BEML: ಬೆಮೆಲ್ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ
ಹಿಂದಿ, ಇಂಗ್ಲಿಷ್ನಲ್ಲಿಂದು ಆನ್ಲೈನ್ ಪರೀಕ್ಷೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು
Team Udayavani, Dec 10, 2023, 12:52 AM IST
ಕೋಲಾರ: ಬೆಮೆಲ್ ಕರ್ನಾಟಕ ವೃಂದದ ಸಿ ಮತ್ತು ಡಿ ವರ್ಗದ 119 ಹುದ್ದೆಗಳಿಗೆ ಸೆಪ್ಟಂಬರ್ ನಲ್ಲಿ ಅರ್ಜಿ ಆಹ್ವಾನಿಸಿರುವ ಬೆಮೆಲ್ ಸಂಸ್ಥೆಯು ಡಿ. 10ರಂದು ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಆನ್ಲೈನ್ ಪರೀಕ್ಷೆ ನಡೆಸುವ ಮೂಲಕ ಕನ್ನಡಿಗರನ್ನು ಈ ಹುದ್ದೆಗಳಿಂದ ದೂರ ಇರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಸರೋಜಿನಿ ಮಹಿಷಿ ವರದಿ ಅನ್ವಯ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಸ್ಥಳೀಯ ಕನ್ನಡಿಗರಿಗೆ ಮೀಸಲಿಡಬೇಕೆಂಬ ನಿಯಮವಿದ್ದರೂ ಇದನ್ನು ಧಿಕ್ಕರಿಸಿ ಆನ್ಲೈನ್ ಪರೀಕ್ಷೆಗಳನ್ನು ಕೇವಲ ಹೊಸದಿಲ್ಲಿ, ಮುಂಬಯಿ ಮತ್ತು ಕೋಲ್ಕತಾದವರಿಗೆ ಅನು
ಕೂಲವಾಗುವಂತೆ ಅಧಿಸೂಚನೆ ಹೊರಡಿಸಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೇ ಪರೀಕ್ಷೆ ನಡೆಸಲಾಗುತ್ತಿದೆ.
ಬೆಮೆಲ್ ಕರ್ನಾಟಕ ವೃಂದದ ಘಟಕಗಳು ಕೆಜಿಎಫ್, ಮೈಸೂರು, ಬೆಂಗಳೂರಿನಲ್ಲಿದ್ದು, 119 ಹುದ್ದೆಗಳಿಗೆ ಹಿಂದಿ, ಇಂಗ್ಲಿಷ್ನಲ್ಲಿ ಮಾತ್ರವೇ ಪರೀಕ್ಷೆ ನಡೆಸುತ್ತಿರುವುದರಿಂದ ಕನ್ನಡಿಗರನ್ನು ಈ ಹುದ್ದೆಗಳಿಂದ ದೂರ ಇಡುವ ಹುನ್ನಾರ ನಡೆದಿರುವುದು ಸ್ಪಷ್ಟವಾಗಿದೆ. ಕೋಲಾರ ಜಿಲ್ಲೆಯ ಕನ್ನಡ ಶಕ್ತಿ ಕೇಂದ್ರದ ಜಿಲ್ಲಾಧ್ಯಕ್ಷ ಬಾ.ಹಾ. ಶೇಖರಪ್ಪ ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಡಾ| ಸಂತೋಷ ಹಾನಗಲ್ಲ ಅವರು ಬೆಮೆಲ್ ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಡಿ. 7ರಂದು ಪತ್ರ ಬರೆದು, ಸಿ ಮತ್ತು ಡಿ ವರ್ಗದ ಹುದ್ದೆಗಳಿಗೆ ಕರೆದಿರುವ 119 ಉದ್ಯೋಗಗಳಲ್ಲಿ
ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದರು. ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ನಡೆಸಬೇಕೆಂದು ಸೂಚಿಸಿ, ಈ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಕೋರಿದ್ದಾರೆ.
ಬೆಮೆಲ್ ಈಗ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪರೀಕ್ಷೆ ನಡೆಸಲು ಹೊರಡಿಸಿರುವ ಅಧಿಸೂಚನೆಯನ್ನು ಮುಂದೂಡಿ ಕನ್ನಡದಲ್ಲಿಯೂ ಪರೀಕ್ಷೆ ನಡೆಸಿ ಕನ್ನಡ ಉದ್ಯೋಗಾ ಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕು.
-ಬಾ.ಹಾ. ಶೇಖರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಶಕ್ತಿ ಕೇಂದ್ರ, ಕೋಲಾರ.
ಡಾ.| ಸರೋಜಿನಿ ಮಹಿಷಿ ವರದಿ ಅನ್ವಯ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಉದ್ಯೋಗದಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ದೊರಕದೆ ಹೋದಲ್ಲಿ ಪ್ರದೇಶವಾರು ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
-ಡಾ| ಸಂತೋಷ ಹಾನಗಲ್ಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ
~ ಕೆ.ಎಸ್. ಗಣೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?