಯಬಹದು.
– ಡಾ| ರಾಮಚಂದ್ರ ಬಾಯರಿ, ಆರೋಗ್ಯಾಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.